ಕ್ರೀಡೆ

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟಿಗರ ಸಂಭಾವನೆ ಶೇ 66 ರಷ್ಟು ಹೆಚ್ಚಳ

ಮೆಲ್ಬರ್ನ್‌: ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟಿಗರ ಸಂಭಾವನೆಯನ್ನು ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಲಾಗಿದ್ದು, ಕ್ರಿಕೆಟ್‌ ಆಸ್ಟ್ರೇಲಿಯಾದ (ಸಿಎ) ಗುತ್ತಿಗೆ ವ್ಯಾಪ್ತಿಯಲ್ಲಿರುವ ಕೆಲವು ಆಟಗಾರ್ತಿಯರು ವಾರ್ಷಿಕ ₹ 5.56 ಕೋಟಿಗೂ ಅಧಿಕ ವೇತನ ಪಡೆಯಲಿದ್ದಾರೆ.

ಸಿಎ ಮತ್ತು ಆಸ್ಟ್ರೇಲಿಯಾ ಕ್ರಿಕೆಟಿಗರ ಸಂ‌ಸ್ಥೆಯ ನಡುವಣ ಹೊಸ ಒಪ್ಪಂದದ ಪ್ರಕಾರ ವೃತ್ತಿಪರ ಕ್ರಿಕೆಟ್‌ ಆಟಗಾರ್ತಿಯರ ಸಂಭಾವನೆ ಶೇ 66 ರಷ್ಟು ಹೆಚ್ಚಳವಾಗಲಿದೆ. ಆಸ್ಟ್ರೇಲಿಯಾದ ದೇಸಿ ಟಿ20 ಲೀಗ್‌ ಮಹಿಳಾ ಬಿಗ್‌ಬ್ಯಾಷ್‌ನಲ್ಲಿ (ಡಬ್ಲ್ಯುಬಿಬಿಎಲ್‌) ಆಡುವ ಆಟಗಾರ್ತಿಯರ ಸಂಭಾವನೆ ಕೂಡಾ ಏರಿಕೆಯಾಗಲಿದೆ.

ಸಿಎ ಮತ್ತು ಡಬ್ಲ್ಯುಬಿಬಿಎಲ್‌ ಗುತ್ತಿಗೆ ಪಟ್ಟಿಯಲ್ಲಿರುವ ಆಸ್ಟ್ರೇಲಿಯಾ ತಂಡದ ನಾಯಕಿ ಮೆಗ್‌ ಲ್ಯಾನಿಂಗ್‌ ಅವರು ವಾರ್ಷಿಕ ₹ 4.45 ಕೋಟಿ ಸಂಭಾವನೆ ಪಡೆಯಲಿದ್ದಾರೆ. ಭಾರತದಲ್ಲಿ ನಡೆಯುವ ಡಬ್ಲ್ಯಪಿಎಲ್‌ ಮತ್ತು ಇಂಗ್ಲೆಂಡ್‌ನ ‘ದಿ ಹಂಡ್ರೆಡ್‌’ ಟೂರ್ನಿಯಲ್ಲಿ ಪಡೆಯುವ ವೇತನವನ್ನು ಸೇರಿಸಿದರೆ ಅವರ ವಾರ್ಷಿಕ ಗಳಿಕೆ ₹ 5.56 ಕೋಟಿ ದಾಟಲಿದೆ.

ಸಿಎ ಗುತ್ತಿಗೆ ಪಟ್ಟಿಯಲ್ಲಿ ಮೆಗ್‌ ಲ್ಯಾನಿಂಗ್‌ ಬಳಿಕದ ಸ್ಥಾನಗಳಲ್ಲಿರುವ ಆರು ಆಟಗಾರ್ತಿಯರು ವಾರ್ಷಿಕ ₹ 2.78 ಕೋಟಿ ಗಳಿಸಲಿದ್ದಾರೆ. ಆಸ್ಟ್ರೇಲಿಯಾದ ರಾಷ್ಟ್ರೀಯ ತಂಡದಲ್ಲಿ ಇಲ್ಲದ, ಆದರೆ ಮಹಿಳಾ ಬಿಗ್‌ಬ್ಯಾಷ್‌ನಲ್ಲಿ ಆಡುವ ಆಟಗಾರ್ತಿಯರು ವಾರ್ಷಿಕ ₹ 84 ಲಕ್ಷ ಗಳಿಸಲಿದ್ದಾರೆ.

ಸಿಎ ಗುತ್ತಿಗೆ ಪಟ್ಟಿಯಲ್ಲಿರುವ ಆಟಗಾರ್ತಿಯರ ಸಂಖ್ಯೆಯನ್ನು 15 ರಿಂದ 18 ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ.

ಪುರುಷ ಕ್ರಿಕೆಟಿಗರ ಸಂಭಾವನೆಯಲ್ಲೂ ಏರಿಕೆಯಾಗಲಿದ್ದು, ಸಿಎ ಗುತ್ತಿಗೆ ವ್ಯಾಪ್ತಿಯಲ್ಲಿರುವ 24 ಆಟಗಾರರ ವಾರ್ಷಿಕ ಗಳಿಕೆ ಸರಾಸರಿ ಶೇ 7.5 ರಷ್ಟು ಹೆಚ್ಚಳವಾಗಲಿದೆ.

andolanait

Recent Posts

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

3 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

24 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

2 hours ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

2 hours ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

2 hours ago