ಕ್ರೀಡೆ

ವಿಶ್ವ ನಂ.1 ಜೋಡಿ ಮಣಿಸಿ ಕೊರಿಯಾ ಓಪನ್ ಗೆದ್ದ ಸಾತ್ವಿಕ್ ರೆಡ್ಡಿ- ಚಿರಾಗ್ ಶೆಟ್ಟಿ!

ಯೋಸು (ಕೊರಿಯಾ): ಭಾರತದ ನಂಬರ್ 1 ಡಬಲ್ಸ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್ ಸಾಯಿರಾಜ್ ರಣಕಿ ರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿಯು ವಿಶ್ವದ ನಂಬರ್ 1 ಜೋಡಿಯಾದ ಫಜಲ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾಣ್ ಅರ್ಡಿಯಾಂಟೊ ಜೋಡಿಯನ್ನು ಮಣಿಸಿ ಪ್ರತಿಷ್ಠಿತ ಕೊರಿಯಾ ಓಪನ್ ಸೂಪರ್ ಸಿರೀಸ್ ಪ್ರಶಸ್ತಿ ಗೆದ್ದು ಐತಿಹಾಸಿಕ ದಾಖಲೆ ನಿರ್ಮಿಸಿದೆ.

ದಕ್ಷಿಣ ಕೊರಿಯಾದ ಯೋಸುವಿನ ಜಿನ್ನಮ್ ಬ್ಯಾಡ್ಮಿಂಟನ್ ಅಂಗಣದಲ್ಲಿ ಜುಲೈ 23( ಭಾನುವಾರ) ನಡೆದ ಫೈನಲ್ ಪಂದ್ಯದಲ್ಲಿ ವಿಶ್ವದ 3ನೇ ಶ್ರೇಯಾಂಕಿತ ಜೋಡಿಯಾದ ಸಾತ್ವಿಕ್ ಹಾಗೂ ಚಿರಾಗ್ ಶೆಟ್ಟಿ ಜೋಡಿಯು ಮೊದಲ ಸೆಟ್ ನಲ್ಲಿ 17-21 ಸೆಟ್ ನಿಂದ ಹಿನ್ನಡೆ ಕಂಡರೂ ನಂತರ ನಡೆದ ಸೆಟ್ ಗಳಲ್ಲಿ ತಮ್ಮ ವೇಗದ ಸರ್ವ್ ಗಳಿಂದ ಪುಟಿದೆದ್ದು ಇಂಡೋನೇಷ್ಯಾ ಜೋಡಿಯ ವಿರುದ್ಧ ಮೇಲುಗೈ ಸಾಧಿಸಿ 21-13, 21-14 ಸೆಟ್ ಗಳ ಪಂದ್ಯ ಜಯಿಸಿ ಪದಕದೊಂದಿಗೆ 33,180 ಅಮೇರಿಕನ್ ಡಾಲರ್ ಮೊತ್ತ ತಮ್ಮದಾಗಿಸಿಕೊಂಡಿದೆ.

ಸೆಮಿಫೈನಲ್ ನಲ್ಲಿ ಕಠಿಣ ಗುರಿ
ಕೊರಿಯಾ ಓಪನ್ ಸೂಪರ್ ಸಿರೀಸ್ ನ ಆರಂಭಿಕ ಪಂದ್ಯದಿಂದಲೂ ಕಠಿಣ ಹಾದಿ ಸವೆಸಿದ ಸಾತ್ವಿಕ್ ಹಾಗೂ ಚಿರಾಗ್ ಜೋಡಿಯು ಸೆಮಿಫೈನಲ್ ಪಂದ್ಯದಲ್ಲಿ ವಿಶ್ವ ಶ್ರೇಯಾಂಕಿತ ನಂಬರ್ 2 ಜೋಡಿಯಾದ ಚೀನಾದ ಚಾಂಗ್ ವಾಂಗ್ ಹಾಗೂ ವೀಕೆಂಗ್ ಲಿಯಾಂಗ್ ಜೋಡಿ ವಿರುದ್ಧ 21-15 ಹಾಗೂ 24-22 ನೇರ ಸೆಟ್ ಗಳಿಂದ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿತ್ತು. ಭಾರತದ ಅಗ್ರ ಬ್ಯಾಡ್ಮಿಂಟನ್ ಜೋಡಿಯು ಚೀನಾದ ಜೋಡಿಯ ವಿರುದ್ಧ ಈ ಹಿಂದೆ ನಡೆದ 3 ಪಂದ್ಯಗಳಲ್ಲೂ ಸೋಲು ಕಂಡಿದ್ದರೂ, ಕೊನೆಗೂ ಗೆಲುವಿನ ನಗೆ ಚೆಲ್ಲಿತ್ತು.

ಪ್ರಸಕ್ತ ವರ್ಷದಲ್ಲಿ 4ನೇ ಫೈನಲ್
2023ನೇ ಸಾಲಿನ ಆರಂಭದಿಂದಲೂ ಉತ್ತಮ ಪ್ರದರ್ಶನ ತೋರುತ್ತಿರುವ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿಯು 4ನೇ ಬಾರಿ ಫೈನಲ್ ಸುತ್ತು ಪ್ರವೇಶಿಸಿದ್ದು, ಏಷ್ಯನ್ ಚಾಂಪಿಯನ್ ಶಿಪ್, ಇಂಡೋನೇಷ್ಯಾ ಸೂಪರ್1000 ಮತ್ತು ಸ್ವೀಸ್ ಓಪನ್ ಸೂಪರ್ 500 ಸಿರೀಸ್ ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2022 ರಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಗಮನ ಸೆಳೆದಿರುವ ಸಾತ್ವಿಕ್- ಚಿರಾಗ್ ಜೋಡಿ 2024ರಲ್ಲಿ ಪ್ಯಾರಿಸ್ ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ನಲ್ಲಿ ಪದಕ ಜಯಿಸುವತ್ತ ಗುರಿ ನೆಟ್ಟಿದ್ದಾರೆ.

ಅನುರಾಗ್ ಠಾಕೂರ್ ಅಭಿನಂದನೆ
ಭಾರತದ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ತಮ್ಮ ಗೆಲುವಿನ ಅಭಿಯಾನವನ್ನು ಮುಂದುವರೆಸಿ ಕೊರಿಯಾ ಓಪನ್ ಸಿರೀಸ್ ಗೆದ್ದ ಮೊದಲ ಭಾರತೀಯ ಜೋಡಿ ಎಂಬ ದಾಖಲೆ ಬರೆದಿದ್ದು ಅವರಿಗೆ ಹೃತ್ಪೂರ್ವಕ ಧನ್ಯವಾದ ಸಲ್ಲಿಸುತ್ತೇನೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಟ್ವಿಟ್ ಮಾಡಿ , ಭಾರತೀಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕೂಡ ಸಾತ್ವಿಕ್ – ಚಿರಾಗ್ ಜೋಡಿಯ ಸಾಧನೆಯನ್ನು ಶ್ಲಾಘಿಸಿದೆ.

andolanait

Recent Posts

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…

30 mins ago

ಓದುಗರ ಪತ್ರ: ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…

36 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಿ

ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…

47 mins ago

ವಿಕಸಿತ್ ಭಾರತ್- ಜಿ ರಾಮ್ ಜಿ: ಮಹಾತ್ಮನನ್ನು ಮರೆಗೆ ಸರಿಸುವ ಹುನ್ನಾರ

ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…

51 mins ago

ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ, ಟ್ರೋಫಿ

ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ…

2 hours ago

ಡಿ.26ರಿಂದ ಕೊಡವ ಹಾಕಿ ಚಾಂಪಿಯನ್ ಟ್ರೋಫಿ

ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…

4 hours ago