ಹೈದರಾಬಾದ್: ಮುಂಬರುವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ಸಲಹೆಗಾರರಾಗಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ನೇಮಕ ಮಾಡಲಾಗಿದೆ.
‘ಭಾರತದ ಮುಂಚೂಣಿ ಕ್ರೀಡಾಪಟು, ಯೂತ್ ಐಕಾನ್, ವೃತ್ತಿಜೀವನದುದ್ದಕ್ಕೂ ಧೈರ್ಯಶಾಲಿ ಮತ್ತು ಎಲ್ಲ ಅಡೆತಡೆಗಳನ್ನು ಮೀರಿ ಆಡಿದ ಆಟಗಾರ್ತಿ, ಮೈದಾನದ ಒಳಗೂ ಹೊರಗೂ ಚಾಂಪಿಯನ್ ಸಾನಿಯಾ ಮಿರ್ಜಾ, ಅವರನ್ನು ಆರ್ಸಿಬಿ ಮಹಿಳಾ ಕ್ರಿಕೆಟ್ ತಂಡದ ಸಲಹೆಗಾರರಾಗಿ ಸ್ವಾಗತಿಸಲು ನಾವು ಹೆಮ್ಮೆಪಡುತ್ತೇವೆ’ಎಂದು ಆರ್ಸಿಬಿ ಟ್ವಿಟರ್ ಪುಟದಲ್ಲಿ ಬರೆಯಲಾಗಿದೆ. ಇತ್ತೀಚೆಗೆ ನಡೆದ ಮಹಿಳಾ ಪ್ರೀಮಿಯರ್ ಲೀಗ್ನ ಮೊದಲ ಹರಾಜಿನಲ್ಲಿ ಆರ್ಸಿಬಿ ತಂಡ ಸ್ಮೃತಿ ಮಂದಾನ ಅವರಿಗೆ, ₹3.4 ಕೋಟಿ ಕೊಟ್ಟು ಖರೀದಿಸಿತ್ತು. ಸೋಪಿಯಾ ಡಿವೈನ್, ರೇಣುಕಾ ಸಿಂಗ್ ಮುಂತಾದ ಆಟಗಾರರು ತಂಡದಲ್ಲಿದ್ದಾರೆ. ದುಬೈನಲ್ಲಿ ತನ್ನ ಟೆನಿಸ್ ವೃತ್ತಿ ಜೀವನದ ಕೊನೆಯ ಪಂದ್ಯಾವಳಿಯನ್ನು ಆಡಲಿರುವ ಮಿರ್ಜಾ, ಆರ್ಸಿಬಿ ಫ್ರಾಂಚೈಸಿಯ ಭಾಗವಾಗಲಿದ್ದಾರೆ. ಸಾನಿಯಾ ಮಿರ್ಜಾ, ಕ್ರಿಕೆಟ್ ಅನ್ನು ಬಹಳ ಪ್ರೀತಿಸುತ್ತಾರೆ ಮತ್ತು ಆಗಾಗ್ಗೆ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ.
ಇತ್ತೀಚೆಗೆ ಸಾನಿಯಾ ಮಿರ್ಜಾ, ರೋಹನ್ ಬೋಪಣ್ಣ ಅವರೊಂದಿಗೆ ಆಸ್ಟ್ರೇಲಿಯನ್ ಓಪನ್ ಮಿಶ್ರ ಡಬಲ್ಸ್ನ ಫೈನಲ್ಗೆ ಪ್ರವೇಶಿಸಿದ್ದರು.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…