ಕ್ರೀಡೆ

ಶೋಯೆಬ್ ಮಲಿಕ್ ಜೊತೆಗಿನ ವಿಚ್ಛೇದನ ಖಚಿತಪಡಿಸಿದ ಸಾನಿಯಾ ಮಿರ್ಜಾ

ನವದೆಹಲಿ: ಭಾರತೀಯ ಟೆನಿಸ್‌ ತಾರೆ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಜೊತೆಗಿನ ವಿಚ್ಛೇದನವನ್ನು ದೃಢಪಡಿಸಿದ್ದಾರೆ. ಮತ್ತು ತನ್ನ ಮಾಜಿ ಪತಿಯ ಮುಂದಿನ ಜೀವನಕ್ಕೆ ಶುಭ ಹಾರೈಸಿದ್ದಾರೆ.

ಕ್ರಿಕೆಟಿಗ ಶೋಯೆಬ್ ಮಲಿಕ್ ತಮ್ಮದೇ ದೇಶದ ಜನಪ್ರಿಯ ನಟಿ ಸನಾ ಜಾವೇದ್ ಜೊತೆಗೆ ವಿವಾಹವಾಗಿರುವುದಾಗಿ ಘೋಷಿಸಿದ ನಂತರ ಸಾನಿಯಾ ಮತ್ತು ಮಲ್ಲಿಕ್‌ ವಿಚ್ಛೇದನ ಪಡೆದಿದ್ದಾರೆ ಎಂದು ಸಾನಿಯಾ ಮಿರ್ಜಾ ಅವರ ಕುಟುಂಬ ಖಚಿತಪಡಿಸಿದೆ.

ಈ ಇಬ್ಬರು ಸೆಲೆಬ್ರಿಟಿಗಳ ವಿವಾಹ 14 ವರ್ಷಗಳ ಹಿಂದೆ ಸುದ್ದಿ ಮಾಡಿದಂತೆ ವಿಚ್ಛೇದನ ಕೂಡ ಭಾರೀ ಸದ್ದು ಮಾಡಿದೆ. 41 ವರ್ಷದ ಮಲಿಕ್ ನಿನ್ನೆ ಸಾಮಾಜಿಕ ಮಾಧ್ಯಮದಲ್ಲಿ ಸನಾ ಅವರೊಂದಿಗಿನ ಮದುವೆಯಾದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

“ಸಾನಿಯಾ ಯಾವಾಗಲೂ ತನ್ನ ವೈಯಕ್ತಿಕ ಜೀವನವನ್ನು ಬಹಿರಂಗವಾಗಿ ಮಾತನಾಡದೆ ಆದಷ್ಟು ದೂರವಿಟ್ಟಿದ್ದರು. ಶೋಯೆಬ್ ಮತ್ತು ಸಾನಿಯಾ ಹಲವು ತಿಂಗಳುಗಳ ಹಿಂದೆ ವಿಚ್ಛೇದನ ಪಡೆದಿರುವ ವಿಷಯವನ್ನು ತಿಳಿಸುವ ಅವಶ್ಯಕತೆ ಇಂದು ಸೃಷ್ಟಿಯಾಗಿದೆ. ಶೋಯೆಬ್ ಅವರ ಹೊಸ ಜೀವನ ಪಯಣಕ್ಕೆ ಸಾನಿಯಾ ಮಿರ್ಜಾ ಶುಭ ಹಾರೈಸುತ್ತಾರೆ!,” ಎಂದು ಅವರ ಕುಟುಂಬ ಹೇಳಿಕೆಯಲ್ಲಿ ತಿಳಿಸಿದೆ.

ಸಾನಿಯಾ ಜೀವನದ ಈ ಸೂಕ್ಷ್ಮ ಅವಧಿಯಲ್ಲಿ, ನಾವು ಎಲ್ಲಾ ಅಭಿಮಾನಿಗಳು ಮತ್ತು ಹಿತೈಷಿಗಳಲ್ಲಿ ಯಾವುದೇ ಊಹಾಪೋಹಗಳಿಗೆ ಒಳಗಾಗದಂತೆ ಮತ್ತು ಅವರ ಜೀವನದ ಗೌಪ್ಯತೆಯ ಅಗತ್ಯವನ್ನು ಗೌರವಿಸುವಂತೆ ಕೇಳಿಕೊಳ್ಳುತ್ತೇವೆ ಎಂದು ಸಹ ಕುಟುಂಬ ವರ್ಗ ಮನವಿ ಮಾಡಿಕೊಂಡಿದೆ.

ಸಾನಿಯಾ ಮಿರ್ಜಾ ಹೈದರಾಬಾದ್‌ನಲ್ಲಿ ಏಪ್ರಿಲ್ 2010 ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾಗಿದ್ದರು. ಮಲಿಕ್ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ 37 ವರ್ಷದ ಸಾನಿಯಾ ಮಿರ್ಜಾ ಅವರನ್ನು ಅನ್‌ಫಾಲೋ ಮಾಡಿದಾಗ ಅವರಿಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂದು ಕೆಲವು ವರ್ಷಗಳಿಂದ ಕೇಳಿಬರುತ್ತಿದ್ದ ವದಂತಿಗಳಿಗೆ ರೆಕ್ಕೆಪುಕ್ಕ ಸಿಕ್ಕಿತ್ತು.

