ಕ್ರೀಡೆ

ಶೋಯೆಬ್ ಮಲಿಕ್ ಜೊತೆಗಿನ ವಿಚ್ಛೇದನ ಖಚಿತಪಡಿಸಿದ ಸಾನಿಯಾ ಮಿರ್ಜಾ

ನವದೆಹಲಿ: ಭಾರತೀಯ ಟೆನಿಸ್‌ ತಾರೆ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಜೊತೆಗಿನ ವಿಚ್ಛೇದನವನ್ನು ದೃಢಪಡಿಸಿದ್ದಾರೆ. ಮತ್ತು ತನ್ನ ಮಾಜಿ ಪತಿಯ ಮುಂದಿನ ಜೀವನಕ್ಕೆ ಶುಭ ಹಾರೈಸಿದ್ದಾರೆ.

ಕ್ರಿಕೆಟಿಗ ಶೋಯೆಬ್ ಮಲಿಕ್ ತಮ್ಮದೇ ದೇಶದ ಜನಪ್ರಿಯ ನಟಿ ಸನಾ ಜಾವೇದ್ ಜೊತೆಗೆ ವಿವಾಹವಾಗಿರುವುದಾಗಿ ಘೋಷಿಸಿದ ನಂತರ ಸಾನಿಯಾ ಮತ್ತು ಮಲ್ಲಿಕ್‌ ವಿಚ್ಛೇದನ ಪಡೆದಿದ್ದಾರೆ ಎಂದು ಸಾನಿಯಾ ಮಿರ್ಜಾ ಅವರ ಕುಟುಂಬ ಖಚಿತಪಡಿಸಿದೆ.

ಈ ಇಬ್ಬರು ಸೆಲೆಬ್ರಿಟಿಗಳ ವಿವಾಹ 14 ವರ್ಷಗಳ ಹಿಂದೆ ಸುದ್ದಿ ಮಾಡಿದಂತೆ ವಿಚ್ಛೇದನ ಕೂಡ ಭಾರೀ ಸದ್ದು ಮಾಡಿದೆ. 41 ವರ್ಷದ ಮಲಿಕ್ ನಿನ್ನೆ ಸಾಮಾಜಿಕ ಮಾಧ್ಯಮದಲ್ಲಿ ಸನಾ ಅವರೊಂದಿಗಿನ ಮದುವೆಯಾದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

“ಸಾನಿಯಾ ಯಾವಾಗಲೂ ತನ್ನ ವೈಯಕ್ತಿಕ ಜೀವನವನ್ನು ಬಹಿರಂಗವಾಗಿ ಮಾತನಾಡದೆ ಆದಷ್ಟು ದೂರವಿಟ್ಟಿದ್ದರು. ಶೋಯೆಬ್ ಮತ್ತು ಸಾನಿಯಾ ಹಲವು ತಿಂಗಳುಗಳ ಹಿಂದೆ ವಿಚ್ಛೇದನ ಪಡೆದಿರುವ ವಿಷಯವನ್ನು ತಿಳಿಸುವ ಅವಶ್ಯಕತೆ ಇಂದು ಸೃಷ್ಟಿಯಾಗಿದೆ. ಶೋಯೆಬ್ ಅವರ ಹೊಸ ಜೀವನ ಪಯಣಕ್ಕೆ ಸಾನಿಯಾ ಮಿರ್ಜಾ ಶುಭ ಹಾರೈಸುತ್ತಾರೆ!,” ಎಂದು ಅವರ ಕುಟುಂಬ ಹೇಳಿಕೆಯಲ್ಲಿ ತಿಳಿಸಿದೆ.

