ಕ್ರೀಡೆ

ಶೋಯೆಬ್ ಮಲಿಕ್ ಜೊತೆಗಿನ ವಿಚ್ಛೇದನ ಖಚಿತಪಡಿಸಿದ ಸಾನಿಯಾ ಮಿರ್ಜಾ

ನವದೆಹಲಿ: ಭಾರತೀಯ ಟೆನಿಸ್‌ ತಾರೆ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಜೊತೆಗಿನ ವಿಚ್ಛೇದನವನ್ನು ದೃಢಪಡಿಸಿದ್ದಾರೆ. ಮತ್ತು ತನ್ನ ಮಾಜಿ ಪತಿಯ ಮುಂದಿನ ಜೀವನಕ್ಕೆ ಶುಭ ಹಾರೈಸಿದ್ದಾರೆ.

ಕ್ರಿಕೆಟಿಗ ಶೋಯೆಬ್ ಮಲಿಕ್ ತಮ್ಮದೇ ದೇಶದ ಜನಪ್ರಿಯ ನಟಿ ಸನಾ ಜಾವೇದ್ ಜೊತೆಗೆ ವಿವಾಹವಾಗಿರುವುದಾಗಿ ಘೋಷಿಸಿದ ನಂತರ ಸಾನಿಯಾ ಮತ್ತು ಮಲ್ಲಿಕ್‌ ವಿಚ್ಛೇದನ ಪಡೆದಿದ್ದಾರೆ ಎಂದು ಸಾನಿಯಾ ಮಿರ್ಜಾ ಅವರ ಕುಟುಂಬ ಖಚಿತಪಡಿಸಿದೆ.

ಈ ಇಬ್ಬರು ಸೆಲೆಬ್ರಿಟಿಗಳ ವಿವಾಹ 14 ವರ್ಷಗಳ ಹಿಂದೆ ಸುದ್ದಿ ಮಾಡಿದಂತೆ ವಿಚ್ಛೇದನ ಕೂಡ ಭಾರೀ ಸದ್ದು ಮಾಡಿದೆ. 41 ವರ್ಷದ ಮಲಿಕ್ ನಿನ್ನೆ ಸಾಮಾಜಿಕ ಮಾಧ್ಯಮದಲ್ಲಿ ಸನಾ ಅವರೊಂದಿಗಿನ ಮದುವೆಯಾದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

“ಸಾನಿಯಾ ಯಾವಾಗಲೂ ತನ್ನ ವೈಯಕ್ತಿಕ ಜೀವನವನ್ನು ಬಹಿರಂಗವಾಗಿ ಮಾತನಾಡದೆ ಆದಷ್ಟು ದೂರವಿಟ್ಟಿದ್ದರು. ಶೋಯೆಬ್ ಮತ್ತು ಸಾನಿಯಾ ಹಲವು ತಿಂಗಳುಗಳ ಹಿಂದೆ ವಿಚ್ಛೇದನ ಪಡೆದಿರುವ ವಿಷಯವನ್ನು ತಿಳಿಸುವ ಅವಶ್ಯಕತೆ ಇಂದು ಸೃಷ್ಟಿಯಾಗಿದೆ. ಶೋಯೆಬ್ ಅವರ ಹೊಸ ಜೀವನ ಪಯಣಕ್ಕೆ ಸಾನಿಯಾ ಮಿರ್ಜಾ ಶುಭ ಹಾರೈಸುತ್ತಾರೆ!,” ಎಂದು ಅವರ ಕುಟುಂಬ ಹೇಳಿಕೆಯಲ್ಲಿ ತಿಳಿಸಿದೆ.

