ಕ್ರೀಡೆ

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟಿಗರ ಸಂಭಾವನೆ ಶೇ 66 ರಷ್ಟು ಹೆಚ್ಚಳ

ಮೆಲ್ಬರ್ನ್‌: ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟಿಗರ ಸಂಭಾವನೆಯನ್ನು ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಲಾಗಿದ್ದು, ಕ್ರಿಕೆಟ್‌ ಆಸ್ಟ್ರೇಲಿಯಾದ (ಸಿಎ) ಗುತ್ತಿಗೆ ವ್ಯಾಪ್ತಿಯಲ್ಲಿರುವ ಕೆಲವು ಆಟಗಾರ್ತಿಯರು ವಾರ್ಷಿಕ ₹ 5.56 ಕೋಟಿಗೂ ಅಧಿಕ ವೇತನ ಪಡೆಯಲಿದ್ದಾರೆ.

ಸಿಎ ಮತ್ತು ಆಸ್ಟ್ರೇಲಿಯಾ ಕ್ರಿಕೆಟಿಗರ ಸಂ‌ಸ್ಥೆಯ ನಡುವಣ ಹೊಸ ಒಪ್ಪಂದದ ಪ್ರಕಾರ ವೃತ್ತಿಪರ ಕ್ರಿಕೆಟ್‌ ಆಟಗಾರ್ತಿಯರ ಸಂಭಾವನೆ ಶೇ 66 ರಷ್ಟು ಹೆಚ್ಚಳವಾಗಲಿದೆ. ಆಸ್ಟ್ರೇಲಿಯಾದ ದೇಸಿ ಟಿ20 ಲೀಗ್‌ ಮಹಿಳಾ ಬಿಗ್‌ಬ್ಯಾಷ್‌ನಲ್ಲಿ (ಡಬ್ಲ್ಯುಬಿಬಿಎಲ್‌) ಆಡುವ ಆಟಗಾರ್ತಿಯರ ಸಂಭಾವನೆ ಕೂಡಾ ಏರಿಕೆಯಾಗಲಿದೆ.

ಸಿಎ ಮತ್ತು ಡಬ್ಲ್ಯುಬಿಬಿಎಲ್‌ ಗುತ್ತಿಗೆ ಪಟ್ಟಿಯಲ್ಲಿರುವ ಆಸ್ಟ್ರೇಲಿಯಾ ತಂಡದ ನಾಯಕಿ ಮೆಗ್‌ ಲ್ಯಾನಿಂಗ್‌ ಅವರು ವಾರ್ಷಿಕ ₹ 4.45 ಕೋಟಿ ಸಂಭಾವನೆ ಪಡೆಯಲಿದ್ದಾರೆ. ಭಾರತದಲ್ಲಿ ನಡೆಯುವ ಡಬ್ಲ್ಯಪಿಎಲ್‌ ಮತ್ತು ಇಂಗ್ಲೆಂಡ್‌ನ ‘ದಿ ಹಂಡ್ರೆಡ್‌’ ಟೂರ್ನಿಯಲ್ಲಿ ಪಡೆಯುವ ವೇತನವನ್ನು ಸೇರಿಸಿದರೆ ಅವರ ವಾರ್ಷಿಕ ಗಳಿಕೆ ₹ 5.56 ಕೋಟಿ ದಾಟಲಿದೆ.

ಸಿಎ ಗುತ್ತಿಗೆ ಪಟ್ಟಿಯಲ್ಲಿ ಮೆಗ್‌ ಲ್ಯಾನಿಂಗ್‌ ಬಳಿಕದ ಸ್ಥಾನಗಳಲ್ಲಿರುವ ಆರು ಆಟಗಾರ್ತಿಯರು ವಾರ್ಷಿಕ ₹ 2.78 ಕೋಟಿ ಗಳಿಸಲಿದ್ದಾರೆ. ಆಸ್ಟ್ರೇಲಿಯಾದ ರಾಷ್ಟ್ರೀಯ ತಂಡದಲ್ಲಿ ಇಲ್ಲದ, ಆದರೆ ಮಹಿಳಾ ಬಿಗ್‌ಬ್ಯಾಷ್‌ನಲ್ಲಿ ಆಡುವ ಆಟಗಾರ್ತಿಯರು ವಾರ್ಷಿಕ ₹ 84 ಲಕ್ಷ ಗಳಿಸಲಿದ್ದಾರೆ.

ಸಿಎ ಗುತ್ತಿಗೆ ಪಟ್ಟಿಯಲ್ಲಿರುವ ಆಟಗಾರ್ತಿಯರ ಸಂಖ್ಯೆಯನ್ನು 15 ರಿಂದ 18 ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ.

ಪುರುಷ ಕ್ರಿಕೆಟಿಗರ ಸಂಭಾವನೆಯಲ್ಲೂ ಏರಿಕೆಯಾಗಲಿದ್ದು, ಸಿಎ ಗುತ್ತಿಗೆ ವ್ಯಾಪ್ತಿಯಲ್ಲಿರುವ 24 ಆಟಗಾರರ ವಾರ್ಷಿಕ ಗಳಿಕೆ ಸರಾಸರಿ ಶೇ 7.5 ರಷ್ಟು ಹೆಚ್ಚಳವಾಗಲಿದೆ.

andolanait

Recent Posts

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

6 mins ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

11 mins ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

23 mins ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

2 hours ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಅಂಗಳಕ್ಕೆ ತಲುಪಿದ ಅಧಿಕಾರ ಹಂಚಿಕೆ ಮಾತು

ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…

3 hours ago