ಕ್ರೀಡೆ

ಸ್ಯಾಫ್ ಚಾಂಪಿಯನ್ಸ್ ಫೈನಲ್: ದಾಖಲೆಯ 9ನೇ ಬಾರಿಗೆ ಟೀಂ ಇಂಡಿಯಾಗೆ ಕಿರೀಟ

ಬೆಂಗಳೂರು: ಸ್ಯಾಫ್ ಚಾಂಪಿಯನ್ಸ್ ಫೈನಲ್ ನಲ್ಲಿ ಭಾರತದ ಜೈತ್ರಯಾತ್ರೆ ಮುಂದುವರೆದಿದ್ದು, ಫೈನಲ್ ಪಂದ್ಯದಲ್ಲಿ ಕುವೈತ್ ಮಣಿಸಿದ ಟೀಂ ಇಂಡಿಯಾ 9ನೇ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ.

ಇಂದು ನಡೆದ ಜಿದ್ದಾಜಿದ್ದಿಯ ಕಾದಾಟದಲ್ಲಿ ಬ್ಲ್ಯೂ ಟೈಗರ್ಸ್‌ ಖ್ಯಾತಿಯ ಭಾರತ ಫುಟ್‌ಬಾಲ್‌ ತಂಡ 2023ರ ಸಾಲಿನ ಸ್ಯಾಫ್‌ ಫುಟ್‌ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಪ್ರಶಸ್ತಿ ಜಯಿಸಿದೆ. ಮಂಗಳವಾರ ಶ್ರೀಕಂಠೀರವ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಪೆನಾಲ್ಟಿ ಶೂಟೌಟ್‌ನಲ್ಲಿ ಕುವೈತ್‌ ತಂಡವನ್ನು ಸೋಲಿಸಿ 9ನೇ ಬಾರಿಗೆ ಚಾಂಪಿಯನ್‌ ಆಯಿತು.

ನಿಗದಿತ ಅವಧಿಯಲ್ಲಿ ಪಂದ್ಯ 1-1 ಗೋಲುಗಳಿಂದ ಡ್ರಾ ಕಂಡಿದ್ದರೆ, ಫಲಿತಾಂಶ ನಿರ್ಣಯಕ್ಕಾಗಿ ನಡೆದ ಪೆನಾಲ್ಟಿ ಶೂಟೌಟ್‌ನಲ್ಲಿ ಭಾರತ 5-4 ಗೋಲುಗಳಿಂದ ಕುವೈತ್‌ ತಂಡವನ್ನು ಮಣಿಸಿತು. ಪೆನಾಲ್ಟಿ ಶೂಟೌಟ್‌ನ ತಲಾ ಐದು ಅವಕಾಶ ಮುಕ್ತಾಯವಾದಾಗ ಎರಡೂ ತಂಡಗಳು 4-4 ಗೋಲುಗಳ ಸಮಬಲ ಕಂಡಿತ್ತು. ಬಳಿಕ ನಡೆದ ಸಡನ್‌ ಡೆತ್‌ನಲ್ಲಿ ಕುವೈತ್‌ನ ಖಲೀದ್‌ ಎಲ್‌ ಅಬ್ರಾಹಂ ಗೋಲನ್ನು ಮಿಸ್‌ ಮಾಡಿದರೆ, ಭಾರತದ ಪರವಾಗಿ ಎನ್‌.ಮಹೇಶ್‌ ಸಿಂಗ್‌ ಗೋಲು ಸಿಡಿಸಿದರು.

ಅದರೊಂದಿಗೆ ಭಾರತ ತಂಡ 9ನೇ ಬಾರಿಗೆ ಟ್ರೋಫಿ ಎತ್ತಿ ಹಿಡಿಯಿತು.ಅದಲ್ಲದೆ, ಭಾರತಕ್ಕೆ ಇದು ಸತತ 2ನೇ ಸ್ಯಾಫ್‌ ಗೆಲುವಾಗಿದೆ. ಕಳೆದ ಬಾರಿ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡ ಮಾಲ್ಡೀವ್ಸ್‌ ವಿರುದ್ಧ ಗೆಲುವು ಕಂಡಿತ್ತು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

14 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

14 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

15 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

16 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

20 hours ago