ಕ್ರೀಡೆ

ಸಾನಿಯಾ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯ

ಆಸ್ಟ್ರೇಲಿಯನ್ ಓಪನ್ ಬೋಪಣ್ಣ-ಸಾನಿಯಾ ಜೋಡಿ ರನ್ನರ್-ಅಪ್

ಮೆಲ್ಬರ್ನ್: ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯವಾಗಿದೆ. ಆಸ್ಟ್ರೇಲಿಯನ್ ಓಪನ್ ಕೂಟದ ಮಿಶ್ರ ಡಬಲ್ಸ್ ಫೈನಲ್ ಪಂದ್ಯದಲ್ಲಿ ಸೋತ ಸಾನಿಯಾ ಮಿರ್ಜಾ, ರನ್ನರ್ ಅಪ್ ಪ್ರಶಸ್ತಿಯೊಂದಿಗೆ ತನ್ನ ಸುದೀರ್ಘ ಗ್ರ್ಯಾಂಡ್ ಸ್ಲ್ಯಾಮ್ ಪ್ರಯಾಣವನ್ನು ಅಂತ್ಯಗೊಳಿಸಿದರು.
ಮಿಶ್ರ ಡಬಲ್ಸ್ ಫೈನಲ್‌ನಲ್ಲಿ ಸಾನಿಯಾ ಮಿರ್ಜಾ- ರೋಹನ್ ಬೋಪಣ್ಣ ಜೋಡಿಯು ಬ್ರೆಜಿಲಿಯನ್ ಜೋಡಿಯಾದ ಲೂಯಿಸಾ ಸ್ಟೆಫಾನಿ ಮತ್ತು ರಾಫೆಲ್ ವ್ಯಾಟೋಸ್ ವಿರುದ್ಧ 6-7 (2-6), 2-6 ನೇರ ಸೆಟ್‌ಗಳ ಅಂತರದ ಸೋಲನುಭವಿಸಿ, ತಮ್ಮ ಕೊನೆಯ ಗ್ರ್ಯಾ ಸ್ಲ್ಯಾಮ್‌ ಟೆನಿಸ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಅವಕಾಶದಿಂದ ವಂಚಿತರಾದರು.
36 ವರ್ಷ ವಯಸ್ಸಿನ ಸಾನಿಯಾ ಗೆಲುವಿನೊಂದಿಗೆ ಪಯಣ ಅಂತ್ಯಗೊಳಿಸಲು ಬಯಸಿದ್ದರು. ಆದರೆ ಧೀರ ಪ್ರಯತ್ನಗಳ ಹೊರತಾಗಿಯೂ ಅದು ಸಾಧ್ಯವಾಗಲಿಲ್ಲ. ಅವರು ತಮ್ಮ ಸುಪ್ರಸಿದ್ಧ ವೃತ್ತಿಜೀವನದಲ್ಲಿ ಆರು ಡಬಲ್ಸ್ ಪ್ರಶಸ್ತಿಗಳನ್ನು ಜಯಿಸಿದ್ದರು.
ಸಾನಿಯಾ ಗೆದ್ದಿರುವ ಆರು ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳಲ್ಲಿ ಮೂರು ಮಿಶ್ರ ಡಬಲ್ಸ್‌ನಲ್ಲಿ ಬಂದಿವೆ. ಮುಂದಿನ ತಿಂಗಳು ನಡೆಯುವ ದುಬೈ ಓಪನ್ ಟೆನಿಸ್ ಟೂರ್ನಿಯಾ ಬಳಿಕ ನಿವೃತ್ತಿಯಾಗುವುದಾಗಿ ಸಾನಿಯಾ ಅವರು ಈಗಾಗಲೇ ಪ್ರಕಟಿಸಿದ್ದಾರೆ. ಅತ್ತ 46 ವರ್ಷದ ಬೋಪಣ್ಣ, 2017ರಲ್ಲಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಫ್ರೆಂಚ್ ಓಪನ್ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಜಯಿಸಿದ್ದರು.

andolanait

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

2 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

5 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

7 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

7 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

8 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

11 hours ago