ಇವರಿಗೆ ಐದು ವರ್ಷದ ಇಜಾನ್ ಎಂಬ ಮಗನಿದ್ದು, ಪ್ರಸ್ತುತ ಮಗು ತಾಯಿ ಸಾನಿಯಾ ಮಿರ್ಜಾ ಅವರೊಂದಿಗೆ ವಾಸವಾಗಿದೆ. ಶೋಯೆಬ್ ಮಲಿಕ್ ವಿವಾಹದ ಘೋಷಣೆ ಮಾಡಿದ ಒಂದು ದಿನಕ್ಕೆ ಮೊದಲು ಸಾನಿಯಾ ಮಿರ್ಜಾ ಬೇಸರದ ಸಂಗತಿಯನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು.

“ಮದುವೆ ಕಷ್ಟ, ವಿಚ್ಛೇದನ ಕಷ್ಟ. ನಿಮ್ಮ ಕಷ್ಟವನ್ನು ಆರಿಸಿ. ಸ್ಥೂಲಕಾಯತೆ ಕಷ್ಟ. ಫಿಟ್ ಆಗಿರುವುದು ಕಷ್ಟ, ನಿಮ್ಮ ಕಷ್ಟವನ್ನು ಆರಿಸಿಕೊಳ್ಳಿ. ಸಾಲದಲ್ಲಿರುವುದು ಕಷ್ಟ. ಆರ್ಥಿಕವಾಗಿ ಶಿಸ್ತಿನಲ್ಲಿರುವುದು ಕಷ್ಟ. ನಿಮ್ಮ ಕಷ್ಟವನ್ನು ಆರಿಸಿಕೊಳ್ಳಿ, ಯಾವುದೇ ಸಂವಹನ ಕಷ್ಟ. ಜೀವನವು ಎಂದಿಗೂ ಸುಲಭವಾಗುವುದಿಲ್ಲ. ನಾನು ಯಾವಾಗಲೂ ಕಠಿಣವಾಗಿರುತ್ತೇನೆ. ಆದರೆ ನಾವು ನಮ್ಮ ಕಷ್ಟವನ್ನು ಆರಿಸಿಕೊಳ್ಳಬಹುದು. ಬುದ್ಧಿವಂತಿಕೆಯಿಂದ ಆರಿಸಿಕೊಳ್ಳಿ ಎಂದು ಸಾನಿಯಾ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದರು.

andolanait

Recent Posts

ಓದುಗರ ಪತ್ರ: ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ವಿಷಾದಕರ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂಬ ಹಿನ್ನೆಲೆಯಲ್ಲಿ, ಮಲಯಾಳಂ ಭಾಷಾ ಮಸೂದೆ ೨೦೨೫ ಅನ್ನು…

2 hours ago

ಓದುಗರ ಪತ್ರ: ಗಡಿಭಾಗದ ಶಾಲೆಗಳಲ್ಲಿ ಕನ್ನಡ ನಿರ್ಲಕ್ಷ್ಯ ಸಲ್ಲದು

ನಮ್ಮ ರಾಜ್ಯದ ಗಡಿಭಾಗಗಳಲ್ಲಿನ ಅನ್ಯಭಾಷಾ ಮಾಧ್ಯಮ ಶಾಲೆಗಳಲ್ಲಿ (ತಮಿಳು, ಮರಾಠಿ, ಮಲಯಾಳಂ, ಉರ್ದು, ತೆಲುಗು) ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ಕಡ್ಡಾಯಗೊಳಿ…

2 hours ago

ಓದುಗರ ಪತ್ರ: ಜಯಚಾಮರಾಜ ಒಡೆಯರ್ ವೃತ್ತದ ಹೆಸರು ಉಳಿಯಲಿ

ಮಂಡ್ಯ ಸೀಮೆಯ ಆರ್ಥಿಕ, ಸಾಮಾಜಿಕ, ಕೈಗಾರಿಕೆ, ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಕಾರ್ಯದಲ್ಲಿ ಮೈಸೂರು ರಾಜವಂಶಸ್ಥರ ಕೊಡುಗೆ ಅಪಾರ.…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಇಡಿ ದಾಳಿ: ಕೇಂದ್ರದ ಜೊತೆ ಮತ್ತೆ ಮಮತಾ ಜಟಾಪಟಿ

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಪಶ್ಚಿಮ ಬಂಗಾಳದ ರಾಜಕಾರಣ ಎಂದರೆ ಅದು ಬೀದಿ ಕಾಳಗ. ಈ ಬೀದಿ ಕಾಳಗದ ರಾಜಕಾರಣ…

2 hours ago

ದುರಸ್ತಿಯಾದ ಬೆನ್ನಲ್ಲೇ ಗುಂಡಿಮಯವಾದ ಕರಡಿಗೋಡು ರಸ್ತೆ

ಕೃಷ್ಣ ಸಿದ್ದಾಪುರ ಕಳಪೆ ರಸ್ತೆ ಕಾಮಗಾರಿ; ೩೦ ಲಕ್ಷ ರೂ. ಅನುದಾನ ವ್ಯರ್ಥ ಸಿದ್ದಾಪುರ: ಇಲ್ಲಿನ ಕರಡಿಗೋಡು ಗ್ರಾಮದಲ್ಲಿ ರಸ್ತೆ…

2 hours ago

ಮೂಲಸೌಕರ್ಯ ವಂಚಿತ ಮುನಿಯಪ್ಪನ ದೊಡ್ಡಿ ಗ್ರಾಮ

ಮಹಾದೇಶ್ ಎಂ.ಗೌಡ ಕುಡಿಯುವ ನೀರು, ಚರಂಡಿ, ಸಾರಿಗೆ ವ್ಯವಸ್ಥೆ ಕಲ್ಪಿಸಲು ಗ್ರಾಮಸ್ಥರ ಆಗ್ರಹ  ಹನೂರು: ಕುಡಿಯುವ ನೀರಿಗೆ ಹಾಹಾಕಾರ, ಶಾಲೆಗೆ…

2 hours ago