ಕ್ರೀಡೆ

ಐಸಿಸಿ ಏಕದಿನ ವಿಶ್ವಕಪ್ 2023ರ ಜಾಗತಿಕ ರಾಯಭಾರಿಯಾಗಿ ಸಚಿನ್ ತೆಂಡೂಲ್ಕರ್ ಆಯ್ಕೆ

ನವದೆಹಲಿ : ಗುರುವಾರದಿಂದ ಅಹಮದಾಬಾದ್ ನಲ್ಲಿ ಪ್ರಾರಂಭವಾಗಲಿರುವ ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್ ನ ಜಾಗತಿಕ ರಾಯಭಾರಿಯನ್ನಾಗಿ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅವರನ್ನು ಐಸಿಸಿ ಆಯ್ಕೆ ಮಾಡಿದೆ. ತಮ್ಮ ವೈಭವಯುತ ಕ್ರಿಕೆಟ್ ಜೀವನದಲ್ಲಿ ಆರು ವಿಶ್ವಕಪ್ ಅರ್ಧ ಶತಕಗಳನ್ನು ಗಳಿಸಿರುವ ಸಚಿನ್ ತೆಂಡೂಲ್ಕರ್, ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ನಡುವೆ ಪ್ರಾರಂಭವಾಗಲಿರುವ ಆರಂಭಿಕ ಪಂದ್ಯಕ್ಕೂ ಮುನ್ನ ವಿಶ್ವಕಪ್ ಟ್ರೋಫಿಯೊಂದಿಗೆ ಮೈದಾನವನ್ನು ಪ್ರವೇಶಿಸುವ ಮೂಲಕ ವಿಶ್ವಕಪ್ ಕ್ರೀಡಾಕೂಟ ಪ್ರಾರಂಭವಾಗಿದೆ ಎಂದು ಸಾಂಕೇತಿಕವಾಗಿ ಪ್ರಚುರಪಡಿಸಲಿದ್ದಾರೆ ಎಂದು ndtv.com ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿನ್ ತೆಂಡೂಲ್ಕರ್, “1987ರ ವಿಶ್ವಕಪ್ ನಲ್ಲಿ ಬಾಲ್ ಬಾಯ್ ಆಗಿದ್ದ ನಾನು, ದೇಶವನ್ನು ಆರು ವಿಶ್ವಕಪ್ ಆವೃತ್ತಿಗಳಲ್ಲಿ ಪ್ರತಿನಿಧಿಸಿರುವುದರಿಂದ, ವಿಶ್ವಕಪ್ ಗಳಿಗೆ ನನ್ನ ಹೃದಯದಲ್ಲಿ ಎಂದಿಗೂ ವಿಶೇಷ ಸ್ಥಾನವಿದೆ. 2011ರಲ್ಲಿ ವಿಶ್ವಕಪ್ ಜಯಿಸಿದ್ದು ನನ್ನ ಕ್ರಿಕೆಟ್ ಪಯಣದಲ್ಲಿನ ಅತ್ಯಂತ ಹೆಮ್ಮೆಯ ಕ್ಷಣವಾಗಿದೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಹಲವಾರು ವಿಶೇಷ ತಂಡಗಳು ಹಾಗೂ ಆಟಗಾರರು ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ನಲ್ಲಿ ಕಠಿಣವಾಗಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಈ ಅದ್ಭುತ ಕ್ರೀಡಾಕೂಟವನ್ನು ನಾನು ರೋಮಾಂಚನದಿಂದ ಎದುರು ನೋಡುತ್ತಿದ್ದೇನೆ. ವಿಶ್ವಕಪ್ ನಂಥ ಮೈಲಿಗಲ್ಲು ಕ್ರೀಡಾಕೂಟಗಳು ಯುವಕರ ಮನಸ್ಸಿನಲ್ಲಿ ಕನಸುಗಳನ್ನು ಬಿತ್ತುತ್ತವೆ. ಈ ಬಾರಿಯ ವಿಶ್ವಕಪ್ ಆವೃತ್ತಿಯೂ ಯುವತಿಯರು ಹಾಗೂ ಯುವಕರಲ್ಲಿ ಕ್ರೀಡೆಯನ್ನು ಆಯ್ದುಕೊಳ್ಳಲು ಸ್ಫೂರ್ತಿಯಾಗಲಿ ಹಾಗೂ ಉನ್ನತ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುವಂತಾಗಲಿ” ಎಂದು ಸಚಿನ್ ತೆಂಡೂಲ್ಕರ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಹಾರೈಸಿದ್ದಾರೆ.

ಈ ಬಾರಿಯ ವಿಶ್ವಕಪ್ ಕ್ರೀಡಾಕೂಟಕ್ಕೆ ದಿಗ್ಗಜ ಕ್ರಿಕೆಟಿಗರಾದ ವೆಸ್ಟ್ ಇಂಡೀಸ್ ನ ವಿವಿಯನ್ ರಿಚರ್ಡ್ಸ್, ದಕ್ಷಿಣ ಆಫ್ರಿಕಾದ ಎಬಿ ಡಿ ವಿಲಿಯರ್ಸ್, ವಿಶ್ವಕಪ್ ಜಯಿಸಿದ ಇಂಗ್ಲೆಂಡ್ ತಂಡದ ನಾಯಕರಾಗಿದ್ದ ಇಯಾನ್ ಮಾರ್ಗನ್, ಆಸ್ಟ್ರೇಲಿಯಾದ ಆ್ಯರನ್ ಫಿಂಚ್, ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್, ನ್ಯೂಝಿಲೆಂಡ್ ನ ರಾಸ್ ಟೇಲರ್, ಭಾರತದ ಸುರೇಶ್ ರೈನಾ, ಮಹಿಳಾ ಭಾರತೀಯ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಹಾಗೂ ಪಾಕಿಸ್ತಾನದ ಆಲ್ ರೌಂಡರ್ ಮುಹಮ್ಮದ್ ಹಫೀಝ್ ಸಾಕ್ಷಿಯಾಗಲಿದ್ದಾರೆ.

andolanait

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

2 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

2 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

2 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

2 hours ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

2 hours ago