ಸಾನಿಯಾ ಜೀವನದ ಈ ಸೂಕ್ಷ್ಮ ಅವಧಿಯಲ್ಲಿ, ನಾವು ಎಲ್ಲಾ ಅಭಿಮಾನಿಗಳು ಮತ್ತು ಹಿತೈಷಿಗಳಲ್ಲಿ ಯಾವುದೇ ಊಹಾಪೋಹಗಳಿಗೆ ಒಳಗಾಗದಂತೆ ಮತ್ತು ಅವರ ಜೀವನದ ಗೌಪ್ಯತೆಯ ಅಗತ್ಯವನ್ನು ಗೌರವಿಸುವಂತೆ ಕೇಳಿಕೊಳ್ಳುತ್ತೇವೆ ಎಂದು ಸಹ ಕುಟುಂಬ ವರ್ಗ ಮನವಿ ಮಾಡಿಕೊಂಡಿದೆ.

ಸಾನಿಯಾ ಮಿರ್ಜಾ ಹೈದರಾಬಾದ್‌ನಲ್ಲಿ ಏಪ್ರಿಲ್ 2010 ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾಗಿದ್ದರು. ಮಲಿಕ್ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ 37 ವರ್ಷದ ಸಾನಿಯಾ ಮಿರ್ಜಾ ಅವರನ್ನು ಅನ್‌ಫಾಲೋ ಮಾಡಿದಾಗ ಅವರಿಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂದು ಕೆಲವು ವರ್ಷಗಳಿಂದ ಕೇಳಿಬರುತ್ತಿದ್ದ ವದಂತಿಗಳಿಗೆ ರೆಕ್ಕೆಪುಕ್ಕ ಸಿಕ್ಕಿತ್ತು.

ಇವರಿಗೆ ಐದು ವರ್ಷದ ಇಜಾನ್ ಎಂಬ ಮಗನಿದ್ದು, ಪ್ರಸ್ತುತ ಮಗು ತಾಯಿ ಸಾನಿಯಾ ಮಿರ್ಜಾ ಅವರೊಂದಿಗೆ ವಾಸವಾಗಿದೆ. ಶೋಯೆಬ್ ಮಲಿಕ್ ವಿವಾಹದ ಘೋಷಣೆ ಮಾಡಿದ ಒಂದು ದಿನಕ್ಕೆ ಮೊದಲು ಸಾನಿಯಾ ಮಿರ್ಜಾ ಬೇಸರದ ಸಂಗತಿಯನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು.

“ಮದುವೆ ಕಷ್ಟ, ವಿಚ್ಛೇದನ ಕಷ್ಟ. ನಿಮ್ಮ ಕಷ್ಟವನ್ನು ಆರಿಸಿ. ಸ್ಥೂಲಕಾಯತೆ ಕಷ್ಟ. ಫಿಟ್ ಆಗಿರುವುದು ಕಷ್ಟ, ನಿಮ್ಮ ಕಷ್ಟವನ್ನು ಆರಿಸಿಕೊಳ್ಳಿ. ಸಾಲದಲ್ಲಿರುವುದು ಕಷ್ಟ. ಆರ್ಥಿಕವಾಗಿ ಶಿಸ್ತಿನಲ್ಲಿರುವುದು ಕಷ್ಟ. ನಿಮ್ಮ ಕಷ್ಟವನ್ನು ಆರಿಸಿಕೊಳ್ಳಿ, ಯಾವುದೇ ಸಂವಹನ ಕಷ್ಟ. ಜೀವನವು ಎಂದಿಗೂ ಸುಲಭವಾಗುವುದಿಲ್ಲ. ನಾನು ಯಾವಾಗಲೂ ಕಠಿಣವಾಗಿರುತ್ತೇನೆ. ಆದರೆ ನಾವು ನಮ್ಮ ಕಷ್ಟವನ್ನು ಆರಿಸಿಕೊಳ್ಳಬಹುದು. ಬುದ್ಧಿವಂತಿಕೆಯಿಂದ ಆರಿಸಿಕೊಳ್ಳಿ ಎಂದು ಸಾನಿಯಾ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದರು.

andolanait

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

13 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

13 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

14 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

14 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

14 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

14 hours ago