ಕ್ರೀಡೆ

ಎರಡನೇ ಏಕದಿನ: ಭಾರತ ವಿರುದ್ಧ ಗೆದ್ದು ಬೀಗಿದ ವೆಸ್ಟ್‌ ವಿಂಡೀಸ್‌!

ಬಾರ್ಬಡೋಸ್‌ (ವೆಸ್ಟ್ ಇಂಡೀಸ್‌): ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ ಭಾರತ ತಂಡ ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 6 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತು. ಆ ಮೂಲಕ ಪಂದ್ಯ ಗೆದ್ದ ವೆಸ್ಟ್ ಇಂಡೀಸ್ ಏಕದಿನ ಸರಣಿಯನ್ನು 1-1 ಸಮಬಲ ಕಾಯ್ದುಕೊಂಡಿದೆ.

ಶನಿವಾರ ಇಲ್ಲಿನ ಕೆನ್ಸಿಂಗ್ಟನ್‌ ಓವಲ್‌ ಮೈದಾನದಲ್ಲಿ ಭಾರತ ನೀಡಿದ್ದ ಕೇವಲ 182 ರನ್ ಗುರಿ ಹಿಂಬಾಲಿಸಿದ ವೆಸ್ಟ್ ಇಂಡೀಸ್ ತಂಡದ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು. ಮುಂಚೂಣಿಯಲ್ಲಿ ನಿಂತು ಬ್ಯಾಟ್ ಮಾಡಿದ ನಾಯಕ ಶೇಯ್‌ ಹೋಪ್ 80 ಎಸೆತಗಳಲ್ಲಿ ಎರಡು ಸಿಕ್ಸರ್ ಮತ್ತು ಎರಡು ಬೌಂಡರಿ ಗಳೊಂದಿಗೆ ಅಜೇಯ 63 ರನ್ ಗಳಿಸಿ ತಂಡವನ್ನು ಗೆಲ್ಲಿಸಿದರು. ಇವರಿಗೆ ಮತ್ತೊಂದು ತುದಿಯಲ್ಲಿ ಸಾಥ್‌ ನೀಡಿದ ಕೀಸಿ ಕಾರ್ಟಿ ಅಜೇಯ 45 ರನ್‌ ಗಳಿಸಿದರು.

ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಭಾರತ ತಂಡಕ್ಕೆ ಓಪನರ್ಸ್‌ ಇಶಾನ್‌ ಕಿಶನ್‌ (55) ಹಾಗೂ ಶುಭಮನ್ ಗಿಲ್‌ (34) ಮೊದಲನೇ ವಿಕೆಟ್‌ಗೆ 90 ರನ್‌ ಕಲೆ ಹಾಕುವ ಮೂಲಕ ಭರ್ಜರಿ ಆರಂಭ ತಂದುಕೊಟ್ಟಿದ್ದರು. ಆದರೆ, ಒಮ್ಮೆ ಶುಭಮನ್ ಗಿಲ್‌ ಹಾಗೂ ಇಶಾನ್‌ ಕಿಶನ್‌ ವಿಕೆಟ್‌ ಒಪ್ಪಿಸಿದ ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲಿಲ್ಲ. ಕೇವಲ 23 ರನ್‌ಗಳ ಅಂತರದಲ್ಲಿ ಭಾರತ ತಂಡ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡಿತು.
ಸಂಜು ಸ್ಯಾಮ್ಸನ್‌ (9), ಅಕ್ಷರ್‌ ಪಟೇಲ್‌ (1) ಹಾಗೂ ಹಾರ್ದಿಕ್‌ ಪಾಂಡ್ಯ (7) ಎರಡಂಕಿ ವೈಯಕ್ತಿಕ ಮೊತ್ತ ಕಲೆ ಹಾಕುವಲ್ಲಿ ವಿಫಲರಾದರು. 24 ರನ್‌ ಗಳಿಸಿ ಉತ್ತಮ ಆರಂಭ ಪಡೆದಿದ್ದ ಸೂರ್ಯಕುಮಾರ್‌ ಯಾದವ್‌ ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ. ರವೀಂದ್ರ ಜಡೇಜಾ (10) ಹಾಗೂ ಶಾರ್ದುಲ್‌ (16) ಸಹ ನಿರಾಶೆ ಮೂಡಿಸಿದರು. ಅಂತಿಮವಾಗಿ ಭಾರತ ತಂಡ 40.5 ಓವರ್‌ಗಳಿಗೆ 181 ರನ್‌ಗಳಿಗೆ ಆಲ್‌ಔಟ್‌ ಆಯಿತು.
ವೆಸ್ಟ್ ಇಂಡೀಸ್‌ ಪರ ಗುಡಕೇಶ್‌ ಮೋಥಿ ಹಾಗೂ ರೊಮಾರಿಯೊ ಶೆಫರ್ಡ್‌ ತಲಾ 3 ವಿಕೆಟ್‌ಗಳನ್ನು ಕಬಳಿಸಿದರು. ಅಲ್ಝಾರಿ ಜೋಸೆಪ್ ಎರಡು ವಿಕೆಟ್‌ ಕಿತ್ತರು.