ಸಾನಿಯಾ ಜೀವನದ ಈ ಸೂಕ್ಷ್ಮ ಅವಧಿಯಲ್ಲಿ, ನಾವು ಎಲ್ಲಾ ಅಭಿಮಾನಿಗಳು ಮತ್ತು ಹಿತೈಷಿಗಳಲ್ಲಿ ಯಾವುದೇ ಊಹಾಪೋಹಗಳಿಗೆ ಒಳಗಾಗದಂತೆ ಮತ್ತು ಅವರ ಜೀವನದ ಗೌಪ್ಯತೆಯ ಅಗತ್ಯವನ್ನು ಗೌರವಿಸುವಂತೆ ಕೇಳಿಕೊಳ್ಳುತ್ತೇವೆ ಎಂದು ಸಹ ಕುಟುಂಬ ವರ್ಗ ಮನವಿ ಮಾಡಿಕೊಂಡಿದೆ.

ಸಾನಿಯಾ ಮಿರ್ಜಾ ಹೈದರಾಬಾದ್‌ನಲ್ಲಿ ಏಪ್ರಿಲ್ 2010 ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾಗಿದ್ದರು. ಮಲಿಕ್ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ 37 ವರ್ಷದ ಸಾನಿಯಾ ಮಿರ್ಜಾ ಅವರನ್ನು ಅನ್‌ಫಾಲೋ ಮಾಡಿದಾಗ ಅವರಿಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂದು ಕೆಲವು ವರ್ಷಗಳಿಂದ ಕೇಳಿಬರುತ್ತಿದ್ದ ವದಂತಿಗಳಿಗೆ ರೆಕ್ಕೆಪುಕ್ಕ ಸಿಕ್ಕಿತ್ತು.

ಇವರಿಗೆ ಐದು ವರ್ಷದ ಇಜಾನ್ ಎಂಬ ಮಗನಿದ್ದು, ಪ್ರಸ್ತುತ ಮಗು ತಾಯಿ ಸಾನಿಯಾ ಮಿರ್ಜಾ ಅವರೊಂದಿಗೆ ವಾಸವಾಗಿದೆ. ಶೋಯೆಬ್ ಮಲಿಕ್ ವಿವಾಹದ ಘೋಷಣೆ ಮಾಡಿದ ಒಂದು ದಿನಕ್ಕೆ ಮೊದಲು ಸಾನಿಯಾ ಮಿರ್ಜಾ ಬೇಸರದ ಸಂಗತಿಯನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು.

“ಮದುವೆ ಕಷ್ಟ, ವಿಚ್ಛೇದನ ಕಷ್ಟ. ನಿಮ್ಮ ಕಷ್ಟವನ್ನು ಆರಿಸಿ. ಸ್ಥೂಲಕಾಯತೆ ಕಷ್ಟ. ಫಿಟ್ ಆಗಿರುವುದು ಕಷ್ಟ, ನಿಮ್ಮ ಕಷ್ಟವನ್ನು ಆರಿಸಿಕೊಳ್ಳಿ. ಸಾಲದಲ್ಲಿರುವುದು ಕಷ್ಟ. ಆರ್ಥಿಕವಾಗಿ ಶಿಸ್ತಿನಲ್ಲಿರುವುದು ಕಷ್ಟ. ನಿಮ್ಮ ಕಷ್ಟವನ್ನು ಆರಿಸಿಕೊಳ್ಳಿ, ಯಾವುದೇ ಸಂವಹನ ಕಷ್ಟ. ಜೀವನವು ಎಂದಿಗೂ ಸುಲಭವಾಗುವುದಿಲ್ಲ. ನಾನು ಯಾವಾಗಲೂ ಕಠಿಣವಾಗಿರುತ್ತೇನೆ. ಆದರೆ ನಾವು ನಮ್ಮ ಕಷ್ಟವನ್ನು ಆರಿಸಿಕೊಳ್ಳಬಹುದು. ಬುದ್ಧಿವಂತಿಕೆಯಿಂದ ಆರಿಸಿಕೊಳ್ಳಿ ಎಂದು ಸಾನಿಯಾ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದರು.

andolanait

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

3 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

3 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

3 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

4 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

4 hours ago