ಕ್ರೀಡೆ

ಆಸೀಸ್‌ ವಿರುದ್ಧ U19 ಸರಣಿ: ಟೀಂ ಇಂಡಿಯಾಗೆ ಆಯ್ಕೆಯಾದ ಸಮಿತ್‌ ದ್ರಾವಿಡ್‌!

ನವದೆಹಲಿ: ಟೀಂ ಇಂಡಿಯಾದ ಮಾಜಿ ಕೋಚ್‌ ದ್ರಾವಿಡ್ ಅವರ ಪುತ್ರ ಸಮಿತ್‌ ದ್ರಾವಿಡ್‌ ಅವರು ತವರಿನಲ್ಲಿ ನಡೆಯಲಿರುವ 19 ವರ್ಷದ ಒಳಗಿನವರ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.

ತವರಿನಲ್ಲಿ ಭಾರತ ತಂಡ ಆಸೀಸ್‌ ವಿರುದ್ಧ ಸೆ.21 ರಿಂದ ಅ.10 ವರೆಗೆ ಮೂರು ಏಕದಿನ ಹಾಗೂ ನಾಲ್ಕು ದಿನಗಳ ಎರಡು ಟೆಸ್ಟ್‌ ಪಂದ್ಯ ಆಡಲಿದೆ.

ಸಮಿತ್‌ ಅವರು ಏಕದಿನ ಹಾಗೂ ನಾಲ್ಕು ದಿನಗಳ ಟೆಸ್ಟ್‌ ಸರಣಿ ಎರಡೂ ತಂಡಗಳಲ್ಲಿಯೂ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ. ಇನ್ನು ಸಮಿತ್‌ ಹೊರತುಪಡಿಸಿ ಕರ್ನಾಟಕದಿಂದ ಕೆ.ಪಿ ಕಾರ್ತಿಕೇಯ, ಎನ್‌ ಸಮರ್ಥ್‌ ಹಾಗೂ ಹಾರ್ದಿಕ್‌ ರಾಜ್‌ ಅವರು ಆಯ್ಕೆಯಾಗಿದ್ದಾರೆ.

ಆಸೀಸ್‌ ವಿರುದ್ಧ ಸರಣಿ ವೇಳಾಪಟ್ಟಿ:

ಏಕದಿನ ಸರಣಿ
ಸೆ.21: ಮೊದಲ ಏಕದಿನ ಪಂದ್ಯ
ಸೆ.23: ಎರಡನೇ ಏಕದಿನ ಪಂದ್ಯ
ಸೆ.26: ಮೂರನೇ ಏಕದಿನ ಪಂದ್ಯ

ನಾಲ್ಕು ದಿನಗಳ ಟೆಸ್ಟ್‌ ಸರಣಿ
ಸೆ.30 ರಿಂದ ಅ.3: ಮೊದಲ ಟೆಸ್ಟ್‌
ಅ.7 ರಿಂದ ಅ.10: ಎರಡನೇ ಟೆಸ್ಟ್‌

ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಬೆಳಿಗ್ಗೆ 9.30 ಗಂಟೆಗೆ ಆರಂಭವಾಗಲಿದೆ.

ಆಸೀಸ್‌ ವಿರುದ್ಧ ಸರಣಿಗೆ ಟೀಂ ಇಂಡಿಯಾ ತಂಡ ಇಂತಿದೆ:

ಏಕದಿನ ಸರಣಿ: ರುದ್ರ ಪಟೇಲ್ (ಉಪನಾಯಕ), ಸಾಹಿಲ್ ಪರಾಖ್, ಕಾರ್ತಿಕೇಯ ಕೆಪಿ, ಮೊಹಮ್ಮದ್ ಅಮಾನ್ (ನಾಯಕ), ಕಿರಣ್ ಚೋರ್ಮಲೆ, ಅಭಿಜ್ಞಾನ್ ಕುಂದು (ವಿ.ಕೀ), ಹರ್ವಂಶ್ ಸಿಂಗ್ ಪಂಗಾಲಿಯಾ (ವಿ.ಕೀ), ಸಮಿತ್ ದ್ರಾವಿಡ್, ಯುಧಾಜಿತ್ ಗುಹಾ, ಸಮರ್ಥ್ ಎನ್‌, ನಿಖಿಲ್ ಕುಮಾರ್, ಚೇತನ್ ಶರ್ಮಾ, ಹಾರ್ದಿಕ್ ರಾಜ್, ರೋಹಿತ್ ರಾಜಾವತ್, ಮೊಹಮ್ಮದ್ ಇನಾನ್.

ಟೆಸ್ಟ್‌ ಸರಣಿ: ವೈಭವ್ ಸೂರ್ಯವಂಶಿ, ನಿತ್ಯ ಪಾಂಡ್ಯ, ವಿಹಾನ್ ಮಲ್ಹೋತ್ರಾ (ಉಪ ನಾಯಕ), ಸೋಹಮ್ ಪಟವರ್ಧನ್ (ನಾಯಕ), ಕಾರ್ತಿಕೇಯ ಕೆ ಪಿ, ಸಮಿತ್ ದ್ರಾವಿಡ್, ಅಭಿಗ್ಯಾನ್ ಕುಂದು (ವಿ.ಕೀ), ಹರ್ವಂಶ್ ಸಿಂಗ್ ಪಂಗಾಲಿಯಾ(ವಿ.ಕೀ), ಚೇತನ್ ಶರ್ಮಾ, ಸಮರ್ಥ್ ಎನ್‌, ಆದಿತ್ಯ ರಾವತ್, ನಿಖಿಲ್ ಕುಮಾರ್, ಅನ್ಮೋಲ್ಜೀತ್ ಸಿಂಗ್, ಆದಿತ್ಯ ಸಿಂಗ್, ಮೊಹಮ್ಮದ್ ಇನಾನ್.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

3 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

4 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

5 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

6 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

11 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

13 hours ago