ಬೆಂಗಳೂರು: ಸ್ಯಾಫ್ ಚಾಂಪಿಯನ್ಸ್ ಫೈನಲ್ ನಲ್ಲಿ ಭಾರತದ ಜೈತ್ರಯಾತ್ರೆ ಮುಂದುವರೆದಿದ್ದು, ಫೈನಲ್ ಪಂದ್ಯದಲ್ಲಿ ಕುವೈತ್ ಮಣಿಸಿದ ಟೀಂ ಇಂಡಿಯಾ 9ನೇ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ.
ಇಂದು ನಡೆದ ಜಿದ್ದಾಜಿದ್ದಿಯ ಕಾದಾಟದಲ್ಲಿ ಬ್ಲ್ಯೂ ಟೈಗರ್ಸ್ ಖ್ಯಾತಿಯ ಭಾರತ ಫುಟ್ಬಾಲ್ ತಂಡ 2023ರ ಸಾಲಿನ ಸ್ಯಾಫ್ ಫುಟ್ಬಾಲ್ ಚಾಂಪಿಯನ್ಷಿಪ್ನಲ್ಲಿ ಪ್ರಶಸ್ತಿ ಜಯಿಸಿದೆ. ಮಂಗಳವಾರ ಶ್ರೀಕಂಠೀರವ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಪೆನಾಲ್ಟಿ ಶೂಟೌಟ್ನಲ್ಲಿ ಕುವೈತ್ ತಂಡವನ್ನು ಸೋಲಿಸಿ 9ನೇ ಬಾರಿಗೆ ಚಾಂಪಿಯನ್ ಆಯಿತು.
ನಿಗದಿತ ಅವಧಿಯಲ್ಲಿ ಪಂದ್ಯ 1-1 ಗೋಲುಗಳಿಂದ ಡ್ರಾ ಕಂಡಿದ್ದರೆ, ಫಲಿತಾಂಶ ನಿರ್ಣಯಕ್ಕಾಗಿ ನಡೆದ ಪೆನಾಲ್ಟಿ ಶೂಟೌಟ್ನಲ್ಲಿ ಭಾರತ 5-4 ಗೋಲುಗಳಿಂದ ಕುವೈತ್ ತಂಡವನ್ನು ಮಣಿಸಿತು. ಪೆನಾಲ್ಟಿ ಶೂಟೌಟ್ನ ತಲಾ ಐದು ಅವಕಾಶ ಮುಕ್ತಾಯವಾದಾಗ ಎರಡೂ ತಂಡಗಳು 4-4 ಗೋಲುಗಳ ಸಮಬಲ ಕಂಡಿತ್ತು. ಬಳಿಕ ನಡೆದ ಸಡನ್ ಡೆತ್ನಲ್ಲಿ ಕುವೈತ್ನ ಖಲೀದ್ ಎಲ್ ಅಬ್ರಾಹಂ ಗೋಲನ್ನು ಮಿಸ್ ಮಾಡಿದರೆ, ಭಾರತದ ಪರವಾಗಿ ಎನ್.ಮಹೇಶ್ ಸಿಂಗ್ ಗೋಲು ಸಿಡಿಸಿದರು.
ಅದರೊಂದಿಗೆ ಭಾರತ ತಂಡ 9ನೇ ಬಾರಿಗೆ ಟ್ರೋಫಿ ಎತ್ತಿ ಹಿಡಿಯಿತು.ಅದಲ್ಲದೆ, ಭಾರತಕ್ಕೆ ಇದು ಸತತ 2ನೇ ಸ್ಯಾಫ್ ಗೆಲುವಾಗಿದೆ. ಕಳೆದ ಬಾರಿ ಟೂರ್ನಿಯ ಫೈನಲ್ನಲ್ಲಿ ಭಾರತ ತಂಡ ಮಾಲ್ಡೀವ್ಸ್ ವಿರುದ್ಧ ಗೆಲುವು ಕಂಡಿತ್ತು.
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…
ಬೆಂಗಳೂರು: ಸಚಿವ ಜಮೀರ್ ಅಹಮ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು…
ನವದೆಹಲಿ: ಕೇಂದ್ರ ಸರ್ಕಾರದ ವತಿಯಿಂದ ಇತ್ತೀಚೆಗೆ ಜಾರಿಗೊಳಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ 2026ರ ಫೆಬ್ರವರಿ.12ರಂದು ದೇಶವ್ಯಾಪಿ…
ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಬ್ಲೂಬರ್ಡ್ ಬ್ಲಾಕ್-2 ವಿದೇಶಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ…
ಹಾಸನ: ರಾಜ್ಯದಲಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲಾ ವ್ಯಾನ್ ಚಾಲಕನಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ…
ಹುಣಸೂರು: ಟ್ರಾಕ್ಟರ್ನಲ್ಲಿ ಜಮೀನು ಉಳುಮೆ ಮಾಡುತ್ತಿದ್ದ ಚಾಲಕನ ಹುಲಿಗಳ ದಾಳಿಯಿಂದ ಬಚಾವಾಗಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದಲ್ಲಿ…