ಕ್ರೀಡೆ

ಇಸ್ಲಾಂಗಾಗಿ ಬದುಕು ಮೀಸಲು: ಧರ್ಮಕ್ಕಾಗಿ ಕ್ರಿಕೆಟ್ ತ್ಯಜಿಸಿದ ಪಾಕಿಸ್ತಾನದ ಆಟಗಾರ್ತಿ

ಇಸ್ಲಾಮಾಬಾದ್‌: ಧಾರ್ಮಿಕತೆಗಾಗಿ ಪಾಕಿಸ್ತಾನದ ಸ್ಚಾರ್ ಆಟಗಾರ್ತಿಯೊಬ್ಬರು ಕ್ರಿಕೆಟ್ ಅನ್ನೇ ತ್ಯಜಿಸಲು ಮುಂದಾಗಿದ್ದಾರೆ.

ಹೌದು.. ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡದ ಸ್ಠಾರ್ ಆಟಗಾರ್ತಿ ಆಯೇಶಾ ನಸೀಮ್ ತನ್ನ 18ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ತನ್ನ ಮುಂದಿನ ಬದುಕನ್ನು ಇಸ್ಲಾಂ ಧರ್ಮಕ್ಕಾಗಿ ಮೀಸಲಿಡುತ್ತೇನೆ ಎಂದು ಹೇಳಿದ್ದಾರೆ.

‘ನಾನು ಇನ್ಮುಂದೆ ಇಸ್ಲಾಮಿಕ್‌ ಧರ್ಮದಂತೆಯೇ ಬದುಕುತ್ತೇನೆ, ಇಸ್ಲಾಮಿಕ್‌ ತತ್ವ ಬೋಧನೆಯನ್ನ ಅನುಸರಿಸುತ್ತೇನೆ ಎಂದು ಹೇಳಿರುವ ಆಯೇಶಾ ನಸೀಮ್, ನಾನು ಕ್ರಿಕೆಟ್ ಆಟ ತ್ಯಜಿಸುತ್ತಿದ್ದೇನೆ ಮತ್ತು ಇಸ್ಲಾಂ ಧರ್ಮದ ಪ್ರಕಾರ ನನ್ನ ಜೀವನವನ್ನು ನಡೆಸಲು ಬಯಸುತ್ತೇನೆ’ ಎಂದು ಹೇಳಿದ್ದಾರೆ.

ಆರಂಭಿಕ ಹಂತದಿಂದಲೇ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡುತ್ತಿದ್ದ ಆಯೇಶಾ, ಮುಂದೆ ತಂಡ ನಾಯಕತ್ವ ವಹಿಸುವ ಭರವಸೆ ಮೂಡಿಸಿದ್ದರು. ಇದೀಗ ನಿವೃತ್ತಿ ಘೋಷಿಸಿ ನಿರಾಸೆ ಮೂಡಿಸಿದ್ದಾರೆ. ನಸೀಮ್ ಅವರು ಇಸ್ಲಾಂ ಧರ್ಮದ ಪ್ರಕಾರ ತಮ್ಮ ಜೀವನವನ್ನು ನಡೆಸುವ ಕಾರಣದಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ವಿಚಾರವಾಗಿ  ನಸೀಮ್ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ಗೂ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

18 ವರ್ಷದ ಪಾಕ್‌ ಮಹಿಳಾ ಆಟಗಾರ್ತಿ ಆಯೇಶಾ ನಸೀಮ್ ಈವರೆಗೆ ನಾಲ್ಕು ಏಕದಿನ, 30 T20 ಪಂದ್ಯಗಳನ್ನಾಡಿದ್ದಾರೆ. ಅಗ್ರ ಕ್ರಮಾಂಕದ ಬ್ಯಾಟರ್‌ ಆಗಿ ಟಿ20 ಕ್ರಿಕೆಟ್‌ನಲ್ಲಿ 18:45 ಸರಾಸರಿಯಲ್ಲಿ 369 ರನ್‌ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಕೇವಲ 33 ರನ್‌ ಗಳಿಸಿದ್ದಾರೆ. 2023ರ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ವಿರುದ್ಧ ಕಣಕ್ಕಿಳಿದಾಗ 25 ಎಸೆತಗಳಲ್ಲಿ ಸ್ಫೋಟಕ 43 ರನ್‌ ಸಿಡಿಸಿದ್ದರು. 2021ರಲ್ಲಿ ಆಯೇಶಾ ವೆಸ್ಟ್‌ ಇಂಡೀಸ್‌ ವಿರುದ್ಧ ಕಣಕ್ಕಿಳಿದಾಗ 33 ಎಸೆತಗಳಲ್ಲಿ 45 ರನ್‌ ಗಳಿಸಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅದೇ ವರ್ಷದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಕ್ರಿಕೆಟ್‌ನಲ್ಲಿ 31 ಎಸೆತಗಳಲ್ಲಿ 45 ರನ್‌ ಗಳಿಸಿ ಮಿಂಚಿದ್ದರು.

andolanait

Recent Posts

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

26 mins ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

2 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

2 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

6 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

8 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

9 hours ago