ಕ್ರೀಡೆ

ಐಪಿಎಲ್‌ಗೆ ಪದಾರ್ಪಣೆ ಮಾಡಿದ ಪುತ್ರನಿಗೆ ಸಚಿನ್‌ ಭಾವನಾತ್ಮಕ ಸಂದೇಶ!

ಮುಂಬೈ: ಎರಡು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಕೊನೆಗೂ ಮರಿ ತೆಂಡೂಲ್ಕರ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್‌ಗೆ ಪ್ಲೇಯಿಂಗ್ XI ಸ್ಥಾನ ಲಭಿಸಿತು. ಇದರಿಂದ ಸಂತೋಷಗೊಂಡ ಕ್ರಿಕೆಟ್ ದೇವರು, ತಮ್ಮ ಪುತ್ರನ ಕ್ರಿಕೆಟ್ ಜೀವನಕ್ಕೆ ಶುಭ ಹಾರೈಸಿದ್ದಾರೆ.

2021ರ ಐಪಿಎಲ್ ಹರಾಜಿನಲ್ಲಿ 20 ಲಕ್ಷ ರೂ.ಗಳಿಗೆ ಮುಂಬೈ ಇಂಡಿಯನ್ಸ್ ಪಾಲಾಗಿದ್ದ ಮರಿ ತೆಂಡೂಲ್ಕರ್‌ಗೆ ಒಂದು ಪಂದ್ಯದಲ್ಲೂ ಆಡುವ ಅವಕಾಶ ಸಿಕ್ಕಿರಲಿಲ್ಲ. 2022 ರಲ್ಲೂ 30 ಲಕ್ಷ ನೀಡಿ ತಂಡದಲ್ಲಿ ಉಳಿಸಿಕೊಂಡರೂ ಅವಕಾಶ ಸಿಗದೆ ಬೆಂಚ್ ಕಾದಿದ್ದ ಎಡಗೈ ವೇಗಿಗೆ, ಹದಿನಾರನೇ ಆವೃತ್ತಿಯ ಐಪಿಎಲ್ ಟೂರ್ನಿಯ ಕೆಕೆಆರ್ ವಿರುದ್ಧ ಪಂದ್ಯದಲ್ಲಿಆಡುವ ಅವಕಾಶ ಲಭಿಸಿತು. 5 ಬಾರಿ ಚಾಂಪಿಯನ್ಸ್ ನಾಯಕ ರೋಹಿತ್ ಶರ್ಮಾ , ಅರ್ಜುನ್ ತೆಂಡೂಲ್ಕರ್‌ಗೆ ಕ್ಯಾಪ್ ನೀಡಿದರು. ಈ ಕ್ಷಣಕ್ಕೆ ಸಚಿನ್ ತೆಂಡೂಲ್ಕರ್ ಹಾಗೂ ಕುಟುಂಬದವರು ಸಾಕ್ಷಿಯಾದರು.

ಪವರ್‌ಪ್ಲೇನಲ್ಲಿ ಮರಿ ತೆಂಡೂಲ್ಕರ್ 2 ಓವರ್ ಬೌಲ್‌ ಮಾಡಿ 17 ರನ್ ನೀಡಿ ಗಮನ ಸೆಳೆದರು. ಆದರೆ, ದ್ವಿತೀಯನಲ್ಲಿ ಬ್ಯಾಟಿಂಗ್‌ಗೆ ಅವಕಾಶ ಸಿಗಲಿಲ್ಲ. ಈ ಪಂದ್ಯವನ್ನು ಮುಂಬೈ ಇಂಡಿಯನ್ಸ್ 5 ವಿಕೆಟ್‌ನಿಂದ ಗೆಲುವು ಪಡೆಯಿತು. ಈ ಗೆಲುವಿನೊಂದಿಗೆ ಅರ್ಜುನ್‌ ತೆಂಡೂಲ್ಕರ್‌ ಅವರ ಐಪಿಎಲ್ ವೃತ್ತಿ ಜೀವನ ಶುಭಾರಂಭವಾಯಿತು.

“ಅರ್ಜುನ್ ಇಂದು ನಿಮ್ಮ ಕ್ರಿಕೆಟ್ ಜೀವನದಲ್ಲಿ ಮತ್ತೊಂದು ಮಹತ್ತರವಾದ ಹೆಜ್ಜೆಯನ್ನು ಇಟ್ಟಿದ್ದೀರಿ. ನಿನ್ನ ತಂದೆಯಾಗಿ ನಿನ್ನನ್ನು ತುಂಬಾ ಪ್ರೀತಿಸುವ ಮತ್ತು ಕ್ರಿಕೆಟ್ ರಂಗದ ಬಗ್ಗೆ ಭಾವನಾತ್ಮಕತೆ ಹೊಂದಿರುವ ನನಗೆ, ನೀವು ಈ ಆಟವನ್ನು ತುಂಬಾ ಗೌರವಿಸುತ್ತೀರಿ ಹಾಗೂ ಉತ್ತಮ ಪ್ರದರ್ಶನ ‌ತೋರುತ್ತೀರಿ ಎಂಬ ನಂಬಿಕೆ ನನಗೆ ಇದೆ. ಇದನ್ನು ನೀವು ಪಾಲಿಸಿದರೆ, ಕ್ರಿಕೆಟ್ ನಿಮ್ಮನ್ನು ಪ್ರೀತಿಸುತ್ತದೆ,” ಎಂದು ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ

“ನೀವು ಈ ಹಂತ ತಲುಪಲು ಸಾಕಷ್ಟು ಪರಿಶ್ರಮ ಪಟ್ಟಿದ್ದೀರಿ, ಇನ್ನು ಮುಂದೆಯೂ ಇದೇ ರೀತಿಯ ಶ್ರಮ ವಹಿಸುತ್ತೀರಿ ಎಂಬುದು ನನಗೆ ತಿಳಿದಿದೆ. ಕ್ರಿಕೆಟ್ ಎಂಬ ಸುಂದರ ಜೀವನದಲ್ಲಿ ಪಯಣ ಆರಂಭಿಸಿರುವ ನಿನಗೆ ಒಳ್ಳೆಯದಾಗಲಿ, ಆಲ್ ದಿ ಬೆಸ್ಟ್,” ಎಂದು ಸಚಿನ್ ತೆಂಡೂಲ್ಕರ್‌ ತಮ್ಮ ಮಗನಿಗೆ ಶುಭ ಹಾರೈಸಿದ್ದಾರೆ.

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

2 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

4 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

4 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

4 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

5 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

5 hours ago