ಕ್ರೀಡೆ

ಇಸ್ಲಾಂಗಾಗಿ ಬದುಕು ಮೀಸಲು: ಧರ್ಮಕ್ಕಾಗಿ ಕ್ರಿಕೆಟ್ ತ್ಯಜಿಸಿದ ಪಾಕಿಸ್ತಾನದ ಆಟಗಾರ್ತಿ

ಇಸ್ಲಾಮಾಬಾದ್‌: ಧಾರ್ಮಿಕತೆಗಾಗಿ ಪಾಕಿಸ್ತಾನದ ಸ್ಚಾರ್ ಆಟಗಾರ್ತಿಯೊಬ್ಬರು ಕ್ರಿಕೆಟ್ ಅನ್ನೇ ತ್ಯಜಿಸಲು ಮುಂದಾಗಿದ್ದಾರೆ.

ಹೌದು.. ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡದ ಸ್ಠಾರ್ ಆಟಗಾರ್ತಿ ಆಯೇಶಾ ನಸೀಮ್ ತನ್ನ 18ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ತನ್ನ ಮುಂದಿನ ಬದುಕನ್ನು ಇಸ್ಲಾಂ ಧರ್ಮಕ್ಕಾಗಿ ಮೀಸಲಿಡುತ್ತೇನೆ ಎಂದು ಹೇಳಿದ್ದಾರೆ.

‘ನಾನು ಇನ್ಮುಂದೆ ಇಸ್ಲಾಮಿಕ್‌ ಧರ್ಮದಂತೆಯೇ ಬದುಕುತ್ತೇನೆ, ಇಸ್ಲಾಮಿಕ್‌ ತತ್ವ ಬೋಧನೆಯನ್ನ ಅನುಸರಿಸುತ್ತೇನೆ ಎಂದು ಹೇಳಿರುವ ಆಯೇಶಾ ನಸೀಮ್, ನಾನು ಕ್ರಿಕೆಟ್ ಆಟ ತ್ಯಜಿಸುತ್ತಿದ್ದೇನೆ ಮತ್ತು ಇಸ್ಲಾಂ ಧರ್ಮದ ಪ್ರಕಾರ ನನ್ನ ಜೀವನವನ್ನು ನಡೆಸಲು ಬಯಸುತ್ತೇನೆ’ ಎಂದು ಹೇಳಿದ್ದಾರೆ.

ಆರಂಭಿಕ ಹಂತದಿಂದಲೇ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡುತ್ತಿದ್ದ ಆಯೇಶಾ, ಮುಂದೆ ತಂಡ ನಾಯಕತ್ವ ವಹಿಸುವ ಭರವಸೆ ಮೂಡಿಸಿದ್ದರು. ಇದೀಗ ನಿವೃತ್ತಿ ಘೋಷಿಸಿ ನಿರಾಸೆ ಮೂಡಿಸಿದ್ದಾರೆ. ನಸೀಮ್ ಅವರು ಇಸ್ಲಾಂ ಧರ್ಮದ ಪ್ರಕಾರ ತಮ್ಮ ಜೀವನವನ್ನು ನಡೆಸುವ ಕಾರಣದಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ವಿಚಾರವಾಗಿ  ನಸೀಮ್ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ಗೂ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

18 ವರ್ಷದ ಪಾಕ್‌ ಮಹಿಳಾ ಆಟಗಾರ್ತಿ ಆಯೇಶಾ ನಸೀಮ್ ಈವರೆಗೆ ನಾಲ್ಕು ಏಕದಿನ, 30 T20 ಪಂದ್ಯಗಳನ್ನಾಡಿದ್ದಾರೆ. ಅಗ್ರ ಕ್ರಮಾಂಕದ ಬ್ಯಾಟರ್‌ ಆಗಿ ಟಿ20 ಕ್ರಿಕೆಟ್‌ನಲ್ಲಿ 18:45 ಸರಾಸರಿಯಲ್ಲಿ 369 ರನ್‌ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಕೇವಲ 33 ರನ್‌ ಗಳಿಸಿದ್ದಾರೆ. 2023ರ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ವಿರುದ್ಧ ಕಣಕ್ಕಿಳಿದಾಗ 25 ಎಸೆತಗಳಲ್ಲಿ ಸ್ಫೋಟಕ 43 ರನ್‌ ಸಿಡಿಸಿದ್ದರು. 2021ರಲ್ಲಿ ಆಯೇಶಾ ವೆಸ್ಟ್‌ ಇಂಡೀಸ್‌ ವಿರುದ್ಧ ಕಣಕ್ಕಿಳಿದಾಗ 33 ಎಸೆತಗಳಲ್ಲಿ 45 ರನ್‌ ಗಳಿಸಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅದೇ ವರ್ಷದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಕ್ರಿಕೆಟ್‌ನಲ್ಲಿ 31 ಎಸೆತಗಳಲ್ಲಿ 45 ರನ್‌ ಗಳಿಸಿ ಮಿಂಚಿದ್ದರು.

andolanait

Recent Posts

ಸಾರ್ವಜನಿಕ ಶೌಚಾಲಯ ‘ಎರಡೂ’ ಬಂದ್!

ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…

2 mins ago

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

2 hours ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

2 hours ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

2 hours ago

300 ಸಿಎ ನಿವೇಶನಗಳ ಹಂಚಿಕೆಗೆ ಎಂಡಿಎ ನಿರ್ಧಾರ

ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ  ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…

2 hours ago