ಕ್ರೀಡೆ

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟಿಗರ ಸಂಭಾವನೆ ಶೇ 66 ರಷ್ಟು ಹೆಚ್ಚಳ

ಮೆಲ್ಬರ್ನ್‌: ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟಿಗರ ಸಂಭಾವನೆಯನ್ನು ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಲಾಗಿದ್ದು, ಕ್ರಿಕೆಟ್‌ ಆಸ್ಟ್ರೇಲಿಯಾದ (ಸಿಎ) ಗುತ್ತಿಗೆ ವ್ಯಾಪ್ತಿಯಲ್ಲಿರುವ ಕೆಲವು ಆಟಗಾರ್ತಿಯರು ವಾರ್ಷಿಕ ₹ 5.56 ಕೋಟಿಗೂ ಅಧಿಕ ವೇತನ ಪಡೆಯಲಿದ್ದಾರೆ.

ಸಿಎ ಮತ್ತು ಆಸ್ಟ್ರೇಲಿಯಾ ಕ್ರಿಕೆಟಿಗರ ಸಂ‌ಸ್ಥೆಯ ನಡುವಣ ಹೊಸ ಒಪ್ಪಂದದ ಪ್ರಕಾರ ವೃತ್ತಿಪರ ಕ್ರಿಕೆಟ್‌ ಆಟಗಾರ್ತಿಯರ ಸಂಭಾವನೆ ಶೇ 66 ರಷ್ಟು ಹೆಚ್ಚಳವಾಗಲಿದೆ. ಆಸ್ಟ್ರೇಲಿಯಾದ ದೇಸಿ ಟಿ20 ಲೀಗ್‌ ಮಹಿಳಾ ಬಿಗ್‌ಬ್ಯಾಷ್‌ನಲ್ಲಿ (ಡಬ್ಲ್ಯುಬಿಬಿಎಲ್‌) ಆಡುವ ಆಟಗಾರ್ತಿಯರ ಸಂಭಾವನೆ ಕೂಡಾ ಏರಿಕೆಯಾಗಲಿದೆ.

ಸಿಎ ಮತ್ತು ಡಬ್ಲ್ಯುಬಿಬಿಎಲ್‌ ಗುತ್ತಿಗೆ ಪಟ್ಟಿಯಲ್ಲಿರುವ ಆಸ್ಟ್ರೇಲಿಯಾ ತಂಡದ ನಾಯಕಿ ಮೆಗ್‌ ಲ್ಯಾನಿಂಗ್‌ ಅವರು ವಾರ್ಷಿಕ ₹ 4.45 ಕೋಟಿ ಸಂಭಾವನೆ ಪಡೆಯಲಿದ್ದಾರೆ. ಭಾರತದಲ್ಲಿ ನಡೆಯುವ ಡಬ್ಲ್ಯಪಿಎಲ್‌ ಮತ್ತು ಇಂಗ್ಲೆಂಡ್‌ನ ‘ದಿ ಹಂಡ್ರೆಡ್‌’ ಟೂರ್ನಿಯಲ್ಲಿ ಪಡೆಯುವ ವೇತನವನ್ನು ಸೇರಿಸಿದರೆ ಅವರ ವಾರ್ಷಿಕ ಗಳಿಕೆ ₹ 5.56 ಕೋಟಿ ದಾಟಲಿದೆ.

ಸಿಎ ಗುತ್ತಿಗೆ ಪಟ್ಟಿಯಲ್ಲಿ ಮೆಗ್‌ ಲ್ಯಾನಿಂಗ್‌ ಬಳಿಕದ ಸ್ಥಾನಗಳಲ್ಲಿರುವ ಆರು ಆಟಗಾರ್ತಿಯರು ವಾರ್ಷಿಕ ₹ 2.78 ಕೋಟಿ ಗಳಿಸಲಿದ್ದಾರೆ. ಆಸ್ಟ್ರೇಲಿಯಾದ ರಾಷ್ಟ್ರೀಯ ತಂಡದಲ್ಲಿ ಇಲ್ಲದ, ಆದರೆ ಮಹಿಳಾ ಬಿಗ್‌ಬ್ಯಾಷ್‌ನಲ್ಲಿ ಆಡುವ ಆಟಗಾರ್ತಿಯರು ವಾರ್ಷಿಕ ₹ 84 ಲಕ್ಷ ಗಳಿಸಲಿದ್ದಾರೆ.

ಸಿಎ ಗುತ್ತಿಗೆ ಪಟ್ಟಿಯಲ್ಲಿರುವ ಆಟಗಾರ್ತಿಯರ ಸಂಖ್ಯೆಯನ್ನು 15 ರಿಂದ 18 ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ.

ಪುರುಷ ಕ್ರಿಕೆಟಿಗರ ಸಂಭಾವನೆಯಲ್ಲೂ ಏರಿಕೆಯಾಗಲಿದ್ದು, ಸಿಎ ಗುತ್ತಿಗೆ ವ್ಯಾಪ್ತಿಯಲ್ಲಿರುವ 24 ಆಟಗಾರರ ವಾರ್ಷಿಕ ಗಳಿಕೆ ಸರಾಸರಿ ಶೇ 7.5 ರಷ್ಟು ಹೆಚ್ಚಳವಾಗಲಿದೆ.

andolanait

Recent Posts

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

60 mins ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

2 hours ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

5 hours ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

5 hours ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

5 hours ago