ಕ್ರೀಡೆ

ಶೋಯೆಬ್ ಮಲಿಕ್ ಜೊತೆಗಿನ ವಿಚ್ಛೇದನ ಖಚಿತಪಡಿಸಿದ ಸಾನಿಯಾ ಮಿರ್ಜಾ

ನವದೆಹಲಿ: ಭಾರತೀಯ ಟೆನಿಸ್‌ ತಾರೆ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಜೊತೆಗಿನ ವಿಚ್ಛೇದನವನ್ನು ದೃಢಪಡಿಸಿದ್ದಾರೆ. ಮತ್ತು ತನ್ನ ಮಾಜಿ ಪತಿಯ ಮುಂದಿನ ಜೀವನಕ್ಕೆ ಶುಭ ಹಾರೈಸಿದ್ದಾರೆ.

ಕ್ರಿಕೆಟಿಗ ಶೋಯೆಬ್ ಮಲಿಕ್ ತಮ್ಮದೇ ದೇಶದ ಜನಪ್ರಿಯ ನಟಿ ಸನಾ ಜಾವೇದ್ ಜೊತೆಗೆ ವಿವಾಹವಾಗಿರುವುದಾಗಿ ಘೋಷಿಸಿದ ನಂತರ ಸಾನಿಯಾ ಮತ್ತು ಮಲ್ಲಿಕ್‌ ವಿಚ್ಛೇದನ ಪಡೆದಿದ್ದಾರೆ ಎಂದು ಸಾನಿಯಾ ಮಿರ್ಜಾ ಅವರ ಕುಟುಂಬ ಖಚಿತಪಡಿಸಿದೆ.

ಈ ಇಬ್ಬರು ಸೆಲೆಬ್ರಿಟಿಗಳ ವಿವಾಹ 14 ವರ್ಷಗಳ ಹಿಂದೆ ಸುದ್ದಿ ಮಾಡಿದಂತೆ ವಿಚ್ಛೇದನ ಕೂಡ ಭಾರೀ ಸದ್ದು ಮಾಡಿದೆ. 41 ವರ್ಷದ ಮಲಿಕ್ ನಿನ್ನೆ ಸಾಮಾಜಿಕ ಮಾಧ್ಯಮದಲ್ಲಿ ಸನಾ ಅವರೊಂದಿಗಿನ ಮದುವೆಯಾದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

“ಸಾನಿಯಾ ಯಾವಾಗಲೂ ತನ್ನ ವೈಯಕ್ತಿಕ ಜೀವನವನ್ನು ಬಹಿರಂಗವಾಗಿ ಮಾತನಾಡದೆ ಆದಷ್ಟು ದೂರವಿಟ್ಟಿದ್ದರು. ಶೋಯೆಬ್ ಮತ್ತು ಸಾನಿಯಾ ಹಲವು ತಿಂಗಳುಗಳ ಹಿಂದೆ ವಿಚ್ಛೇದನ ಪಡೆದಿರುವ ವಿಷಯವನ್ನು ತಿಳಿಸುವ ಅವಶ್ಯಕತೆ ಇಂದು ಸೃಷ್ಟಿಯಾಗಿದೆ. ಶೋಯೆಬ್ ಅವರ ಹೊಸ ಜೀವನ ಪಯಣಕ್ಕೆ ಸಾನಿಯಾ ಮಿರ್ಜಾ ಶುಭ ಹಾರೈಸುತ್ತಾರೆ!,” ಎಂದು ಅವರ ಕುಟುಂಬ ಹೇಳಿಕೆಯಲ್ಲಿ ತಿಳಿಸಿದೆ.

