HOBART, AUSTRALIA - JANUARY 26: Ayesha Naseem of Pakistan leaves the field after being dismissed during game two of the T20 International series between Australia and Pakistan at Blundstone Arena on January 26, 2023 in Hobart, Australia. (Photo by Steve Bell/Getty Images)
ಇಸ್ಲಾಮಾಬಾದ್: ಧಾರ್ಮಿಕತೆಗಾಗಿ ಪಾಕಿಸ್ತಾನದ ಸ್ಚಾರ್ ಆಟಗಾರ್ತಿಯೊಬ್ಬರು ಕ್ರಿಕೆಟ್ ಅನ್ನೇ ತ್ಯಜಿಸಲು ಮುಂದಾಗಿದ್ದಾರೆ.
ಹೌದು.. ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡದ ಸ್ಠಾರ್ ಆಟಗಾರ್ತಿ ಆಯೇಶಾ ನಸೀಮ್ ತನ್ನ 18ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದು, ತನ್ನ ಮುಂದಿನ ಬದುಕನ್ನು ಇಸ್ಲಾಂ ಧರ್ಮಕ್ಕಾಗಿ ಮೀಸಲಿಡುತ್ತೇನೆ ಎಂದು ಹೇಳಿದ್ದಾರೆ.
‘ನಾನು ಇನ್ಮುಂದೆ ಇಸ್ಲಾಮಿಕ್ ಧರ್ಮದಂತೆಯೇ ಬದುಕುತ್ತೇನೆ, ಇಸ್ಲಾಮಿಕ್ ತತ್ವ ಬೋಧನೆಯನ್ನ ಅನುಸರಿಸುತ್ತೇನೆ ಎಂದು ಹೇಳಿರುವ ಆಯೇಶಾ ನಸೀಮ್, ನಾನು ಕ್ರಿಕೆಟ್ ಆಟ ತ್ಯಜಿಸುತ್ತಿದ್ದೇನೆ ಮತ್ತು ಇಸ್ಲಾಂ ಧರ್ಮದ ಪ್ರಕಾರ ನನ್ನ ಜೀವನವನ್ನು ನಡೆಸಲು ಬಯಸುತ್ತೇನೆ’ ಎಂದು ಹೇಳಿದ್ದಾರೆ.
ಆರಂಭಿಕ ಹಂತದಿಂದಲೇ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದ ಆಯೇಶಾ, ಮುಂದೆ ತಂಡ ನಾಯಕತ್ವ ವಹಿಸುವ ಭರವಸೆ ಮೂಡಿಸಿದ್ದರು. ಇದೀಗ ನಿವೃತ್ತಿ ಘೋಷಿಸಿ ನಿರಾಸೆ ಮೂಡಿಸಿದ್ದಾರೆ. ನಸೀಮ್ ಅವರು ಇಸ್ಲಾಂ ಧರ್ಮದ ಪ್ರಕಾರ ತಮ್ಮ ಜೀವನವನ್ನು ನಡೆಸುವ ಕಾರಣದಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ವಿಚಾರವಾಗಿ ನಸೀಮ್ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ಗೂ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
18 ವರ್ಷದ ಪಾಕ್ ಮಹಿಳಾ ಆಟಗಾರ್ತಿ ಆಯೇಶಾ ನಸೀಮ್ ಈವರೆಗೆ ನಾಲ್ಕು ಏಕದಿನ, 30 T20 ಪಂದ್ಯಗಳನ್ನಾಡಿದ್ದಾರೆ. ಅಗ್ರ ಕ್ರಮಾಂಕದ ಬ್ಯಾಟರ್ ಆಗಿ ಟಿ20 ಕ್ರಿಕೆಟ್ನಲ್ಲಿ 18:45 ಸರಾಸರಿಯಲ್ಲಿ 369 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ ಕೇವಲ 33 ರನ್ ಗಳಿಸಿದ್ದಾರೆ. 2023ರ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ವಿರುದ್ಧ ಕಣಕ್ಕಿಳಿದಾಗ 25 ಎಸೆತಗಳಲ್ಲಿ ಸ್ಫೋಟಕ 43 ರನ್ ಸಿಡಿಸಿದ್ದರು. 2021ರಲ್ಲಿ ಆಯೇಶಾ ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿದಾಗ 33 ಎಸೆತಗಳಲ್ಲಿ 45 ರನ್ ಗಳಿಸಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅದೇ ವರ್ಷದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಕ್ರಿಕೆಟ್ನಲ್ಲಿ 31 ಎಸೆತಗಳಲ್ಲಿ 45 ರನ್ ಗಳಿಸಿ ಮಿಂಚಿದ್ದರು.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…