ಕ್ರೀಡೆ

WPL RCB ಮಹಿಳಾ ತಂಡದ ಸಲಹೆಗಾರರಾಗಿ ಸಾನಿಯಾ ಮಿರ್ಜಾ ನೇಮಕ

ಹೈದರಾಬಾದ್: ಮುಂಬರುವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ಸಲಹೆಗಾರರಾಗಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ನೇಮಕ ಮಾಡಲಾಗಿದೆ.

‘ಭಾರತದ ಮುಂಚೂಣಿ ಕ್ರೀಡಾಪಟು, ಯೂತ್ ಐಕಾನ್, ವೃತ್ತಿಜೀವನದುದ್ದಕ್ಕೂ ಧೈರ್ಯಶಾಲಿ ಮತ್ತು ಎಲ್ಲ ಅಡೆತಡೆಗಳನ್ನು ಮೀರಿ ಆಡಿದ ಆಟಗಾರ್ತಿ, ಮೈದಾನದ ಒಳಗೂ ಹೊರಗೂ ಚಾಂಪಿಯನ್ ಸಾನಿಯಾ ಮಿರ್ಜಾ,  ಅವರನ್ನು ಆರ್‌ಸಿಬಿ ಮಹಿಳಾ ಕ್ರಿಕೆಟ್ ತಂಡದ ಸಲಹೆಗಾರರಾಗಿ ಸ್ವಾಗತಿಸಲು ನಾವು ಹೆಮ್ಮೆಪಡುತ್ತೇವೆ’ಎಂದು ಆರ್‌ಸಿಬಿ ಟ್ವಿಟರ್ ಪುಟದಲ್ಲಿ ಬರೆಯಲಾಗಿದೆ. ಇತ್ತೀಚೆಗೆ ನಡೆದ ಮಹಿಳಾ ಪ್ರೀಮಿಯರ್‌ ಲೀಗ್‌ನ ಮೊದಲ ಹರಾಜಿನಲ್ಲಿ ಆರ್‌ಸಿಬಿ ತಂಡ ಸ್ಮೃತಿ ಮಂದಾನ ಅವರಿಗೆ, ₹3.4 ಕೋಟಿ ಕೊಟ್ಟು ಖರೀದಿಸಿತ್ತು. ಸೋಪಿಯಾ ಡಿವೈನ್, ರೇಣುಕಾ ಸಿಂಗ್ ಮುಂತಾದ ಆಟಗಾರರು ತಂಡದಲ್ಲಿದ್ದಾರೆ. ದುಬೈನಲ್ಲಿ ತನ್ನ ಟೆನಿಸ್ ವೃತ್ತಿ ಜೀವನದ ಕೊನೆಯ ಪಂದ್ಯಾವಳಿಯನ್ನು ಆಡಲಿರುವ ಮಿರ್ಜಾ, ಆರ್‌ಸಿಬಿ ಫ್ರಾಂಚೈಸಿಯ ಭಾಗವಾಗಲಿದ್ದಾರೆ. ಸಾನಿಯಾ ಮಿರ್ಜಾ, ಕ್ರಿಕೆಟ್ ಅನ್ನು ಬಹಳ ಪ್ರೀತಿಸುತ್ತಾರೆ ಮತ್ತು ಆಗಾಗ್ಗೆ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ.

ಇತ್ತೀಚೆಗೆ ಸಾನಿಯಾ ಮಿರ್ಜಾ,  ರೋಹನ್ ಬೋಪಣ್ಣ ಅವರೊಂದಿಗೆ ಆಸ್ಟ್ರೇಲಿಯನ್ ಓಪನ್ ಮಿಶ್ರ ಡಬಲ್ಸ್‌ನ ಫೈನಲ್‌ಗೆ ಪ್ರವೇಶಿಸಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago