ಕ್ರೀಡೆ

ಏಕದಿನ ವಿಶ್ವಕಪ್‌ನಲ್ಲಿ ಸಚಿನ್‌-ಎಬಿಡಿ ದಾಖಲೆ ಸರಿಗಟ್ಟಿದ ಹಿಟ್‌ ಮ್ಯಾನ್‌.!

ಬೆಂಗಳೂರು : ಏಕದಿನ ವಿಶ್ವಕಪ್‌ ಟೂರ್ನಿಯ 45ನೇ ಪಂದ್ಯದಲ್ಲಿ ಭಾರತ ಮತ್ತು ನೆದರ್‌ಲ್ಯಾಂಡ್ಸ್‌ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ನಾಯಕ ರೊಹಿತ್‌ ಶರ್ಮಾ ಮತ್ತೊಂದು ಮೈಲಿಗಲ್ಲಿಗೆ ಸೇರಿದ್ದಾರೆ.

ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಈ ವಿಶೇಷ ಎರಡು ದಾಖಲೆ ಮಾಡಿದ್ದು, ಗಾಡ್‌ ಆಫ್‌ ಕ್ರಿಕೆಟ್‌ ಸಚಿನ್‌ ತೆಂಡುಲ್ಕರ್‌ ಹಾಗೂ ಮಿಸ್ಟರ್‌ 360 ಖ್ಯಾತಿಯ ಎಬಿಡಿ ಅವರ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.

ನೆದರ್‌ಲ್ಯಾಂಡ್‌ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ಅರ್ಧ ಶತಕ ಬಾರಿಸಿರುವ ಹಿಟ್‌ ಮ್ಯಾನ್‌ ವರ್ಲ್ಡ್‌ ಕಪ್‌ ಟೂರ್ನಿಯೊಂದರಲ್ಲಿ ಸತತ ಎರಡು ಬಾರಿ 500+ ರನ್‌ ದಾಖಲಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ದಾಖಲೆಯನ್ನು ರೋಹಿತ್‌ ಶರ್ಮಾ 2019 ಮತ್ತು 2023 ರಲ್ಲಿ ಬಾರಿಸಿದ್ದಾರೆ.

ಈ ಹಿಂದೆ ಸಚಿನ್‌ ತೆಂಡುಲ್ಕರ್‌ ಅವರು 1996 ಮತ್ತು 2003 ರಲ್ಲಿ 500ಕ್ಕೂ ಅಧಿಕ ರನ್‌ ಬಾರಿಸಿದ್ದು ಈವರೆಗಿನ ದಾಖಲೆಯಾಗಿತ್ತು.

ಈ ದಾಖಲೆಯೊಂದಿಗೆ ಮತ್ತೊಂದು ದಾಖಲೆ ಹಿಟ್‌ ಮ್ಯಾನ್‌ ಹೆಸರಿಗೆ ದಾಖಲಾಗಿದೆ ಅದು ವರ್ಷವೊಂದರಲ್ಲಿ ದಾಖಲೆಯ ಸಿಕ್ಸರ್‌ ಗಳಿಕೆಯ ಗರಿ ರೋಹಿತ್‌ ಪಾಲಾಗಿದೆ. ಇದಕ್ಕೂ ಮೊದಲು 360 ಖ್ಯಾತಿಯ ಎಬಿ ಡಿವಿಲಿಯರ್ಸ್‌ ಅವರು 2015ರಲ್ಲಿ ಗರಿಷ್ಠ 58 ಸಿಕ್ಸರ್‌ ಬಾರಿಸಿದ್ದು ದಾಖಲೆಯಾಗಿತ್ತು, ಇದನ್ನು ಮುರಿದ ರೋಹಿತ್‌ ಶರ್ಮಾ ದಾಖಲೆಯ 60 ಸಿಕ್ಸರ್‌ ಸಿಡಿಸಿ ತಮ್ಮ ಹೆಸರಿಗೆ ಈ ದಾಖಲೆಯನ್ನು ನೋಂದಾಯಿಸಿಕೊಂಡಿದ್ದಾರೆ.

 

andolanait

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

7 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

8 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

8 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

8 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

8 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

8 hours ago