ಕ್ರೀಡೆ

ಆದಿಪುರುಷ’ ನೋಡಿ ತಲೆ ಚಚ್ಚಿಕೊಂಡ ಸೆಹ್ವಾಗ್!

ಓಂ ರಾವುತ್ ನಿರ್ದೇಶನದ ಚಿತ್ರ ಆದಿಪುರುಷ ಸಿನಿಮಾ ನಕಾರಾತ್ಮಕ ಕಾರಣಗಳಿಗಾಗಿಯೇ ಸಾಕಷ್ಟು ಸುದ್ದಿಯಾಗುತ್ತಿದೆ. ಟೀಸರ್ ಬಿಡುಗಡೆಯಾದಾಗಿನಿಂದಲೂ ಚಿತ್ರಕ್ಕೆ ಒಂದಿಲ್ಲೊಂದು ಸಂಕಷ್ಟ ಎದುರಾಗಿದೆ. ಪ್ರಭಾಸ್, ಕೃತಿ ಸನೋನ್ ಮತ್ತು ಸೈಫ್ ಅಲಿ ಖಾನ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರವು ರಾಮಾಯಣ ಮಹಾಕಾವ್ಯವನ್ನು ಆಧರಿಸಿದ್ದಾಗಿದೆ.

ಸಿನಿಮಾವು ಅನೇಕ ಧಾರ್ಮಿಕ ಗುಂಪುಗಳು, ವೀಕ್ಷಕರು ಮತ್ತು ಚಲನಚಿತ್ರ ವಿಮರ್ಶಕರಿಂದ ವಿಎಫ್ಎಕ್ಸ್, ಪಾತ್ರಗಳ ಚಿತ್ರಣ ಮತ್ತು ಸಂಭಾಷಣೆಗಳಿಗಾಗಿ ವ್ಯಾಪಕವಾಗಿ ಟೀಕೆಗೆ ಗುರಿಯಾಗಿದೆ. ಈ ಎಲ್ಲಾ ಹಿನ್ನಡೆಗಳ ನಡುವೆ, ಆದಿಪುರುಷ ಚಿತ್ರವು ಭಾರತದ ಮಾಜಿ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಅವರ ರೂಪದಲ್ಲಿ ಮತ್ತೊಬ್ಬ ವಿಮರ್ಶಕನನ್ನು ಪಡೆದಿದೆ. ಸೆಹ್ವಾಗ್ ಕೂಡ ಇದೀಗ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸೆಹ್ವಾಗ್, ‘ಆದಿಪುರುಷ್ ದೇಖ್‌ಕರ್ ಪಟ ಚಲಾ ಕಟ್ಟಪ್ಪ ನೆ ಬಾಹುಬಲಿ ಕೊ ಕ್ಯೂನ್ ಮಾರ ಥಾ. (ಆದಿಪುರುಷನನ್ನು ನೋಡಿದ ನಂತರ, ಕಟ್ಟಪ್ಪ ಬಾಹುಬಲಿಯನ್ನು ಏಕೆ ಕೊಂದಿದ್ದಾನೆಂದು ನನಗೆ ಅರಿವಾಯಿತು)’ ಎಂದು ಬರೆದಿದ್ದಾರೆ.
ಸೆಹ್ವಾಗ್ ಅವರ ಟ್ವೀಟ್ ಪ್ರಭಾಸ್ ಅವರ 2015ರ ಬ್ಲಾಕ್‌ಬಸ್ಟರ್ ಚಿತ್ರ ‘ಬಾಹುಬಲಿ: ದಿ ಬಿಗಿನಿಂಗ್’ ಅನ್ನು ಉಲ್ಲೇಖಿಸುತ್ತದೆ. ಚಿತ್ರದಲ್ಲಿ ಮುಖ್ಯ ಪಾತ್ರಧಾರಿ ಬಾಹುಬಲಿ ತನ್ನ ಚಿಕ್ಕಪ್ಪ ಕಟ್ಟಪ್ಪನಿಂದಲೇ ಅಂತ್ಯ ಕಾಣುತ್ತಾನೆ ಮತ್ತು ಕಟ್ಟಪ್ಪ ತನ್ನ ಸ್ವಂತ ಸೋದರಳಿಯನನ್ನು ಏಕೆ ಕೊಂದನು ಎಂಬ ಪ್ರಶ್ನೆಯೊಂದಿಗೆ ಆ ಚಿತ್ರವು ಕೊನೆಯಾಗಿತ್ತು.
ಆದಿಪುರುಷ ಸಿನಿಮಾ ಬಗ್ಗೆ ಹೇಳುವುದಾದರೆ, ಅಖಿಲ ಭಾರತ ಸಿನಿ ಕಾರ್ಮಿಕರ ಸಂಘವು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಂಬೈ ಪೊಲೀಸರಿಗೆ ಪತ್ರ ಬರೆದಿದ್ದು, ಚಿತ್ರದ ನಿರ್ಮಾಪಕ, ನಿರ್ದೇಶಕ ಮತ್ತು ಲೇಖಕರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದೆ.
ಭಾರತದ ಮಾಜಿ ಬ್ಯಾಟರ್ ಸೆಹ್ವಾಗ್ ಇತ್ತೀಚೆಗೆ ಆಸ್ಟ್ರೇಲಿಯಾ ಟೆಸ್ಟ್ ನಾಯಕ ಪ್ಯಾಟ್ ಕಮ್ಮಿನ್ಸ್ ಅವರನ್ನು ಶ್ಲಾಘಿಸಿದರು. ಅವರು ‘ಮಿಸ್ಟರ್ ಕೂಲ್’ ಎಂಬ ಬಿರುದನ್ನು ಸಹ ನೀಡಿದರು. ಇದನ್ನು ಭಾರತದ ಮಾಜಿ ನಾಯಕ ಎಂಎಸ್ ಧೋನಿಗೆ ನೀಡಲಾಗಿದೆ.
andolanait

Recent Posts

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

1 min ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

30 mins ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

2 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

2 hours ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

2 hours ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

2 hours ago