ಕ್ರೀಡೆ

SA20: ಚಾಂಪಿಯನ್ಸ್ ಪಟ್ಟ ಅಲಂಕರಿಸಿದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್

ನ್ಯೂಲೆಂಡ್ಸ್‌: ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಎಡನ್‌ ಮಾರ್ಕ್ರಂ ನಾಯಕತ್ವದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ ಚಾಂಪಿಯನ್ಸ್​ ಆಗಿ ಹೊರಹೊಮ್ಮಿದೆ.

ಕೇಪ್​ಟೌನ್​​ನ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಡರ್ಬನ್ ಸೂಪರ್ ಜೈಂಟ್ಸ್​ ವಿರುದ್ಧ 89 ರನ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಐಡೆನ್ ಮಾರ್ಕ್ರಾಮ್ ಪಡೆ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಟಾಸ್ ಗೆದ್ದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಇನಿಂಗ್ಸ್ ಆರಂಭಿಸಿದ ಜೋರ್ಡನ್ ಹರ್ಮನ್ 26 ಎಸೆತಗಳಲ್ಲಿ 42 ರನ್​ ಬಾರಿಸುವ ಮೂಲಕ ಸನ್​ರೈಸರ್ಸ್​ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು. ಮತ್ತೊಂದೆಡೆ ಡೇವಿಡ್ ಮಲಾನ್ ಕೇವಲ 6 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು.

ಈ ವೇಳೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಟಾಮ್ ಅಬೆಲ್ 34 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 55 ರನ್​ ಚಚ್ಚಿದ್ದರು. ಇನ್ನು ನಾಯಕ ಐಡೆನ್ ಮಾರ್ಕ್ರಾಮ್ 26 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 42 ರನ್ ಬಾರಿಸಿದರು.

ಅಂತಿಮ ಹಂತದಲ್ಲಿ ಅಬ್ಬರಿಸಿದ ಯುವ ದಾಂಡಿಗ ಟ್ರಿಸ್ಟನ್ ಸ್ಟಬ್ಸ್ 30 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 56 ರನ್​ ಸಿಡಿಸಿದರು. ಈ ಮೂಲಕ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 204 ರನ್ ಕಲೆಹಾಕಿತು.

205 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಡರ್ಬನ್ ಸೂಪರ್ ಜೈಂಟ್ಸ್ ತಂಡವು ಯಾವುದೇ ಹಂತದಲ್ಲೂ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ಬೌಲರ್​ಗಳ ವಿರುದ್ಧ ಮೇಲುಗೈ ಸಾಧಿಸಲಾಗಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಸ್ಟಾರ್ ಆಟಗಾರ ಕ್ವಿಂಟನ್ ಡಿಕಾಕ್ 3 ರನ್ ಬಾರಿಸಿ ವಾರೊಲ್​ಗೆ ವಿಕೆಟ್​ ಒಪ್ಪಿಸಿದರೆ, ಮ್ಯಾಥ್ಯೂ ಬ್ರೀಟ್​​ಝ್ಕಿ 18 ರನ್​ಗಳಿಸಲು 27 ಎಸೆತಗಳನ್ನು ತೆಗೆದುಕೊಂಡಿದ್ದರು.

ಈ ಹಂತದಲ್ಲಿ ದಾಳಿಗಿಳಿದ ಮಾರ್ಕೊ ಯಾನ್ಸೆನ್ ಸ್ಮಟ್ಸ್ (1), ಭಾನುಕಾ ರಾಜಪಕ್ಸೆ (0) ವಿಕೆಟ್ ಪಡೆದ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು. ಇನ್ನು ಸ್ಪೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್ ಅವರನ್ನು ಶೂನ್ಯಕ್ಕೆ ಔಟ್ ಮಾಡುವಲ್ಲಿ ಬಾರ್ಟ್​ಮ್ಯಾನ್ ಯಶಸ್ವಿಯಾದರು. ಕೇವಲ 65 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡ ಡರ್ಬನ್ ತಂಡವು ಆ ಬಳಿಕ ಚೇತರಿಸಿಕೊಳ್ಳಲೇ ಇಲ್ಲ.

ಅಂತಿಮವಾಗಿ 17 ಓವರ್​ಗಳಲ್ಲಿ 115 ರನ್​ಗಳಿಗೆ ಆಲೌಟ್ ಆಗುವ ಮೂಲಕ ಡರ್ಬನ್ ಸೂಪರ್ ಜೈಂಟ್ಸ್ ತಂಡವು 89 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡವು 2ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.

ಪಂದ್ಯ ಶ್ರೇಷ್ಠ: ಟಾಮ್‌ ಎಬೆಲ್‌

ಸರಣಿ ಶ್ರೇಷ್ಠ: ಎನ್ರಿಚ್‌ ಕ್ಲಾಸೆನ್‌

andolanait

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

2 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

14 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

15 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

15 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

15 hours ago