ಕ್ರೀಡೆ

ಎರಡನೇ ಏಕದಿನ: ಅಫ್ಘಾನಿಸ್ತಾನ ವಿರುದ್ಧ ಕೊನೆಯ ಓವರ್ ನಲ್ಲಿ ಗೆದ್ದ ಪಾಕಿಸ್ತಾನ

ಕೊಲಂಬೊ : ಆರಂಭಿಕ ಬ್ಯಾಟರ್ ಇಮಾಮ್ ವುಲ್-ಹಕ್(91 ರನ್), ನಾಯಕ ಬಾಬರ್ ಅಝಮ್(53 ರನ್) ಹಾಗೂ ಶಾದಾಬ್ ಖಾನ್ ಅವರ 48 ರನ್ ಗಳ ಮಹತ್ವದ ಕೊಡುಗೆಯ ನೆರವಿನಿಂದ ಪಾಕಿಸ್ತಾನ ಕ್ರಿಕೆಟ್ ತಂಡ ಅಫ್ಘಾನಿಸ್ತಾನ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಕೊನೆಯ ಓವರ್ ಥ್ರಿಲ್ಲರ್ ನಲ್ಲಿ 1 ವಿಕೆಟ್ ಅಂತರದಿಂದ ಜಯಶಾಲಿಯಾಯಿತು. ಅಫ್ಘಾನ್ ಬ್ಯಾಟರ್ ರಹಮನುಲ್ಲಾ ಗುರ್ಬಾಝ್ ಅವರ ಶತಕ(151 ರನ್, 151 ಎಸೆತ)ವ್ಯರ್ಥವಾಯಿತು.

ಗುರುವಾರ ನಡೆದ ಪಂದ್ಯದಲ್ಲಿ ಉಭಯ ತಂಡಗಳು ಒಟ್ಟು 602 ರನ್ ಗಳಿಸಿದ್ದವು. ಇದು ಪಾಕ್ ಹಾಗೂ ಅಫ್ಗಾನ್ ನಡುವಿನ ಪಂದ್ಯದಲ್ಲಿ ದಾಖಲಾದ ಗರಿಷ್ಠ ಸ್ಕೋರಾಗಿದೆ. ಈ ಗೆಲುವಿನ ಮೂಲಕ ಪಾಕ್ ತಂಡ 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನಿಸ್ತಾನ ತಂಡ ಗುರ್ಬಾಝ್ ಅವರ ಅದ್ಭುತ 151 ರನ್ನುಗಳ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 300 ರನ್ ಗಳಿಸಿತು.ಇದು ಪಾಕಿಸ್ತಾನದ ವಿರುದ್ಧ ಅಫ್ಘಾನಿಸ್ತಾನ ಗಳಿಸಿದ ಗರಿಷ್ಠ ಮೊತ್ತವಾಗಿತ್ತು.

14 ಬೌಂಡರಿಗಳು ಹಾಗೂ ಮೂರು ಸಿಕ್ಸರ್ ಗಳನ್ನು ಸಿಡಿಸಿದ ಗುರ್ಬಾಝ್ ಅವರು ಪಾಕಿಸ್ತಾನದ ಬೌಲಿಂಗ್ ದಾಳಿಯನ್ನು ದಿಟ್ಟವಾಗಿ ಎದುರಿಸಿದರು. ಇಬ್ರಾಹಿಂ ಝದ್ರಾನ್ (80 ರನ್) ಜೊತೆಗೂಡಿ ಮೊದಲ ವಿಕೆಟ್ ಗೆ 227 ರನ್ ಗಳನ್ನು ಸೇರಿಸಿದರು.

ಗುರ್ಬಾಝ್ ಅವರು ಪಾಕಿಸ್ತಾನದ ವಿರುದ್ಧ ಅತ್ಯಧಿಕ ಸ್ಕೋರ್ ಗಳಿಸಿದ ಹಾಗೂ ಶತಕ ಗಳಿಸಿದ ಅಫ್ಘಾನಿಸ್ತಾನದ ಮೊದಲ ಆಟಗಾರನೆಂಬ ಕೀರ್ತಿಗೆ ಭಾಜನರಾದರು. ಹಶ್ಮತುಲ್ಲಾ ಶಾಹಿದಿ ( ಅಜೇಯ 97)ಅಫ್ಗಾನ್ ಪರ ಗರಿಷ್ಠ ಸ್ಕೋರ್ ಗಳಿಸಿದ್ದರು.

ಅಫ್ಘಾನ್ ಇನಿಂಗ್ಸ್ ಗೆ ಪ್ರತ್ಯುತ್ತರವಾಗಿ ಪಾಕಿಸ್ತಾನವು ಒಂದು ಹಂತದಲ್ಲಿ ಇಮಾಮ್-ಉಲ್-ಹಕ್ (91) ಮತ್ತು ಬಾಬರ್ ಅಝಮ್ (53) ನಡುವಿನ ಎರಡನೇ ವಿಕೆಟ್ ಗೆ 118 ರನ್ ಗಳ ಜೊತೆಯಾಟದ ನೆರವಿನಿಂದ ಉತ್ತಮ ಆರಂಭ ಪಡೆದಿತ್ತು.

ಆದಾಗ್ಯೂ, ಪಾಕಿಸ್ತಾನವು 41 ರನ್ ಗಳಿಗೆ ಐದು ವಿಕೆಟ್ ಗಳನ್ನು ಕಳೆದುಕೊಂಡು ಕುಸಿತ ಕಂಡಿತು. ಶಾದಾಬ್ ಖಾನ್ ಹಾಗೂ ಇಫ್ತಿಕರ್ ಅಹ್ಮದ್ (17 ರನ್) ತಂಡವನ್ನು ಆಧರಿಸಿದರೂ ವಿಕೆಟಟ್ ಗಳು ಉರುಳುತ್ತಲೇ ಇದ್ದವು, ಅಫ್ಘಾನಿಸ್ತಾನ ಗೆಲುವಿನ ಸನಿಹವಿತ್ತು.

12 ಎಸೆತಗಳಲ್ಲಿ 27 ರನ್ ಗಳ ಅಗತ್ಯವಿದ್ದಾಗ ಶಾದಾಬ್ 49ನೇ ಓವರ್ ನ ಕೊನೆಯ ಎರಡು ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ ಬೌಂಡರಿ ಸಿಡಿಸಿದರು. ಶಾದಾಬ್ ಕೊನೆಯ ಓವರ್ ನ ಮೊದಲ ಎಸೆತದಲ್ಲಿ ನಾನ್ ಸ್ಟ್ರೈಕರ್ ತುದಿಯಲ್ಲಿ ರನೌಟ್ ಆದರು. ನಸೀಂ ಶಾ(ಔಟಾಗದೆ 10) ಬೌಂಡರಿ ಗಳಿಸಿ ಇನ್ನೂ ಒಂದು ಎಸೆತ ಬಾಕಿ ಇರುವಾಗಲೇ ಪಾಕ್ ಗೆ ರೋಚಕ ಜಯ ತಂದುಕೊಟ್ಟರು. ಪಾಕ್ 49.5 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 302 ರನ್ ಗಳಿಸಿತು.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago