ನವದೆಹಲಿ: ಟೀಂ ಇಂಡಿಯಾದ ಮಾಜಿ ಕೋಚ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಅವರು ತವರಿನಲ್ಲಿ ನಡೆಯಲಿರುವ 19 ವರ್ಷದ ಒಳಗಿನವರ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.
ತವರಿನಲ್ಲಿ ಭಾರತ ತಂಡ ಆಸೀಸ್ ವಿರುದ್ಧ ಸೆ.21 ರಿಂದ ಅ.10 ವರೆಗೆ ಮೂರು ಏಕದಿನ ಹಾಗೂ ನಾಲ್ಕು ದಿನಗಳ ಎರಡು ಟೆಸ್ಟ್ ಪಂದ್ಯ ಆಡಲಿದೆ.
ಸಮಿತ್ ಅವರು ಏಕದಿನ ಹಾಗೂ ನಾಲ್ಕು ದಿನಗಳ ಟೆಸ್ಟ್ ಸರಣಿ ಎರಡೂ ತಂಡಗಳಲ್ಲಿಯೂ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ. ಇನ್ನು ಸಮಿತ್ ಹೊರತುಪಡಿಸಿ ಕರ್ನಾಟಕದಿಂದ ಕೆ.ಪಿ ಕಾರ್ತಿಕೇಯ, ಎನ್ ಸಮರ್ಥ್ ಹಾಗೂ ಹಾರ್ದಿಕ್ ರಾಜ್ ಅವರು ಆಯ್ಕೆಯಾಗಿದ್ದಾರೆ.
ಆಸೀಸ್ ವಿರುದ್ಧ ಸರಣಿ ವೇಳಾಪಟ್ಟಿ:
ಏಕದಿನ ಸರಣಿ
ಸೆ.21: ಮೊದಲ ಏಕದಿನ ಪಂದ್ಯ
ಸೆ.23: ಎರಡನೇ ಏಕದಿನ ಪಂದ್ಯ
ಸೆ.26: ಮೂರನೇ ಏಕದಿನ ಪಂದ್ಯ
ನಾಲ್ಕು ದಿನಗಳ ಟೆಸ್ಟ್ ಸರಣಿ
ಸೆ.30 ರಿಂದ ಅ.3: ಮೊದಲ ಟೆಸ್ಟ್
ಅ.7 ರಿಂದ ಅ.10: ಎರಡನೇ ಟೆಸ್ಟ್
ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಬೆಳಿಗ್ಗೆ 9.30 ಗಂಟೆಗೆ ಆರಂಭವಾಗಲಿದೆ.
ಆಸೀಸ್ ವಿರುದ್ಧ ಸರಣಿಗೆ ಟೀಂ ಇಂಡಿಯಾ ತಂಡ ಇಂತಿದೆ:
ಏಕದಿನ ಸರಣಿ: ರುದ್ರ ಪಟೇಲ್ (ಉಪನಾಯಕ), ಸಾಹಿಲ್ ಪರಾಖ್, ಕಾರ್ತಿಕೇಯ ಕೆಪಿ, ಮೊಹಮ್ಮದ್ ಅಮಾನ್ (ನಾಯಕ), ಕಿರಣ್ ಚೋರ್ಮಲೆ, ಅಭಿಜ್ಞಾನ್ ಕುಂದು (ವಿ.ಕೀ), ಹರ್ವಂಶ್ ಸಿಂಗ್ ಪಂಗಾಲಿಯಾ (ವಿ.ಕೀ), ಸಮಿತ್ ದ್ರಾವಿಡ್, ಯುಧಾಜಿತ್ ಗುಹಾ, ಸಮರ್ಥ್ ಎನ್, ನಿಖಿಲ್ ಕುಮಾರ್, ಚೇತನ್ ಶರ್ಮಾ, ಹಾರ್ದಿಕ್ ರಾಜ್, ರೋಹಿತ್ ರಾಜಾವತ್, ಮೊಹಮ್ಮದ್ ಇನಾನ್.
ಟೆಸ್ಟ್ ಸರಣಿ: ವೈಭವ್ ಸೂರ್ಯವಂಶಿ, ನಿತ್ಯ ಪಾಂಡ್ಯ, ವಿಹಾನ್ ಮಲ್ಹೋತ್ರಾ (ಉಪ ನಾಯಕ), ಸೋಹಮ್ ಪಟವರ್ಧನ್ (ನಾಯಕ), ಕಾರ್ತಿಕೇಯ ಕೆ ಪಿ, ಸಮಿತ್ ದ್ರಾವಿಡ್, ಅಭಿಗ್ಯಾನ್ ಕುಂದು (ವಿ.ಕೀ), ಹರ್ವಂಶ್ ಸಿಂಗ್ ಪಂಗಾಲಿಯಾ(ವಿ.ಕೀ), ಚೇತನ್ ಶರ್ಮಾ, ಸಮರ್ಥ್ ಎನ್, ಆದಿತ್ಯ ರಾವತ್, ನಿಖಿಲ್ ಕುಮಾರ್, ಅನ್ಮೋಲ್ಜೀತ್ ಸಿಂಗ್, ಆದಿತ್ಯ ಸಿಂಗ್, ಮೊಹಮ್ಮದ್ ಇನಾನ್.
ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…
ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…