ಕ್ರೀಡೆ

ಆಸೀಸ್‌ ವಿರುದ್ಧ U19 ಸರಣಿ: ಟೀಂ ಇಂಡಿಯಾಗೆ ಆಯ್ಕೆಯಾದ ಸಮಿತ್‌ ದ್ರಾವಿಡ್‌!

ನವದೆಹಲಿ: ಟೀಂ ಇಂಡಿಯಾದ ಮಾಜಿ ಕೋಚ್‌ ದ್ರಾವಿಡ್ ಅವರ ಪುತ್ರ ಸಮಿತ್‌ ದ್ರಾವಿಡ್‌ ಅವರು ತವರಿನಲ್ಲಿ ನಡೆಯಲಿರುವ 19 ವರ್ಷದ ಒಳಗಿನವರ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.

ತವರಿನಲ್ಲಿ ಭಾರತ ತಂಡ ಆಸೀಸ್‌ ವಿರುದ್ಧ ಸೆ.21 ರಿಂದ ಅ.10 ವರೆಗೆ ಮೂರು ಏಕದಿನ ಹಾಗೂ ನಾಲ್ಕು ದಿನಗಳ ಎರಡು ಟೆಸ್ಟ್‌ ಪಂದ್ಯ ಆಡಲಿದೆ.

ಸಮಿತ್‌ ಅವರು ಏಕದಿನ ಹಾಗೂ ನಾಲ್ಕು ದಿನಗಳ ಟೆಸ್ಟ್‌ ಸರಣಿ ಎರಡೂ ತಂಡಗಳಲ್ಲಿಯೂ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ. ಇನ್ನು ಸಮಿತ್‌ ಹೊರತುಪಡಿಸಿ ಕರ್ನಾಟಕದಿಂದ ಕೆ.ಪಿ ಕಾರ್ತಿಕೇಯ, ಎನ್‌ ಸಮರ್ಥ್‌ ಹಾಗೂ ಹಾರ್ದಿಕ್‌ ರಾಜ್‌ ಅವರು ಆಯ್ಕೆಯಾಗಿದ್ದಾರೆ.

ಆಸೀಸ್‌ ವಿರುದ್ಧ ಸರಣಿ ವೇಳಾಪಟ್ಟಿ:

ಏಕದಿನ ಸರಣಿ
ಸೆ.21: ಮೊದಲ ಏಕದಿನ ಪಂದ್ಯ
ಸೆ.23: ಎರಡನೇ ಏಕದಿನ ಪಂದ್ಯ
ಸೆ.26: ಮೂರನೇ ಏಕದಿನ ಪಂದ್ಯ

ನಾಲ್ಕು ದಿನಗಳ ಟೆಸ್ಟ್‌ ಸರಣಿ
ಸೆ.30 ರಿಂದ ಅ.3: ಮೊದಲ ಟೆಸ್ಟ್‌
ಅ.7 ರಿಂದ ಅ.10: ಎರಡನೇ ಟೆಸ್ಟ್‌

ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಬೆಳಿಗ್ಗೆ 9.30 ಗಂಟೆಗೆ ಆರಂಭವಾಗಲಿದೆ.

ಆಸೀಸ್‌ ವಿರುದ್ಧ ಸರಣಿಗೆ ಟೀಂ ಇಂಡಿಯಾ ತಂಡ ಇಂತಿದೆ:

ಏಕದಿನ ಸರಣಿ: ರುದ್ರ ಪಟೇಲ್ (ಉಪನಾಯಕ), ಸಾಹಿಲ್ ಪರಾಖ್, ಕಾರ್ತಿಕೇಯ ಕೆಪಿ, ಮೊಹಮ್ಮದ್ ಅಮಾನ್ (ನಾಯಕ), ಕಿರಣ್ ಚೋರ್ಮಲೆ, ಅಭಿಜ್ಞಾನ್ ಕುಂದು (ವಿ.ಕೀ), ಹರ್ವಂಶ್ ಸಿಂಗ್ ಪಂಗಾಲಿಯಾ (ವಿ.ಕೀ), ಸಮಿತ್ ದ್ರಾವಿಡ್, ಯುಧಾಜಿತ್ ಗುಹಾ, ಸಮರ್ಥ್ ಎನ್‌, ನಿಖಿಲ್ ಕುಮಾರ್, ಚೇತನ್ ಶರ್ಮಾ, ಹಾರ್ದಿಕ್ ರಾಜ್, ರೋಹಿತ್ ರಾಜಾವತ್, ಮೊಹಮ್ಮದ್ ಇನಾನ್.

ಟೆಸ್ಟ್‌ ಸರಣಿ: ವೈಭವ್ ಸೂರ್ಯವಂಶಿ, ನಿತ್ಯ ಪಾಂಡ್ಯ, ವಿಹಾನ್ ಮಲ್ಹೋತ್ರಾ (ಉಪ ನಾಯಕ), ಸೋಹಮ್ ಪಟವರ್ಧನ್ (ನಾಯಕ), ಕಾರ್ತಿಕೇಯ ಕೆ ಪಿ, ಸಮಿತ್ ದ್ರಾವಿಡ್, ಅಭಿಗ್ಯಾನ್ ಕುಂದು (ವಿ.ಕೀ), ಹರ್ವಂಶ್ ಸಿಂಗ್ ಪಂಗಾಲಿಯಾ(ವಿ.ಕೀ), ಚೇತನ್ ಶರ್ಮಾ, ಸಮರ್ಥ್ ಎನ್‌, ಆದಿತ್ಯ ರಾವತ್, ನಿಖಿಲ್ ಕುಮಾರ್, ಅನ್ಮೋಲ್ಜೀತ್ ಸಿಂಗ್, ಆದಿತ್ಯ ಸಿಂಗ್, ಮೊಹಮ್ಮದ್ ಇನಾನ್.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

21 mins ago

ಅಧಿಕಾರ ಹಂಚಿಕೆ ಗೊಂದಲ; ಬಿಜೆಪಿ, ಜಾ.ದಳದಲ್ಲಿ ಆತ್ಮವಿಶ್ವಾಸ ಹೆಚ್ಚಳ

ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…

36 mins ago

ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವಕ್ಕೆ ಸಿದ್ಧತೆ

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…

51 mins ago

ಹೊರವಲಯದ ನಿವೇಶನಗಳಿಗೆ ಹೆಚ್ಚಾಗಲಿದೆ ಮತ್ತಷ್ಟು ಬೇಡಿಕೆ

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…

1 hour ago

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

4 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

4 hours ago