ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ.
ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇದೀಗ ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಅಚ್ಚರಿಯಂಬಂತೆ ಇನುಂದೆ ಸ್ಪರ್ಧಾತಕ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಸಹ ಸ್ಪಷ್ಟಪಡಿಸಿದ್ದಾರೆ.
ಸೈನಾ ನೆಹ್ವಾಲ್ ಅವರು ಕಳೆದ 2023 ರಲ್ಲಿ. 2023ರ ಸಿಂಗಾಪುರ್ ಓಪನ್ ನಂತರ ಯಾವುದೇ ಸ್ಪರ್ಧಾತಕ ಪಂದ್ಯವಾಡಿಲ್ಲ. ಇದಕ್ಕೆ ಗಾಯದ ಸಮಸ್ಯೆಯೇ ಮುಖ್ಯ ಕಾರಣ ಎನ್ನಲಾಗಿದೆ.
ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಎರಡು ವರ್ಷಗಳಿಂದ ಆಟಕ್ಕೆ ಮರಳಲು ಸತತ ಪ್ರಯತ್ನ ಮಾಡಿದ್ದರು ಇದಾಗ್ಯೂ ಸಂಪೂರ್ಣ ಚೇತರಿಗೆ ಸಾಧಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ವರ್ಷದ ಆರಂಭದಲ್ಲೇ ಸೈನಾ ನೆಹ್ವಾಲ್ ಬ್ಯಾಡ್ಮಿಂಟನ್ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸೈನಾ ನೆಹ್ವಾಲ್, ತನ್ನ ದೇಹವು ಸ್ಪಂದಿಸುತ್ತಿಲ್ಲ. ಹೀಗಾಗಿ ಬ್ಯಾಡ್ಮಿಂಟನ್ನಲ್ಲಿ ಇನುಂದೆ ಮುಂದುವರೆಯಲು ಸಾಧ್ಯವಿಲ್ಲ. ಮೊಣಕಾಲಿನ ನೋವಿನ ಸಮಸ್ಯೆಯಿರುವ ಕಾರಣ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ. ಎಂದು 35 ವರ್ಷದ ಸೈನಾ ನೆಹ್ವಾಲ್ ಹೇಳಿದ್ದಾರೆ.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…