ಕ್ರೀಡೆ

ಎರಡನೇ ಏಕದಿನ: ಭಾರತ ವಿರುದ್ಧ ಗೆದ್ದು ಬೀಗಿದ ವೆಸ್ಟ್‌ ವಿಂಡೀಸ್‌!

ಬಾರ್ಬಡೋಸ್‌ (ವೆಸ್ಟ್ ಇಂಡೀಸ್‌): ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ ಭಾರತ ತಂಡ ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 6 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತು. ಆ ಮೂಲಕ ಪಂದ್ಯ ಗೆದ್ದ ವೆಸ್ಟ್ ಇಂಡೀಸ್ ಏಕದಿನ ಸರಣಿಯನ್ನು 1-1 ಸಮಬಲ ಕಾಯ್ದುಕೊಂಡಿದೆ.

ಶನಿವಾರ ಇಲ್ಲಿನ ಕೆನ್ಸಿಂಗ್ಟನ್‌ ಓವಲ್‌ ಮೈದಾನದಲ್ಲಿ ಭಾರತ ನೀಡಿದ್ದ ಕೇವಲ 182 ರನ್ ಗುರಿ ಹಿಂಬಾಲಿಸಿದ ವೆಸ್ಟ್ ಇಂಡೀಸ್ ತಂಡದ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು. ಮುಂಚೂಣಿಯಲ್ಲಿ ನಿಂತು ಬ್ಯಾಟ್ ಮಾಡಿದ ನಾಯಕ ಶೇಯ್‌ ಹೋಪ್ 80 ಎಸೆತಗಳಲ್ಲಿ ಎರಡು ಸಿಕ್ಸರ್ ಮತ್ತು ಎರಡು ಬೌಂಡರಿ ಗಳೊಂದಿಗೆ ಅಜೇಯ 63 ರನ್ ಗಳಿಸಿ ತಂಡವನ್ನು ಗೆಲ್ಲಿಸಿದರು. ಇವರಿಗೆ ಮತ್ತೊಂದು ತುದಿಯಲ್ಲಿ ಸಾಥ್‌ ನೀಡಿದ ಕೀಸಿ ಕಾರ್ಟಿ ಅಜೇಯ 45 ರನ್‌ ಗಳಿಸಿದರು.

ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಭಾರತ ತಂಡಕ್ಕೆ ಓಪನರ್ಸ್‌ ಇಶಾನ್‌ ಕಿಶನ್‌ (55) ಹಾಗೂ ಶುಭಮನ್ ಗಿಲ್‌ (34) ಮೊದಲನೇ ವಿಕೆಟ್‌ಗೆ 90 ರನ್‌ ಕಲೆ ಹಾಕುವ ಮೂಲಕ ಭರ್ಜರಿ ಆರಂಭ ತಂದುಕೊಟ್ಟಿದ್ದರು. ಆದರೆ, ಒಮ್ಮೆ ಶುಭಮನ್ ಗಿಲ್‌ ಹಾಗೂ ಇಶಾನ್‌ ಕಿಶನ್‌ ವಿಕೆಟ್‌ ಒಪ್ಪಿಸಿದ ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲಿಲ್ಲ. ಕೇವಲ 23 ರನ್‌ಗಳ ಅಂತರದಲ್ಲಿ ಭಾರತ ತಂಡ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡಿತು.
ಸಂಜು ಸ್ಯಾಮ್ಸನ್‌ (9), ಅಕ್ಷರ್‌ ಪಟೇಲ್‌ (1) ಹಾಗೂ ಹಾರ್ದಿಕ್‌ ಪಾಂಡ್ಯ (7) ಎರಡಂಕಿ ವೈಯಕ್ತಿಕ ಮೊತ್ತ ಕಲೆ ಹಾಕುವಲ್ಲಿ ವಿಫಲರಾದರು. 24 ರನ್‌ ಗಳಿಸಿ ಉತ್ತಮ ಆರಂಭ ಪಡೆದಿದ್ದ ಸೂರ್ಯಕುಮಾರ್‌ ಯಾದವ್‌ ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ. ರವೀಂದ್ರ ಜಡೇಜಾ (10) ಹಾಗೂ ಶಾರ್ದುಲ್‌ (16) ಸಹ ನಿರಾಶೆ ಮೂಡಿಸಿದರು. ಅಂತಿಮವಾಗಿ ಭಾರತ ತಂಡ 40.5 ಓವರ್‌ಗಳಿಗೆ 181 ರನ್‌ಗಳಿಗೆ ಆಲ್‌ಔಟ್‌ ಆಯಿತು.
ವೆಸ್ಟ್ ಇಂಡೀಸ್‌ ಪರ ಗುಡಕೇಶ್‌ ಮೋಥಿ ಹಾಗೂ ರೊಮಾರಿಯೊ ಶೆಫರ್ಡ್‌ ತಲಾ 3 ವಿಕೆಟ್‌ಗಳನ್ನು ಕಬಳಿಸಿದರು. ಅಲ್ಝಾರಿ ಜೋಸೆಪ್ ಎರಡು ವಿಕೆಟ್‌ ಕಿತ್ತರು.

ಸ್ಕೋರ್‌ ವಿವರ

ಭಾರತ: 40.5 ಓವರ್‌ಗಳಿಗೆ 181-10 (ಇಶಾನ್‌ ಕಿಶನ್‌ 55, ಶುಭಮನ್ ಗಿಲ್‌ 34, ಸೂರ್ಯಕುಮಾರ್ ಯಾದವ್‌ 24; ಗುಡಕೇಶ್‌ ಮೋಥಿ 36ಕ್ಕೆ 3, ರೊಮಾರಿಯೊ ಶೆಫರ್ಡ್ 37ಕ್ಕೆ 3

ವೆಸ್ಟ್ ಇಂಡೀಸ್‌: 36.4 ಓವರ್‌ಗಳಿಗೆ 182-4 (ಶೇಯ್‌ ಹೋಪ್‌ 63*, ಕೀಸಿ ಕಾರ್ಟಿ 48*, ಕೈಲ್‌ ಮೇಯರ್ಸ್‌ 36; ಶಾರ್ದುಲ್‌ ಠಾಕೂರ್‌ 42ಕ್ಕೆ 3)
ಪಂದ್ಯ ಶ್ರೇಷ್ಠ ಪ್ರಶಸ್ತಿ: ಶೇಯ್‌ ಹೋಪ್‌
andolanait

Recent Posts

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

34 mins ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

58 mins ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

3 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

3 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

3 hours ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

3 hours ago