ಕ್ರೀಡೆ

ಐಸಿಸಿ ಏಕದಿನ ವಿಶ್ವಕಪ್ 2023ರ ಜಾಗತಿಕ ರಾಯಭಾರಿಯಾಗಿ ಸಚಿನ್ ತೆಂಡೂಲ್ಕರ್ ಆಯ್ಕೆ

ನವದೆಹಲಿ : ಗುರುವಾರದಿಂದ ಅಹಮದಾಬಾದ್ ನಲ್ಲಿ ಪ್ರಾರಂಭವಾಗಲಿರುವ ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್ ನ ಜಾಗತಿಕ ರಾಯಭಾರಿಯನ್ನಾಗಿ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅವರನ್ನು ಐಸಿಸಿ ಆಯ್ಕೆ ಮಾಡಿದೆ. ತಮ್ಮ ವೈಭವಯುತ ಕ್ರಿಕೆಟ್ ಜೀವನದಲ್ಲಿ ಆರು ವಿಶ್ವಕಪ್ ಅರ್ಧ ಶತಕಗಳನ್ನು ಗಳಿಸಿರುವ ಸಚಿನ್ ತೆಂಡೂಲ್ಕರ್, ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ನಡುವೆ ಪ್ರಾರಂಭವಾಗಲಿರುವ ಆರಂಭಿಕ ಪಂದ್ಯಕ್ಕೂ ಮುನ್ನ ವಿಶ್ವಕಪ್ ಟ್ರೋಫಿಯೊಂದಿಗೆ ಮೈದಾನವನ್ನು ಪ್ರವೇಶಿಸುವ ಮೂಲಕ ವಿಶ್ವಕಪ್ ಕ್ರೀಡಾಕೂಟ ಪ್ರಾರಂಭವಾಗಿದೆ ಎಂದು ಸಾಂಕೇತಿಕವಾಗಿ ಪ್ರಚುರಪಡಿಸಲಿದ್ದಾರೆ ಎಂದು ndtv.com ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿನ್ ತೆಂಡೂಲ್ಕರ್, “1987ರ ವಿಶ್ವಕಪ್ ನಲ್ಲಿ ಬಾಲ್ ಬಾಯ್ ಆಗಿದ್ದ ನಾನು, ದೇಶವನ್ನು ಆರು ವಿಶ್ವಕಪ್ ಆವೃತ್ತಿಗಳಲ್ಲಿ ಪ್ರತಿನಿಧಿಸಿರುವುದರಿಂದ, ವಿಶ್ವಕಪ್ ಗಳಿಗೆ ನನ್ನ ಹೃದಯದಲ್ಲಿ ಎಂದಿಗೂ ವಿಶೇಷ ಸ್ಥಾನವಿದೆ. 2011ರಲ್ಲಿ ವಿಶ್ವಕಪ್ ಜಯಿಸಿದ್ದು ನನ್ನ ಕ್ರಿಕೆಟ್ ಪಯಣದಲ್ಲಿನ ಅತ್ಯಂತ ಹೆಮ್ಮೆಯ ಕ್ಷಣವಾಗಿದೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಹಲವಾರು ವಿಶೇಷ ತಂಡಗಳು ಹಾಗೂ ಆಟಗಾರರು ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ನಲ್ಲಿ ಕಠಿಣವಾಗಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಈ ಅದ್ಭುತ ಕ್ರೀಡಾಕೂಟವನ್ನು ನಾನು ರೋಮಾಂಚನದಿಂದ ಎದುರು ನೋಡುತ್ತಿದ್ದೇನೆ. ವಿಶ್ವಕಪ್ ನಂಥ ಮೈಲಿಗಲ್ಲು ಕ್ರೀಡಾಕೂಟಗಳು ಯುವಕರ ಮನಸ್ಸಿನಲ್ಲಿ ಕನಸುಗಳನ್ನು ಬಿತ್ತುತ್ತವೆ. ಈ ಬಾರಿಯ ವಿಶ್ವಕಪ್ ಆವೃತ್ತಿಯೂ ಯುವತಿಯರು ಹಾಗೂ ಯುವಕರಲ್ಲಿ ಕ್ರೀಡೆಯನ್ನು ಆಯ್ದುಕೊಳ್ಳಲು ಸ್ಫೂರ್ತಿಯಾಗಲಿ ಹಾಗೂ ಉನ್ನತ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುವಂತಾಗಲಿ” ಎಂದು ಸಚಿನ್ ತೆಂಡೂಲ್ಕರ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಹಾರೈಸಿದ್ದಾರೆ.

ಈ ಬಾರಿಯ ವಿಶ್ವಕಪ್ ಕ್ರೀಡಾಕೂಟಕ್ಕೆ ದಿಗ್ಗಜ ಕ್ರಿಕೆಟಿಗರಾದ ವೆಸ್ಟ್ ಇಂಡೀಸ್ ನ ವಿವಿಯನ್ ರಿಚರ್ಡ್ಸ್, ದಕ್ಷಿಣ ಆಫ್ರಿಕಾದ ಎಬಿ ಡಿ ವಿಲಿಯರ್ಸ್, ವಿಶ್ವಕಪ್ ಜಯಿಸಿದ ಇಂಗ್ಲೆಂಡ್ ತಂಡದ ನಾಯಕರಾಗಿದ್ದ ಇಯಾನ್ ಮಾರ್ಗನ್, ಆಸ್ಟ್ರೇಲಿಯಾದ ಆ್ಯರನ್ ಫಿಂಚ್, ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್, ನ್ಯೂಝಿಲೆಂಡ್ ನ ರಾಸ್ ಟೇಲರ್, ಭಾರತದ ಸುರೇಶ್ ರೈನಾ, ಮಹಿಳಾ ಭಾರತೀಯ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಹಾಗೂ ಪಾಕಿಸ್ತಾನದ ಆಲ್ ರೌಂಡರ್ ಮುಹಮ್ಮದ್ ಹಫೀಝ್ ಸಾಕ್ಷಿಯಾಗಲಿದ್ದಾರೆ.

andolanait

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

35 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago