ಕ್ರೀಡೆ

ಏಷ್ಯನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಸಾತ್ವಿಕ್‌-ಚಿರಾಗ್‌!

ಹಾಂಗ್‌ಝೌ: ಏಷ್ಯನ್ ಗೇಮ್ಸ್‌ನ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತದ ಸಾತ್ವಿಕ್‌ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಏಷ್ಯನ್ ಗೇಮ್ಸ್‌ನಲ್ಲಿ ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ಗೆದ್ದ ಕೀರ್ತಿ ಇವರಿಗೆ ಸಲ್ಲುತ್ತದೆ.

ಶನಿವಾರ ಭಾರತದ ಜೋಡಿಯು ದಕ್ಷಿಣ ಕೊರಿಯಾದ ಚೋಯ್ ಸೊಲ್ಗು ಮತ್ತು ಕಿಮ್ ವೊನ್ಹೋ ಅವರನ್ನು 21-18, 21-16 ಅಂತರದ ನೇರ ಗೇಮ್‌ಗಳಿಂದ ಸೋಲಿಸುವ ಮೂಲಕ ಚೊಚ್ಚಲ ಚಿನ್ನದ ಪದಕ ಗೆದ್ದು ದಾಖಲೆ ಬರೆಯಿತು. ಇದಕ್ಕೂ ಮುನ್ನ ಸೆಮಿಫೈನಲ್‌ನಲ್ಲಿ ಮಲೇಷ್ಯಾದ ಆರೋನ್ ಚಿಯಾ ಮತ್ತು ಸೊಹ್ ವುಯಿ ಯಿಕ್ ವಿರುದ್ಧ ಭಾರತದ ಜೋಡಿ 21-17, 21-12 ಅಂತರದಲ್ಲಿ ಜಯ ಸಾಧಿಸಿತ್ತು.

ಸಾತ್ವಿಕ್‌ ಹಾಗೂ ಚಿರಾಗ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತಕ್ಕೆ ಚೊಚ್ಚಲ ಚಿನ್ನದ ಪದಕ ಗೆದ್ದುಕೊಡುವ ಮೂಲಕ ನೂತನ ಮೈಲುಗಲ್ಲು ಸ್ಥಾಪಿಸಿದರು.

https://x.com/India_AllSports/status/1710571327864930567?s=20

andolanait

Recent Posts

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

35 mins ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

4 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

4 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

4 hours ago