ಕ್ರೀಡೆ

ಆದಿಪುರುಷ’ ನೋಡಿ ತಲೆ ಚಚ್ಚಿಕೊಂಡ ಸೆಹ್ವಾಗ್!

ಓಂ ರಾವುತ್ ನಿರ್ದೇಶನದ ಚಿತ್ರ ಆದಿಪುರುಷ ಸಿನಿಮಾ ನಕಾರಾತ್ಮಕ ಕಾರಣಗಳಿಗಾಗಿಯೇ ಸಾಕಷ್ಟು ಸುದ್ದಿಯಾಗುತ್ತಿದೆ. ಟೀಸರ್ ಬಿಡುಗಡೆಯಾದಾಗಿನಿಂದಲೂ ಚಿತ್ರಕ್ಕೆ ಒಂದಿಲ್ಲೊಂದು ಸಂಕಷ್ಟ ಎದುರಾಗಿದೆ. ಪ್ರಭಾಸ್, ಕೃತಿ ಸನೋನ್ ಮತ್ತು ಸೈಫ್ ಅಲಿ ಖಾನ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರವು ರಾಮಾಯಣ ಮಹಾಕಾವ್ಯವನ್ನು ಆಧರಿಸಿದ್ದಾಗಿದೆ.

ಸಿನಿಮಾವು ಅನೇಕ ಧಾರ್ಮಿಕ ಗುಂಪುಗಳು, ವೀಕ್ಷಕರು ಮತ್ತು ಚಲನಚಿತ್ರ ವಿಮರ್ಶಕರಿಂದ ವಿಎಫ್ಎಕ್ಸ್, ಪಾತ್ರಗಳ ಚಿತ್ರಣ ಮತ್ತು ಸಂಭಾಷಣೆಗಳಿಗಾಗಿ ವ್ಯಾಪಕವಾಗಿ ಟೀಕೆಗೆ ಗುರಿಯಾಗಿದೆ. ಈ ಎಲ್ಲಾ ಹಿನ್ನಡೆಗಳ ನಡುವೆ, ಆದಿಪುರುಷ ಚಿತ್ರವು ಭಾರತದ ಮಾಜಿ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಅವರ ರೂಪದಲ್ಲಿ ಮತ್ತೊಬ್ಬ ವಿಮರ್ಶಕನನ್ನು ಪಡೆದಿದೆ. ಸೆಹ್ವಾಗ್ ಕೂಡ ಇದೀಗ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸೆಹ್ವಾಗ್, ‘ಆದಿಪುರುಷ್ ದೇಖ್‌ಕರ್ ಪಟ ಚಲಾ ಕಟ್ಟಪ್ಪ ನೆ ಬಾಹುಬಲಿ ಕೊ ಕ್ಯೂನ್ ಮಾರ ಥಾ. (ಆದಿಪುರುಷನನ್ನು ನೋಡಿದ ನಂತರ, ಕಟ್ಟಪ್ಪ ಬಾಹುಬಲಿಯನ್ನು ಏಕೆ ಕೊಂದಿದ್ದಾನೆಂದು ನನಗೆ ಅರಿವಾಯಿತು)’ ಎಂದು ಬರೆದಿದ್ದಾರೆ.
ಸೆಹ್ವಾಗ್ ಅವರ ಟ್ವೀಟ್ ಪ್ರಭಾಸ್ ಅವರ 2015ರ ಬ್ಲಾಕ್‌ಬಸ್ಟರ್ ಚಿತ್ರ ‘ಬಾಹುಬಲಿ: ದಿ ಬಿಗಿನಿಂಗ್’ ಅನ್ನು ಉಲ್ಲೇಖಿಸುತ್ತದೆ. ಚಿತ್ರದಲ್ಲಿ ಮುಖ್ಯ ಪಾತ್ರಧಾರಿ ಬಾಹುಬಲಿ ತನ್ನ ಚಿಕ್ಕಪ್ಪ ಕಟ್ಟಪ್ಪನಿಂದಲೇ ಅಂತ್ಯ ಕಾಣುತ್ತಾನೆ ಮತ್ತು ಕಟ್ಟಪ್ಪ ತನ್ನ ಸ್ವಂತ ಸೋದರಳಿಯನನ್ನು ಏಕೆ ಕೊಂದನು ಎಂಬ ಪ್ರಶ್ನೆಯೊಂದಿಗೆ ಆ ಚಿತ್ರವು ಕೊನೆಯಾಗಿತ್ತು.
ಆದಿಪುರುಷ ಸಿನಿಮಾ ಬಗ್ಗೆ ಹೇಳುವುದಾದರೆ, ಅಖಿಲ ಭಾರತ ಸಿನಿ ಕಾರ್ಮಿಕರ ಸಂಘವು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಂಬೈ ಪೊಲೀಸರಿಗೆ ಪತ್ರ ಬರೆದಿದ್ದು, ಚಿತ್ರದ ನಿರ್ಮಾಪಕ, ನಿರ್ದೇಶಕ ಮತ್ತು ಲೇಖಕರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದೆ.
ಭಾರತದ ಮಾಜಿ ಬ್ಯಾಟರ್ ಸೆಹ್ವಾಗ್ ಇತ್ತೀಚೆಗೆ ಆಸ್ಟ್ರೇಲಿಯಾ ಟೆಸ್ಟ್ ನಾಯಕ ಪ್ಯಾಟ್ ಕಮ್ಮಿನ್ಸ್ ಅವರನ್ನು ಶ್ಲಾಘಿಸಿದರು. ಅವರು ‘ಮಿಸ್ಟರ್ ಕೂಲ್’ ಎಂಬ ಬಿರುದನ್ನು ಸಹ ನೀಡಿದರು. ಇದನ್ನು ಭಾರತದ ಮಾಜಿ ನಾಯಕ ಎಂಎಸ್ ಧೋನಿಗೆ ನೀಡಲಾಗಿದೆ.
andolanait

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

5 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

6 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

7 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

7 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

7 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

8 hours ago