ಸಾನಿಯಾ ಜೀವನದ ಈ ಸೂಕ್ಷ್ಮ ಅವಧಿಯಲ್ಲಿ, ನಾವು ಎಲ್ಲಾ ಅಭಿಮಾನಿಗಳು ಮತ್ತು ಹಿತೈಷಿಗಳಲ್ಲಿ ಯಾವುದೇ ಊಹಾಪೋಹಗಳಿಗೆ ಒಳಗಾಗದಂತೆ ಮತ್ತು ಅವರ ಜೀವನದ ಗೌಪ್ಯತೆಯ ಅಗತ್ಯವನ್ನು ಗೌರವಿಸುವಂತೆ ಕೇಳಿಕೊಳ್ಳುತ್ತೇವೆ ಎಂದು ಸಹ ಕುಟುಂಬ ವರ್ಗ ಮನವಿ ಮಾಡಿಕೊಂಡಿದೆ.

ಸಾನಿಯಾ ಮಿರ್ಜಾ ಹೈದರಾಬಾದ್‌ನಲ್ಲಿ ಏಪ್ರಿಲ್ 2010 ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾಗಿದ್ದರು. ಮಲಿಕ್ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ 37 ವರ್ಷದ ಸಾನಿಯಾ ಮಿರ್ಜಾ ಅವರನ್ನು ಅನ್‌ಫಾಲೋ ಮಾಡಿದಾಗ ಅವರಿಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂದು ಕೆಲವು ವರ್ಷಗಳಿಂದ ಕೇಳಿಬರುತ್ತಿದ್ದ ವದಂತಿಗಳಿಗೆ ರೆಕ್ಕೆಪುಕ್ಕ ಸಿಕ್ಕಿತ್ತು.

ಇವರಿಗೆ ಐದು ವರ್ಷದ ಇಜಾನ್ ಎಂಬ ಮಗನಿದ್ದು, ಪ್ರಸ್ತುತ ಮಗು ತಾಯಿ ಸಾನಿಯಾ ಮಿರ್ಜಾ ಅವರೊಂದಿಗೆ ವಾಸವಾಗಿದೆ. ಶೋಯೆಬ್ ಮಲಿಕ್ ವಿವಾಹದ ಘೋಷಣೆ ಮಾಡಿದ ಒಂದು ದಿನಕ್ಕೆ ಮೊದಲು ಸಾನಿಯಾ ಮಿರ್ಜಾ ಬೇಸರದ ಸಂಗತಿಯನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು.

“ಮದುವೆ ಕಷ್ಟ, ವಿಚ್ಛೇದನ ಕಷ್ಟ. ನಿಮ್ಮ ಕಷ್ಟವನ್ನು ಆರಿಸಿ. ಸ್ಥೂಲಕಾಯತೆ ಕಷ್ಟ. ಫಿಟ್ ಆಗಿರುವುದು ಕಷ್ಟ, ನಿಮ್ಮ ಕಷ್ಟವನ್ನು ಆರಿಸಿಕೊಳ್ಳಿ. ಸಾಲದಲ್ಲಿರುವುದು ಕಷ್ಟ. ಆರ್ಥಿಕವಾಗಿ ಶಿಸ್ತಿನಲ್ಲಿರುವುದು ಕಷ್ಟ. ನಿಮ್ಮ ಕಷ್ಟವನ್ನು ಆರಿಸಿಕೊಳ್ಳಿ, ಯಾವುದೇ ಸಂವಹನ ಕಷ್ಟ. ಜೀವನವು ಎಂದಿಗೂ ಸುಲಭವಾಗುವುದಿಲ್ಲ. ನಾನು ಯಾವಾಗಲೂ ಕಠಿಣವಾಗಿರುತ್ತೇನೆ. ಆದರೆ ನಾವು ನಮ್ಮ ಕಷ್ಟವನ್ನು ಆರಿಸಿಕೊಳ್ಳಬಹುದು. ಬುದ್ಧಿವಂತಿಕೆಯಿಂದ ಆರಿಸಿಕೊಳ್ಳಿ ಎಂದು ಸಾನಿಯಾ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದರು.

andolanait

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

1 hour ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

1 hour ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

1 hour ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

1 hour ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

1 hour ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

2 hours ago