ಕ್ರೀಡೆ

ಎರಡನೇ ಏಕದಿನ: ಭಾರತ ವಿರುದ್ಧ ಗೆದ್ದು ಬೀಗಿದ ವೆಸ್ಟ್‌ ವಿಂಡೀಸ್‌!

ಬಾರ್ಬಡೋಸ್‌ (ವೆಸ್ಟ್ ಇಂಡೀಸ್‌): ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ ಭಾರತ ತಂಡ ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 6 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತು. ಆ ಮೂಲಕ ಪಂದ್ಯ ಗೆದ್ದ ವೆಸ್ಟ್ ಇಂಡೀಸ್ ಏಕದಿನ ಸರಣಿಯನ್ನು 1-1 ಸಮಬಲ ಕಾಯ್ದುಕೊಂಡಿದೆ.

ಶನಿವಾರ ಇಲ್ಲಿನ ಕೆನ್ಸಿಂಗ್ಟನ್‌ ಓವಲ್‌ ಮೈದಾನದಲ್ಲಿ ಭಾರತ ನೀಡಿದ್ದ ಕೇವಲ 182 ರನ್ ಗುರಿ ಹಿಂಬಾಲಿಸಿದ ವೆಸ್ಟ್ ಇಂಡೀಸ್ ತಂಡದ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು. ಮುಂಚೂಣಿಯಲ್ಲಿ ನಿಂತು ಬ್ಯಾಟ್ ಮಾಡಿದ ನಾಯಕ ಶೇಯ್‌ ಹೋಪ್ 80 ಎಸೆತಗಳಲ್ಲಿ ಎರಡು ಸಿಕ್ಸರ್ ಮತ್ತು ಎರಡು ಬೌಂಡರಿ ಗಳೊಂದಿಗೆ ಅಜೇಯ 63 ರನ್ ಗಳಿಸಿ ತಂಡವನ್ನು ಗೆಲ್ಲಿಸಿದರು. ಇವರಿಗೆ ಮತ್ತೊಂದು ತುದಿಯಲ್ಲಿ ಸಾಥ್‌ ನೀಡಿದ ಕೀಸಿ ಕಾರ್ಟಿ ಅಜೇಯ 45 ರನ್‌ ಗಳಿಸಿದರು.

ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಭಾರತ ತಂಡಕ್ಕೆ ಓಪನರ್ಸ್‌ ಇಶಾನ್‌ ಕಿಶನ್‌ (55) ಹಾಗೂ ಶುಭಮನ್ ಗಿಲ್‌ (34) ಮೊದಲನೇ ವಿಕೆಟ್‌ಗೆ 90 ರನ್‌ ಕಲೆ ಹಾಕುವ ಮೂಲಕ ಭರ್ಜರಿ ಆರಂಭ ತಂದುಕೊಟ್ಟಿದ್ದರು. ಆದರೆ, ಒಮ್ಮೆ ಶುಭಮನ್ ಗಿಲ್‌ ಹಾಗೂ ಇಶಾನ್‌ ಕಿಶನ್‌ ವಿಕೆಟ್‌ ಒಪ್ಪಿಸಿದ ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲಿಲ್ಲ. ಕೇವಲ 23 ರನ್‌ಗಳ ಅಂತರದಲ್ಲಿ ಭಾರತ ತಂಡ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡಿತು.
ಸಂಜು ಸ್ಯಾಮ್ಸನ್‌ (9), ಅಕ್ಷರ್‌ ಪಟೇಲ್‌ (1) ಹಾಗೂ ಹಾರ್ದಿಕ್‌ ಪಾಂಡ್ಯ (7) ಎರಡಂಕಿ ವೈಯಕ್ತಿಕ ಮೊತ್ತ ಕಲೆ ಹಾಕುವಲ್ಲಿ ವಿಫಲರಾದರು. 24 ರನ್‌ ಗಳಿಸಿ ಉತ್ತಮ ಆರಂಭ ಪಡೆದಿದ್ದ ಸೂರ್ಯಕುಮಾರ್‌ ಯಾದವ್‌ ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ. ರವೀಂದ್ರ ಜಡೇಜಾ (10) ಹಾಗೂ ಶಾರ್ದುಲ್‌ (16) ಸಹ ನಿರಾಶೆ ಮೂಡಿಸಿದರು. ಅಂತಿಮವಾಗಿ ಭಾರತ ತಂಡ 40.5 ಓವರ್‌ಗಳಿಗೆ 181 ರನ್‌ಗಳಿಗೆ ಆಲ್‌ಔಟ್‌ ಆಯಿತು.
ವೆಸ್ಟ್ ಇಂಡೀಸ್‌ ಪರ ಗುಡಕೇಶ್‌ ಮೋಥಿ ಹಾಗೂ ರೊಮಾರಿಯೊ ಶೆಫರ್ಡ್‌ ತಲಾ 3 ವಿಕೆಟ್‌ಗಳನ್ನು ಕಬಳಿಸಿದರು. ಅಲ್ಝಾರಿ ಜೋಸೆಪ್ ಎರಡು ವಿಕೆಟ್‌ ಕಿತ್ತರು.

