ಬೆಂಗಳೂರು: ಸ್ಯಾಫ್ ಚಾಂಪಿಯನ್ಸ್ ಫೈನಲ್ ನಲ್ಲಿ ಭಾರತದ ಜೈತ್ರಯಾತ್ರೆ ಮುಂದುವರೆದಿದ್ದು, ಫೈನಲ್ ಪಂದ್ಯದಲ್ಲಿ ಕುವೈತ್ ಮಣಿಸಿದ ಟೀಂ ಇಂಡಿಯಾ 9ನೇ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ.
ಇಂದು ನಡೆದ ಜಿದ್ದಾಜಿದ್ದಿಯ ಕಾದಾಟದಲ್ಲಿ ಬ್ಲ್ಯೂ ಟೈಗರ್ಸ್ ಖ್ಯಾತಿಯ ಭಾರತ ಫುಟ್ಬಾಲ್ ತಂಡ 2023ರ ಸಾಲಿನ ಸ್ಯಾಫ್ ಫುಟ್ಬಾಲ್ ಚಾಂಪಿಯನ್ಷಿಪ್ನಲ್ಲಿ ಪ್ರಶಸ್ತಿ ಜಯಿಸಿದೆ. ಮಂಗಳವಾರ ಶ್ರೀಕಂಠೀರವ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಪೆನಾಲ್ಟಿ ಶೂಟೌಟ್ನಲ್ಲಿ ಕುವೈತ್ ತಂಡವನ್ನು ಸೋಲಿಸಿ 9ನೇ ಬಾರಿಗೆ ಚಾಂಪಿಯನ್ ಆಯಿತು.
ನಿಗದಿತ ಅವಧಿಯಲ್ಲಿ ಪಂದ್ಯ 1-1 ಗೋಲುಗಳಿಂದ ಡ್ರಾ ಕಂಡಿದ್ದರೆ, ಫಲಿತಾಂಶ ನಿರ್ಣಯಕ್ಕಾಗಿ ನಡೆದ ಪೆನಾಲ್ಟಿ ಶೂಟೌಟ್ನಲ್ಲಿ ಭಾರತ 5-4 ಗೋಲುಗಳಿಂದ ಕುವೈತ್ ತಂಡವನ್ನು ಮಣಿಸಿತು. ಪೆನಾಲ್ಟಿ ಶೂಟೌಟ್ನ ತಲಾ ಐದು ಅವಕಾಶ ಮುಕ್ತಾಯವಾದಾಗ ಎರಡೂ ತಂಡಗಳು 4-4 ಗೋಲುಗಳ ಸಮಬಲ ಕಂಡಿತ್ತು. ಬಳಿಕ ನಡೆದ ಸಡನ್ ಡೆತ್ನಲ್ಲಿ ಕುವೈತ್ನ ಖಲೀದ್ ಎಲ್ ಅಬ್ರಾಹಂ ಗೋಲನ್ನು ಮಿಸ್ ಮಾಡಿದರೆ, ಭಾರತದ ಪರವಾಗಿ ಎನ್.ಮಹೇಶ್ ಸಿಂಗ್ ಗೋಲು ಸಿಡಿಸಿದರು.
ಅದರೊಂದಿಗೆ ಭಾರತ ತಂಡ 9ನೇ ಬಾರಿಗೆ ಟ್ರೋಫಿ ಎತ್ತಿ ಹಿಡಿಯಿತು.ಅದಲ್ಲದೆ, ಭಾರತಕ್ಕೆ ಇದು ಸತತ 2ನೇ ಸ್ಯಾಫ್ ಗೆಲುವಾಗಿದೆ. ಕಳೆದ ಬಾರಿ ಟೂರ್ನಿಯ ಫೈನಲ್ನಲ್ಲಿ ಭಾರತ ತಂಡ ಮಾಲ್ಡೀವ್ಸ್ ವಿರುದ್ಧ ಗೆಲುವು ಕಂಡಿತ್ತು.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…