ಕ್ರೀಡೆ

ಸಾನಿಯಾ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯ

ಆಸ್ಟ್ರೇಲಿಯನ್ ಓಪನ್ ಬೋಪಣ್ಣ-ಸಾನಿಯಾ ಜೋಡಿ ರನ್ನರ್-ಅಪ್

ಮೆಲ್ಬರ್ನ್: ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯವಾಗಿದೆ. ಆಸ್ಟ್ರೇಲಿಯನ್ ಓಪನ್ ಕೂಟದ ಮಿಶ್ರ ಡಬಲ್ಸ್ ಫೈನಲ್ ಪಂದ್ಯದಲ್ಲಿ ಸೋತ ಸಾನಿಯಾ ಮಿರ್ಜಾ, ರನ್ನರ್ ಅಪ್ ಪ್ರಶಸ್ತಿಯೊಂದಿಗೆ ತನ್ನ ಸುದೀರ್ಘ ಗ್ರ್ಯಾಂಡ್ ಸ್ಲ್ಯಾಮ್ ಪ್ರಯಾಣವನ್ನು ಅಂತ್ಯಗೊಳಿಸಿದರು.
ಮಿಶ್ರ ಡಬಲ್ಸ್ ಫೈನಲ್‌ನಲ್ಲಿ ಸಾನಿಯಾ ಮಿರ್ಜಾ- ರೋಹನ್ ಬೋಪಣ್ಣ ಜೋಡಿಯು ಬ್ರೆಜಿಲಿಯನ್ ಜೋಡಿಯಾದ ಲೂಯಿಸಾ ಸ್ಟೆಫಾನಿ ಮತ್ತು ರಾಫೆಲ್ ವ್ಯಾಟೋಸ್ ವಿರುದ್ಧ 6-7 (2-6), 2-6 ನೇರ ಸೆಟ್‌ಗಳ ಅಂತರದ ಸೋಲನುಭವಿಸಿ, ತಮ್ಮ ಕೊನೆಯ ಗ್ರ್ಯಾ ಸ್ಲ್ಯಾಮ್‌ ಟೆನಿಸ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಅವಕಾಶದಿಂದ ವಂಚಿತರಾದರು.
36 ವರ್ಷ ವಯಸ್ಸಿನ ಸಾನಿಯಾ ಗೆಲುವಿನೊಂದಿಗೆ ಪಯಣ ಅಂತ್ಯಗೊಳಿಸಲು ಬಯಸಿದ್ದರು. ಆದರೆ ಧೀರ ಪ್ರಯತ್ನಗಳ ಹೊರತಾಗಿಯೂ ಅದು ಸಾಧ್ಯವಾಗಲಿಲ್ಲ. ಅವರು ತಮ್ಮ ಸುಪ್ರಸಿದ್ಧ ವೃತ್ತಿಜೀವನದಲ್ಲಿ ಆರು ಡಬಲ್ಸ್ ಪ್ರಶಸ್ತಿಗಳನ್ನು ಜಯಿಸಿದ್ದರು.
ಸಾನಿಯಾ ಗೆದ್ದಿರುವ ಆರು ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳಲ್ಲಿ ಮೂರು ಮಿಶ್ರ ಡಬಲ್ಸ್‌ನಲ್ಲಿ ಬಂದಿವೆ. ಮುಂದಿನ ತಿಂಗಳು ನಡೆಯುವ ದುಬೈ ಓಪನ್ ಟೆನಿಸ್ ಟೂರ್ನಿಯಾ ಬಳಿಕ ನಿವೃತ್ತಿಯಾಗುವುದಾಗಿ ಸಾನಿಯಾ ಅವರು ಈಗಾಗಲೇ ಪ್ರಕಟಿಸಿದ್ದಾರೆ. ಅತ್ತ 46 ವರ್ಷದ ಬೋಪಣ್ಣ, 2017ರಲ್ಲಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಫ್ರೆಂಚ್ ಓಪನ್ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಜಯಿಸಿದ್ದರು.

andolanait

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

32 mins ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

33 mins ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

40 mins ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

1 hour ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

1 hour ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

2 hours ago