ಸ್ಕೋರ್‌ ವಿವರ

ಭಾರತ: 40.5 ಓವರ್‌ಗಳಿಗೆ 181-10 (ಇಶಾನ್‌ ಕಿಶನ್‌ 55, ಶುಭಮನ್ ಗಿಲ್‌ 34, ಸೂರ್ಯಕುಮಾರ್ ಯಾದವ್‌ 24; ಗುಡಕೇಶ್‌ ಮೋಥಿ 36ಕ್ಕೆ 3, ರೊಮಾರಿಯೊ ಶೆಫರ್ಡ್ 37ಕ್ಕೆ 3

ವೆಸ್ಟ್ ಇಂಡೀಸ್‌: 36.4 ಓವರ್‌ಗಳಿಗೆ 182-4 (ಶೇಯ್‌ ಹೋಪ್‌ 63*, ಕೀಸಿ ಕಾರ್ಟಿ 48*, ಕೈಲ್‌ ಮೇಯರ್ಸ್‌ 36; ಶಾರ್ದುಲ್‌ ಠಾಕೂರ್‌ 42ಕ್ಕೆ 3)
ಪಂದ್ಯ ಶ್ರೇಷ್ಠ ಪ್ರಶಸ್ತಿ: ಶೇಯ್‌ ಹೋಪ್‌
andolanait

Recent Posts

ಪ್ರೀತಿ ಹೆಸರಿನಲ್ಲಿ ಬೆದರಿಕೆ : ತಾಯಿ-ಮಗಳ ಆತ್ಮಹತ್ಯೆ

ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…

2 mins ago

ತೆಕ್ಕಲಕೋಟೆ | ಉತ್ಖನನ ವೇಳೆ ಎರಡು ಅಸ್ಥಿ ಪಂಜರ ಪತ್ತೆ

ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…

1 hour ago

ಮಂಡ್ಯದಲ್ಲಿ ಎಆರ್‌ಎಐ ಸೆಂಟರ್‌ ತೆರೆಯಲು 500 ಕೋಟಿ ರೂ. : ಎಚ್‌ಡಿಕೆ

ಮೈಸೂರು : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ, ಉತ್ತೇಜನಕ್ಕೆ ಕೇಂದ್ರಸರ್ಕಾರ ಆದ್ಯತೆ ನೀಡಿರುವ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರೀಸರ್ಚ್ ಅಸೋಸಿಯೆಷನ್…

2 hours ago

ಗಮನ ಸೆಳೆದ ಸ್ವಚ್ಛತಾ ಮ್ಯಾರಥಾನ್‌

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…

2 hours ago

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

3 hours ago

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

4 hours ago