ಸ್ಕೋರ್‌ ವಿವರ

ಭಾರತ: 40.5 ಓವರ್‌ಗಳಿಗೆ 181-10 (ಇಶಾನ್‌ ಕಿಶನ್‌ 55, ಶುಭಮನ್ ಗಿಲ್‌ 34, ಸೂರ್ಯಕುಮಾರ್ ಯಾದವ್‌ 24; ಗುಡಕೇಶ್‌ ಮೋಥಿ 36ಕ್ಕೆ 3, ರೊಮಾರಿಯೊ ಶೆಫರ್ಡ್ 37ಕ್ಕೆ 3

ವೆಸ್ಟ್ ಇಂಡೀಸ್‌: 36.4 ಓವರ್‌ಗಳಿಗೆ 182-4 (ಶೇಯ್‌ ಹೋಪ್‌ 63*, ಕೀಸಿ ಕಾರ್ಟಿ 48*, ಕೈಲ್‌ ಮೇಯರ್ಸ್‌ 36; ಶಾರ್ದುಲ್‌ ಠಾಕೂರ್‌ 42ಕ್ಕೆ 3)
ಪಂದ್ಯ ಶ್ರೇಷ್ಠ ಪ್ರಶಸ್ತಿ: ಶೇಯ್‌ ಹೋಪ್‌
andolanait

Recent Posts

ಮೈಸೂರು | ವರ್ತುಲ ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…

17 seconds ago

ನನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಸುರೇಶ್‌ ಕುಮಾರ್‌

ಬೆಂಗಳೂರು: ಐಪಿಎಲ್‌ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್‌ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌…

5 mins ago

ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ, ಮಾಜಿ ಗೃಹ ಸಚಿವ ಅರೆಸ್ಟ್‌

ಕಠ್ಮಂಡು: ಕಳೆದ ವರ್ಷ ದೇಶದಾದ್ಯಂತ ನಡೆದಿದ್ದ ಜನರೇಷನ್‌ ಝಡ್‌ ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಹಾಗೂ…

21 mins ago

ವೈರಮುಡಿ ಬ್ರಹ್ಮೋತ್ಸವಕ್ಕೆ ಕ್ಷಣಗಣನೆ : ವೈರಮುಡಿ ಆಭರಣ ತಲೆಮೇಲೆ ಹೊತ್ತು ತಂದ ಡಿಸಿ, ಎಸ್‌ಪಿ

ಮೇಲುಕೋಟೆ : ವಿಶ್ವವಿಖ್ಯಾತ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ, ಜಿಲ್ಲಾ ಖಜಾನೆಯಿಂದ…

39 mins ago

ಪತಿ ಮೃತಪಟ್ಟ ಮಾರನೇ ದಿನವೇ ಕರ್ತವ್ಯಕ್ಕೆ ಹಾಜರಾದ ಶಿಕ್ಷಕಿ!

ಎಚ್‌.ಡಿ.ಕೋಟೆ : ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಂಪಾಪುರ ಸಮೀಪದ…

1 hour ago

ದೇಶದಲ್ಲಿ ಸಾಕಷ್ಟು ತೈಲ ದಾಸ್ತಾನು : ವಾಣಿಜ್ಯ ಅನಿಲ ಪೂರೈಕೆಯಲ್ಲಿ ಶೇ.70%ಕ್ಕೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು…

2 hours ago