ಕ್ರೀಡೆ

ಐಸಿಸಿ ಏಕದಿನ ವಿಶ್ವಕಪ್ 2023ರ ಜಾಗತಿಕ ರಾಯಭಾರಿಯಾಗಿ ಸಚಿನ್ ತೆಂಡೂಲ್ಕರ್ ಆಯ್ಕೆ

ನವದೆಹಲಿ : ಗುರುವಾರದಿಂದ ಅಹಮದಾಬಾದ್ ನಲ್ಲಿ ಪ್ರಾರಂಭವಾಗಲಿರುವ ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್ ನ ಜಾಗತಿಕ ರಾಯಭಾರಿಯನ್ನಾಗಿ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅವರನ್ನು ಐಸಿಸಿ ಆಯ್ಕೆ ಮಾಡಿದೆ. ತಮ್ಮ ವೈಭವಯುತ ಕ್ರಿಕೆಟ್ ಜೀವನದಲ್ಲಿ ಆರು ವಿಶ್ವಕಪ್ ಅರ್ಧ ಶತಕಗಳನ್ನು ಗಳಿಸಿರುವ ಸಚಿನ್ ತೆಂಡೂಲ್ಕರ್, ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ನಡುವೆ ಪ್ರಾರಂಭವಾಗಲಿರುವ ಆರಂಭಿಕ ಪಂದ್ಯಕ್ಕೂ ಮುನ್ನ ವಿಶ್ವಕಪ್ ಟ್ರೋಫಿಯೊಂದಿಗೆ ಮೈದಾನವನ್ನು ಪ್ರವೇಶಿಸುವ ಮೂಲಕ ವಿಶ್ವಕಪ್ ಕ್ರೀಡಾಕೂಟ ಪ್ರಾರಂಭವಾಗಿದೆ ಎಂದು ಸಾಂಕೇತಿಕವಾಗಿ ಪ್ರಚುರಪಡಿಸಲಿದ್ದಾರೆ ಎಂದು ndtv.com ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿನ್ ತೆಂಡೂಲ್ಕರ್, “1987ರ ವಿಶ್ವಕಪ್ ನಲ್ಲಿ ಬಾಲ್ ಬಾಯ್ ಆಗಿದ್ದ ನಾನು, ದೇಶವನ್ನು ಆರು ವಿಶ್ವಕಪ್ ಆವೃತ್ತಿಗಳಲ್ಲಿ ಪ್ರತಿನಿಧಿಸಿರುವುದರಿಂದ, ವಿಶ್ವಕಪ್ ಗಳಿಗೆ ನನ್ನ ಹೃದಯದಲ್ಲಿ ಎಂದಿಗೂ ವಿಶೇಷ ಸ್ಥಾನವಿದೆ. 2011ರಲ್ಲಿ ವಿಶ್ವಕಪ್ ಜಯಿಸಿದ್ದು ನನ್ನ ಕ್ರಿಕೆಟ್ ಪಯಣದಲ್ಲಿನ ಅತ್ಯಂತ ಹೆಮ್ಮೆಯ ಕ್ಷಣವಾಗಿದೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಹಲವಾರು ವಿಶೇಷ ತಂಡಗಳು ಹಾಗೂ ಆಟಗಾರರು ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ನಲ್ಲಿ ಕಠಿಣವಾಗಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಈ ಅದ್ಭುತ ಕ್ರೀಡಾಕೂಟವನ್ನು ನಾನು ರೋಮಾಂಚನದಿಂದ ಎದುರು ನೋಡುತ್ತಿದ್ದೇನೆ. ವಿಶ್ವಕಪ್ ನಂಥ ಮೈಲಿಗಲ್ಲು ಕ್ರೀಡಾಕೂಟಗಳು ಯುವಕರ ಮನಸ್ಸಿನಲ್ಲಿ ಕನಸುಗಳನ್ನು ಬಿತ್ತುತ್ತವೆ. ಈ ಬಾರಿಯ ವಿಶ್ವಕಪ್ ಆವೃತ್ತಿಯೂ ಯುವತಿಯರು ಹಾಗೂ ಯುವಕರಲ್ಲಿ ಕ್ರೀಡೆಯನ್ನು ಆಯ್ದುಕೊಳ್ಳಲು ಸ್ಫೂರ್ತಿಯಾಗಲಿ ಹಾಗೂ ಉನ್ನತ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುವಂತಾಗಲಿ” ಎಂದು ಸಚಿನ್ ತೆಂಡೂಲ್ಕರ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಹಾರೈಸಿದ್ದಾರೆ.

ಈ ಬಾರಿಯ ವಿಶ್ವಕಪ್ ಕ್ರೀಡಾಕೂಟಕ್ಕೆ ದಿಗ್ಗಜ ಕ್ರಿಕೆಟಿಗರಾದ ವೆಸ್ಟ್ ಇಂಡೀಸ್ ನ ವಿವಿಯನ್ ರಿಚರ್ಡ್ಸ್, ದಕ್ಷಿಣ ಆಫ್ರಿಕಾದ ಎಬಿ ಡಿ ವಿಲಿಯರ್ಸ್, ವಿಶ್ವಕಪ್ ಜಯಿಸಿದ ಇಂಗ್ಲೆಂಡ್ ತಂಡದ ನಾಯಕರಾಗಿದ್ದ ಇಯಾನ್ ಮಾರ್ಗನ್, ಆಸ್ಟ್ರೇಲಿಯಾದ ಆ್ಯರನ್ ಫಿಂಚ್, ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್, ನ್ಯೂಝಿಲೆಂಡ್ ನ ರಾಸ್ ಟೇಲರ್, ಭಾರತದ ಸುರೇಶ್ ರೈನಾ, ಮಹಿಳಾ ಭಾರತೀಯ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಹಾಗೂ ಪಾಕಿಸ್ತಾನದ ಆಲ್ ರೌಂಡರ್ ಮುಹಮ್ಮದ್ ಹಫೀಝ್ ಸಾಕ್ಷಿಯಾಗಲಿದ್ದಾರೆ.

andolanait

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

16 mins ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

19 mins ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

20 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

23 mins ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

31 mins ago