ಕ್ರೀಡೆ

ಸ್ಯಾಫ್ ಚಾಂಪಿಯನ್ಸ್ ಫೈನಲ್: ದಾಖಲೆಯ 9ನೇ ಬಾರಿಗೆ ಟೀಂ ಇಂಡಿಯಾಗೆ ಕಿರೀಟ

ಬೆಂಗಳೂರು: ಸ್ಯಾಫ್ ಚಾಂಪಿಯನ್ಸ್ ಫೈನಲ್ ನಲ್ಲಿ ಭಾರತದ ಜೈತ್ರಯಾತ್ರೆ ಮುಂದುವರೆದಿದ್ದು, ಫೈನಲ್ ಪಂದ್ಯದಲ್ಲಿ ಕುವೈತ್ ಮಣಿಸಿದ ಟೀಂ ಇಂಡಿಯಾ 9ನೇ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ.

ಇಂದು ನಡೆದ ಜಿದ್ದಾಜಿದ್ದಿಯ ಕಾದಾಟದಲ್ಲಿ ಬ್ಲ್ಯೂ ಟೈಗರ್ಸ್‌ ಖ್ಯಾತಿಯ ಭಾರತ ಫುಟ್‌ಬಾಲ್‌ ತಂಡ 2023ರ ಸಾಲಿನ ಸ್ಯಾಫ್‌ ಫುಟ್‌ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಪ್ರಶಸ್ತಿ ಜಯಿಸಿದೆ. ಮಂಗಳವಾರ ಶ್ರೀಕಂಠೀರವ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಪೆನಾಲ್ಟಿ ಶೂಟೌಟ್‌ನಲ್ಲಿ ಕುವೈತ್‌ ತಂಡವನ್ನು ಸೋಲಿಸಿ 9ನೇ ಬಾರಿಗೆ ಚಾಂಪಿಯನ್‌ ಆಯಿತು.

ನಿಗದಿತ ಅವಧಿಯಲ್ಲಿ ಪಂದ್ಯ 1-1 ಗೋಲುಗಳಿಂದ ಡ್ರಾ ಕಂಡಿದ್ದರೆ, ಫಲಿತಾಂಶ ನಿರ್ಣಯಕ್ಕಾಗಿ ನಡೆದ ಪೆನಾಲ್ಟಿ ಶೂಟೌಟ್‌ನಲ್ಲಿ ಭಾರತ 5-4 ಗೋಲುಗಳಿಂದ ಕುವೈತ್‌ ತಂಡವನ್ನು ಮಣಿಸಿತು. ಪೆನಾಲ್ಟಿ ಶೂಟೌಟ್‌ನ ತಲಾ ಐದು ಅವಕಾಶ ಮುಕ್ತಾಯವಾದಾಗ ಎರಡೂ ತಂಡಗಳು 4-4 ಗೋಲುಗಳ ಸಮಬಲ ಕಂಡಿತ್ತು. ಬಳಿಕ ನಡೆದ ಸಡನ್‌ ಡೆತ್‌ನಲ್ಲಿ ಕುವೈತ್‌ನ ಖಲೀದ್‌ ಎಲ್‌ ಅಬ್ರಾಹಂ ಗೋಲನ್ನು ಮಿಸ್‌ ಮಾಡಿದರೆ, ಭಾರತದ ಪರವಾಗಿ ಎನ್‌.ಮಹೇಶ್‌ ಸಿಂಗ್‌ ಗೋಲು ಸಿಡಿಸಿದರು.

ಅದರೊಂದಿಗೆ ಭಾರತ ತಂಡ 9ನೇ ಬಾರಿಗೆ ಟ್ರೋಫಿ ಎತ್ತಿ ಹಿಡಿಯಿತು.ಅದಲ್ಲದೆ, ಭಾರತಕ್ಕೆ ಇದು ಸತತ 2ನೇ ಸ್ಯಾಫ್‌ ಗೆಲುವಾಗಿದೆ. ಕಳೆದ ಬಾರಿ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡ ಮಾಲ್ಡೀವ್ಸ್‌ ವಿರುದ್ಧ ಗೆಲುವು ಕಂಡಿತ್ತು.

andolanait

Recent Posts

ಸಫಾರಿ ವೇಳೆ ಮೊಬೈಲ್‌ ಬಳಕೆಗೆ ನಿಷೇಧ : ಅರಣ್ಯ ಇಲಾಖೆ ಹೊಸ ನಿಯಮ

ಬೆಂಗಳೂರು : ವನ್ಯಜೀವಿ ಸಂರಕ್ಷಣೆ ಮತ್ತು ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕರ್ನಾಟಕ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಫಾರಿ…

5 mins ago

ಟ್ರಂಪ್‌ ಮೇಲಿನ ದಾಳಿ ಇದೇ ಮೊದಲೇನಲ್ಲ ; ಈ ಹಿಂದೆಯೂ ನಡೆದಿತ್ತು ಹತ್ಯೆಗೆ ಯತ್ನ !

ವಾಷಿಂಗ್ಟನ್‌ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ  ಮತ್ತೆ ಹತ್ಯೆಗೆ ಯತ್ನ ನಡೆದಿದೆ. ಹಿಲ್ಟನ್ ಹೋಟೆಲ್‌ನ ಘಟನೆ…

33 mins ago

ಛಡ್ಡಾ ಬಿಜೆಪಿ ಸೇರ್ಪಡೆ ; ಜೆನ್-ಝೀಗಳಿಂದ ಅನ್‌ಫಾಲೋ ಅಭಿಯಾನ

ನವದೆಹಲಿ : ರಾಜ್ಯಸಭಾ ಸಂಸದ ರಾಘವ್‌ ಛಡ್ಡಾ ಅವರು ಎಎಪಿ(ಆಮ್‌ ಆದ್ಮಿ ಪಾರ್ಟಿ) ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ಸಾಮಾಜಿಕ…

47 mins ago

ಮೇ.2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಹೈ ಆದೇಶದ ಬೆನ್ನಲ್ಲೇ ಸಕಲ ಸಿದ್ಧತೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್‌ಜಿ ಫಸ್ಟ್…

1 hour ago

ಓದುಗರ ಪತ್ರ | ಸಿಇಟಿ ; ನಿಯಮಗಳಿಗೆ ತಿದ್ದುಪಡಿ ಅವಶ್ಯ

ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಸೋಲಾದದ್ದು ಮುಚ್ಚುಮರೆಯ ಕ್ಷೇತ್ರ ಪುನರ್‌ ವಿಂಗಡಣೆಗೆ

ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…

2 hours ago