ಕ್ರೀಡೆ

ಏಕದಿನ ವಿಶ್ವಕಪ್‌ನಲ್ಲಿ ಸಚಿನ್‌-ಎಬಿಡಿ ದಾಖಲೆ ಸರಿಗಟ್ಟಿದ ಹಿಟ್‌ ಮ್ಯಾನ್‌.!

ಬೆಂಗಳೂರು : ಏಕದಿನ ವಿಶ್ವಕಪ್‌ ಟೂರ್ನಿಯ 45ನೇ ಪಂದ್ಯದಲ್ಲಿ ಭಾರತ ಮತ್ತು ನೆದರ್‌ಲ್ಯಾಂಡ್ಸ್‌ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ನಾಯಕ ರೊಹಿತ್‌ ಶರ್ಮಾ ಮತ್ತೊಂದು ಮೈಲಿಗಲ್ಲಿಗೆ ಸೇರಿದ್ದಾರೆ.

ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಈ ವಿಶೇಷ ಎರಡು ದಾಖಲೆ ಮಾಡಿದ್ದು, ಗಾಡ್‌ ಆಫ್‌ ಕ್ರಿಕೆಟ್‌ ಸಚಿನ್‌ ತೆಂಡುಲ್ಕರ್‌ ಹಾಗೂ ಮಿಸ್ಟರ್‌ 360 ಖ್ಯಾತಿಯ ಎಬಿಡಿ ಅವರ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.

ನೆದರ್‌ಲ್ಯಾಂಡ್‌ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ಅರ್ಧ ಶತಕ ಬಾರಿಸಿರುವ ಹಿಟ್‌ ಮ್ಯಾನ್‌ ವರ್ಲ್ಡ್‌ ಕಪ್‌ ಟೂರ್ನಿಯೊಂದರಲ್ಲಿ ಸತತ ಎರಡು ಬಾರಿ 500+ ರನ್‌ ದಾಖಲಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ದಾಖಲೆಯನ್ನು ರೋಹಿತ್‌ ಶರ್ಮಾ 2019 ಮತ್ತು 2023 ರಲ್ಲಿ ಬಾರಿಸಿದ್ದಾರೆ.

ಈ ಹಿಂದೆ ಸಚಿನ್‌ ತೆಂಡುಲ್ಕರ್‌ ಅವರು 1996 ಮತ್ತು 2003 ರಲ್ಲಿ 500ಕ್ಕೂ ಅಧಿಕ ರನ್‌ ಬಾರಿಸಿದ್ದು ಈವರೆಗಿನ ದಾಖಲೆಯಾಗಿತ್ತು.

ಈ ದಾಖಲೆಯೊಂದಿಗೆ ಮತ್ತೊಂದು ದಾಖಲೆ ಹಿಟ್‌ ಮ್ಯಾನ್‌ ಹೆಸರಿಗೆ ದಾಖಲಾಗಿದೆ ಅದು ವರ್ಷವೊಂದರಲ್ಲಿ ದಾಖಲೆಯ ಸಿಕ್ಸರ್‌ ಗಳಿಕೆಯ ಗರಿ ರೋಹಿತ್‌ ಪಾಲಾಗಿದೆ. ಇದಕ್ಕೂ ಮೊದಲು 360 ಖ್ಯಾತಿಯ ಎಬಿ ಡಿವಿಲಿಯರ್ಸ್‌ ಅವರು 2015ರಲ್ಲಿ ಗರಿಷ್ಠ 58 ಸಿಕ್ಸರ್‌ ಬಾರಿಸಿದ್ದು ದಾಖಲೆಯಾಗಿತ್ತು, ಇದನ್ನು ಮುರಿದ ರೋಹಿತ್‌ ಶರ್ಮಾ ದಾಖಲೆಯ 60 ಸಿಕ್ಸರ್‌ ಸಿಡಿಸಿ ತಮ್ಮ ಹೆಸರಿಗೆ ಈ ದಾಖಲೆಯನ್ನು ನೋಂದಾಯಿಸಿಕೊಂಡಿದ್ದಾರೆ.

 

andolanait

Recent Posts

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

40 mins ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

1 hour ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

2 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

3 hours ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

6 hours ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

6 hours ago