ಕ್ರೀಡೆ

ಆಸೀಸ್‌ ವಿರುದ್ಧ U19 ಸರಣಿ: ಟೀಂ ಇಂಡಿಯಾಗೆ ಆಯ್ಕೆಯಾದ ಸಮಿತ್‌ ದ್ರಾವಿಡ್‌!

ನವದೆಹಲಿ: ಟೀಂ ಇಂಡಿಯಾದ ಮಾಜಿ ಕೋಚ್‌ ದ್ರಾವಿಡ್ ಅವರ ಪುತ್ರ ಸಮಿತ್‌ ದ್ರಾವಿಡ್‌ ಅವರು ತವರಿನಲ್ಲಿ ನಡೆಯಲಿರುವ 19 ವರ್ಷದ ಒಳಗಿನವರ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.

ತವರಿನಲ್ಲಿ ಭಾರತ ತಂಡ ಆಸೀಸ್‌ ವಿರುದ್ಧ ಸೆ.21 ರಿಂದ ಅ.10 ವರೆಗೆ ಮೂರು ಏಕದಿನ ಹಾಗೂ ನಾಲ್ಕು ದಿನಗಳ ಎರಡು ಟೆಸ್ಟ್‌ ಪಂದ್ಯ ಆಡಲಿದೆ.

ಸಮಿತ್‌ ಅವರು ಏಕದಿನ ಹಾಗೂ ನಾಲ್ಕು ದಿನಗಳ ಟೆಸ್ಟ್‌ ಸರಣಿ ಎರಡೂ ತಂಡಗಳಲ್ಲಿಯೂ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ. ಇನ್ನು ಸಮಿತ್‌ ಹೊರತುಪಡಿಸಿ ಕರ್ನಾಟಕದಿಂದ ಕೆ.ಪಿ ಕಾರ್ತಿಕೇಯ, ಎನ್‌ ಸಮರ್ಥ್‌ ಹಾಗೂ ಹಾರ್ದಿಕ್‌ ರಾಜ್‌ ಅವರು ಆಯ್ಕೆಯಾಗಿದ್ದಾರೆ.

ಆಸೀಸ್‌ ವಿರುದ್ಧ ಸರಣಿ ವೇಳಾಪಟ್ಟಿ:

ಏಕದಿನ ಸರಣಿ
ಸೆ.21: ಮೊದಲ ಏಕದಿನ ಪಂದ್ಯ
ಸೆ.23: ಎರಡನೇ ಏಕದಿನ ಪಂದ್ಯ
ಸೆ.26: ಮೂರನೇ ಏಕದಿನ ಪಂದ್ಯ

ನಾಲ್ಕು ದಿನಗಳ ಟೆಸ್ಟ್‌ ಸರಣಿ
ಸೆ.30 ರಿಂದ ಅ.3: ಮೊದಲ ಟೆಸ್ಟ್‌
ಅ.7 ರಿಂದ ಅ.10: ಎರಡನೇ ಟೆಸ್ಟ್‌

ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಬೆಳಿಗ್ಗೆ 9.30 ಗಂಟೆಗೆ ಆರಂಭವಾಗಲಿದೆ.

ಆಸೀಸ್‌ ವಿರುದ್ಧ ಸರಣಿಗೆ ಟೀಂ ಇಂಡಿಯಾ ತಂಡ ಇಂತಿದೆ:

ಏಕದಿನ ಸರಣಿ: ರುದ್ರ ಪಟೇಲ್ (ಉಪನಾಯಕ), ಸಾಹಿಲ್ ಪರಾಖ್, ಕಾರ್ತಿಕೇಯ ಕೆಪಿ, ಮೊಹಮ್ಮದ್ ಅಮಾನ್ (ನಾಯಕ), ಕಿರಣ್ ಚೋರ್ಮಲೆ, ಅಭಿಜ್ಞಾನ್ ಕುಂದು (ವಿ.ಕೀ), ಹರ್ವಂಶ್ ಸಿಂಗ್ ಪಂಗಾಲಿಯಾ (ವಿ.ಕೀ), ಸಮಿತ್ ದ್ರಾವಿಡ್, ಯುಧಾಜಿತ್ ಗುಹಾ, ಸಮರ್ಥ್ ಎನ್‌, ನಿಖಿಲ್ ಕುಮಾರ್, ಚೇತನ್ ಶರ್ಮಾ, ಹಾರ್ದಿಕ್ ರಾಜ್, ರೋಹಿತ್ ರಾಜಾವತ್, ಮೊಹಮ್ಮದ್ ಇನಾನ್.

ಟೆಸ್ಟ್‌ ಸರಣಿ: ವೈಭವ್ ಸೂರ್ಯವಂಶಿ, ನಿತ್ಯ ಪಾಂಡ್ಯ, ವಿಹಾನ್ ಮಲ್ಹೋತ್ರಾ (ಉಪ ನಾಯಕ), ಸೋಹಮ್ ಪಟವರ್ಧನ್ (ನಾಯಕ), ಕಾರ್ತಿಕೇಯ ಕೆ ಪಿ, ಸಮಿತ್ ದ್ರಾವಿಡ್, ಅಭಿಗ್ಯಾನ್ ಕುಂದು (ವಿ.ಕೀ), ಹರ್ವಂಶ್ ಸಿಂಗ್ ಪಂಗಾಲಿಯಾ(ವಿ.ಕೀ), ಚೇತನ್ ಶರ್ಮಾ, ಸಮರ್ಥ್ ಎನ್‌, ಆದಿತ್ಯ ರಾವತ್, ನಿಖಿಲ್ ಕುಮಾರ್, ಅನ್ಮೋಲ್ಜೀತ್ ಸಿಂಗ್, ಆದಿತ್ಯ ಸಿಂಗ್, ಮೊಹಮ್ಮದ್ ಇನಾನ್.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago