ಕ್ರೀಡೆ

ಆಸೀಸ್‌ ವಿರುದ್ಧ U19 ಸರಣಿ: ಟೀಂ ಇಂಡಿಯಾಗೆ ಆಯ್ಕೆಯಾದ ಸಮಿತ್‌ ದ್ರಾವಿಡ್‌!

ನವದೆಹಲಿ: ಟೀಂ ಇಂಡಿಯಾದ ಮಾಜಿ ಕೋಚ್‌ ದ್ರಾವಿಡ್ ಅವರ ಪುತ್ರ ಸಮಿತ್‌ ದ್ರಾವಿಡ್‌ ಅವರು ತವರಿನಲ್ಲಿ ನಡೆಯಲಿರುವ 19 ವರ್ಷದ ಒಳಗಿನವರ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.

ತವರಿನಲ್ಲಿ ಭಾರತ ತಂಡ ಆಸೀಸ್‌ ವಿರುದ್ಧ ಸೆ.21 ರಿಂದ ಅ.10 ವರೆಗೆ ಮೂರು ಏಕದಿನ ಹಾಗೂ ನಾಲ್ಕು ದಿನಗಳ ಎರಡು ಟೆಸ್ಟ್‌ ಪಂದ್ಯ ಆಡಲಿದೆ.

ಸಮಿತ್‌ ಅವರು ಏಕದಿನ ಹಾಗೂ ನಾಲ್ಕು ದಿನಗಳ ಟೆಸ್ಟ್‌ ಸರಣಿ ಎರಡೂ ತಂಡಗಳಲ್ಲಿಯೂ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ. ಇನ್ನು ಸಮಿತ್‌ ಹೊರತುಪಡಿಸಿ ಕರ್ನಾಟಕದಿಂದ ಕೆ.ಪಿ ಕಾರ್ತಿಕೇಯ, ಎನ್‌ ಸಮರ್ಥ್‌ ಹಾಗೂ ಹಾರ್ದಿಕ್‌ ರಾಜ್‌ ಅವರು ಆಯ್ಕೆಯಾಗಿದ್ದಾರೆ.

ಆಸೀಸ್‌ ವಿರುದ್ಧ ಸರಣಿ ವೇಳಾಪಟ್ಟಿ:

ಏಕದಿನ ಸರಣಿ
ಸೆ.21: ಮೊದಲ ಏಕದಿನ ಪಂದ್ಯ
ಸೆ.23: ಎರಡನೇ ಏಕದಿನ ಪಂದ್ಯ
ಸೆ.26: ಮೂರನೇ ಏಕದಿನ ಪಂದ್ಯ

ನಾಲ್ಕು ದಿನಗಳ ಟೆಸ್ಟ್‌ ಸರಣಿ
ಸೆ.30 ರಿಂದ ಅ.3: ಮೊದಲ ಟೆಸ್ಟ್‌
ಅ.7 ರಿಂದ ಅ.10: ಎರಡನೇ ಟೆಸ್ಟ್‌

ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಬೆಳಿಗ್ಗೆ 9.30 ಗಂಟೆಗೆ ಆರಂಭವಾಗಲಿದೆ.

ಆಸೀಸ್‌ ವಿರುದ್ಧ ಸರಣಿಗೆ ಟೀಂ ಇಂಡಿಯಾ ತಂಡ ಇಂತಿದೆ:

ಏಕದಿನ ಸರಣಿ: ರುದ್ರ ಪಟೇಲ್ (ಉಪನಾಯಕ), ಸಾಹಿಲ್ ಪರಾಖ್, ಕಾರ್ತಿಕೇಯ ಕೆಪಿ, ಮೊಹಮ್ಮದ್ ಅಮಾನ್ (ನಾಯಕ), ಕಿರಣ್ ಚೋರ್ಮಲೆ, ಅಭಿಜ್ಞಾನ್ ಕುಂದು (ವಿ.ಕೀ), ಹರ್ವಂಶ್ ಸಿಂಗ್ ಪಂಗಾಲಿಯಾ (ವಿ.ಕೀ), ಸಮಿತ್ ದ್ರಾವಿಡ್, ಯುಧಾಜಿತ್ ಗುಹಾ, ಸಮರ್ಥ್ ಎನ್‌, ನಿಖಿಲ್ ಕುಮಾರ್, ಚೇತನ್ ಶರ್ಮಾ, ಹಾರ್ದಿಕ್ ರಾಜ್, ರೋಹಿತ್ ರಾಜಾವತ್, ಮೊಹಮ್ಮದ್ ಇನಾನ್.

ಟೆಸ್ಟ್‌ ಸರಣಿ: ವೈಭವ್ ಸೂರ್ಯವಂಶಿ, ನಿತ್ಯ ಪಾಂಡ್ಯ, ವಿಹಾನ್ ಮಲ್ಹೋತ್ರಾ (ಉಪ ನಾಯಕ), ಸೋಹಮ್ ಪಟವರ್ಧನ್ (ನಾಯಕ), ಕಾರ್ತಿಕೇಯ ಕೆ ಪಿ, ಸಮಿತ್ ದ್ರಾವಿಡ್, ಅಭಿಗ್ಯಾನ್ ಕುಂದು (ವಿ.ಕೀ), ಹರ್ವಂಶ್ ಸಿಂಗ್ ಪಂಗಾಲಿಯಾ(ವಿ.ಕೀ), ಚೇತನ್ ಶರ್ಮಾ, ಸಮರ್ಥ್ ಎನ್‌, ಆದಿತ್ಯ ರಾವತ್, ನಿಖಿಲ್ ಕುಮಾರ್, ಅನ್ಮೋಲ್ಜೀತ್ ಸಿಂಗ್, ಆದಿತ್ಯ ಸಿಂಗ್, ಮೊಹಮ್ಮದ್ ಇನಾನ್.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

7 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

9 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

11 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

11 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

11 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

11 hours ago