ಕ್ರೀಡೆ

ಏಕದಿನ ವಿಶ್ವಕಪ್‌ನಲ್ಲಿ ಸಚಿನ್‌-ಎಬಿಡಿ ದಾಖಲೆ ಸರಿಗಟ್ಟಿದ ಹಿಟ್‌ ಮ್ಯಾನ್‌.!

ಬೆಂಗಳೂರು : ಏಕದಿನ ವಿಶ್ವಕಪ್‌ ಟೂರ್ನಿಯ 45ನೇ ಪಂದ್ಯದಲ್ಲಿ ಭಾರತ ಮತ್ತು ನೆದರ್‌ಲ್ಯಾಂಡ್ಸ್‌ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ನಾಯಕ ರೊಹಿತ್‌ ಶರ್ಮಾ ಮತ್ತೊಂದು ಮೈಲಿಗಲ್ಲಿಗೆ ಸೇರಿದ್ದಾರೆ.

ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಈ ವಿಶೇಷ ಎರಡು ದಾಖಲೆ ಮಾಡಿದ್ದು, ಗಾಡ್‌ ಆಫ್‌ ಕ್ರಿಕೆಟ್‌ ಸಚಿನ್‌ ತೆಂಡುಲ್ಕರ್‌ ಹಾಗೂ ಮಿಸ್ಟರ್‌ 360 ಖ್ಯಾತಿಯ ಎಬಿಡಿ ಅವರ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.

ನೆದರ್‌ಲ್ಯಾಂಡ್‌ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ಅರ್ಧ ಶತಕ ಬಾರಿಸಿರುವ ಹಿಟ್‌ ಮ್ಯಾನ್‌ ವರ್ಲ್ಡ್‌ ಕಪ್‌ ಟೂರ್ನಿಯೊಂದರಲ್ಲಿ ಸತತ ಎರಡು ಬಾರಿ 500+ ರನ್‌ ದಾಖಲಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ದಾಖಲೆಯನ್ನು ರೋಹಿತ್‌ ಶರ್ಮಾ 2019 ಮತ್ತು 2023 ರಲ್ಲಿ ಬಾರಿಸಿದ್ದಾರೆ.

ಈ ಹಿಂದೆ ಸಚಿನ್‌ ತೆಂಡುಲ್ಕರ್‌ ಅವರು 1996 ಮತ್ತು 2003 ರಲ್ಲಿ 500ಕ್ಕೂ ಅಧಿಕ ರನ್‌ ಬಾರಿಸಿದ್ದು ಈವರೆಗಿನ ದಾಖಲೆಯಾಗಿತ್ತು.

ಈ ದಾಖಲೆಯೊಂದಿಗೆ ಮತ್ತೊಂದು ದಾಖಲೆ ಹಿಟ್‌ ಮ್ಯಾನ್‌ ಹೆಸರಿಗೆ ದಾಖಲಾಗಿದೆ ಅದು ವರ್ಷವೊಂದರಲ್ಲಿ ದಾಖಲೆಯ ಸಿಕ್ಸರ್‌ ಗಳಿಕೆಯ ಗರಿ ರೋಹಿತ್‌ ಪಾಲಾಗಿದೆ. ಇದಕ್ಕೂ ಮೊದಲು 360 ಖ್ಯಾತಿಯ ಎಬಿ ಡಿವಿಲಿಯರ್ಸ್‌ ಅವರು 2015ರಲ್ಲಿ ಗರಿಷ್ಠ 58 ಸಿಕ್ಸರ್‌ ಬಾರಿಸಿದ್ದು ದಾಖಲೆಯಾಗಿತ್ತು, ಇದನ್ನು ಮುರಿದ ರೋಹಿತ್‌ ಶರ್ಮಾ ದಾಖಲೆಯ 60 ಸಿಕ್ಸರ್‌ ಸಿಡಿಸಿ ತಮ್ಮ ಹೆಸರಿಗೆ ಈ ದಾಖಲೆಯನ್ನು ನೋಂದಾಯಿಸಿಕೊಂಡಿದ್ದಾರೆ.

 

andolanait

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

7 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

8 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

10 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

11 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

11 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

11 hours ago