ಬೆಂಗಳೂರು: ಸ್ಯಾಫ್ ಚಾಂಪಿಯನ್ಸ್ ಫೈನಲ್ ನಲ್ಲಿ ಭಾರತದ ಜೈತ್ರಯಾತ್ರೆ ಮುಂದುವರೆದಿದ್ದು, ಫೈನಲ್ ಪಂದ್ಯದಲ್ಲಿ ಕುವೈತ್ ಮಣಿಸಿದ ಟೀಂ ಇಂಡಿಯಾ 9ನೇ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ.
ಇಂದು ನಡೆದ ಜಿದ್ದಾಜಿದ್ದಿಯ ಕಾದಾಟದಲ್ಲಿ ಬ್ಲ್ಯೂ ಟೈಗರ್ಸ್ ಖ್ಯಾತಿಯ ಭಾರತ ಫುಟ್ಬಾಲ್ ತಂಡ 2023ರ ಸಾಲಿನ ಸ್ಯಾಫ್ ಫುಟ್ಬಾಲ್ ಚಾಂಪಿಯನ್ಷಿಪ್ನಲ್ಲಿ ಪ್ರಶಸ್ತಿ ಜಯಿಸಿದೆ. ಮಂಗಳವಾರ ಶ್ರೀಕಂಠೀರವ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಪೆನಾಲ್ಟಿ ಶೂಟೌಟ್ನಲ್ಲಿ ಕುವೈತ್ ತಂಡವನ್ನು ಸೋಲಿಸಿ 9ನೇ ಬಾರಿಗೆ ಚಾಂಪಿಯನ್ ಆಯಿತು.
ನಿಗದಿತ ಅವಧಿಯಲ್ಲಿ ಪಂದ್ಯ 1-1 ಗೋಲುಗಳಿಂದ ಡ್ರಾ ಕಂಡಿದ್ದರೆ, ಫಲಿತಾಂಶ ನಿರ್ಣಯಕ್ಕಾಗಿ ನಡೆದ ಪೆನಾಲ್ಟಿ ಶೂಟೌಟ್ನಲ್ಲಿ ಭಾರತ 5-4 ಗೋಲುಗಳಿಂದ ಕುವೈತ್ ತಂಡವನ್ನು ಮಣಿಸಿತು. ಪೆನಾಲ್ಟಿ ಶೂಟೌಟ್ನ ತಲಾ ಐದು ಅವಕಾಶ ಮುಕ್ತಾಯವಾದಾಗ ಎರಡೂ ತಂಡಗಳು 4-4 ಗೋಲುಗಳ ಸಮಬಲ ಕಂಡಿತ್ತು. ಬಳಿಕ ನಡೆದ ಸಡನ್ ಡೆತ್ನಲ್ಲಿ ಕುವೈತ್ನ ಖಲೀದ್ ಎಲ್ ಅಬ್ರಾಹಂ ಗೋಲನ್ನು ಮಿಸ್ ಮಾಡಿದರೆ, ಭಾರತದ ಪರವಾಗಿ ಎನ್.ಮಹೇಶ್ ಸಿಂಗ್ ಗೋಲು ಸಿಡಿಸಿದರು.
ಅದರೊಂದಿಗೆ ಭಾರತ ತಂಡ 9ನೇ ಬಾರಿಗೆ ಟ್ರೋಫಿ ಎತ್ತಿ ಹಿಡಿಯಿತು.ಅದಲ್ಲದೆ, ಭಾರತಕ್ಕೆ ಇದು ಸತತ 2ನೇ ಸ್ಯಾಫ್ ಗೆಲುವಾಗಿದೆ. ಕಳೆದ ಬಾರಿ ಟೂರ್ನಿಯ ಫೈನಲ್ನಲ್ಲಿ ಭಾರತ ತಂಡ ಮಾಲ್ಡೀವ್ಸ್ ವಿರುದ್ಧ ಗೆಲುವು ಕಂಡಿತ್ತು.
ಮಂಜು ಕೋಟೆ ಕಬಿನಿ ಜಲಾಶಯ ಭರ್ತಿ; ೧೦ ಸಾವಿರ ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಬರದ ನಡುವೆಯೂ ಕೇರಳದ…
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…