ಕ್ರೀಡೆ

ಅಭಿಮಾನಿಗಳಿಗೆ ಶಾಕ್‌ ನೀಡಿದ ಸೆರೆನಾ ವಿಲಿಯಮ್ಸ್ ದುಡುಕಿನ ನಿರ್ಧಾರ

ನ್ಯೂಯಾರ್ಕ್: ತವರಿನಲ್ಲಿ ನಡೆಯುತ್ತಿರುವ ಅಮೆರಿಕನ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಸೋಲಿನೊಂದಿಗೆ ಸೆರೆನಾ ವಿಲಿಯಮ್ಸ್ ವೃತ್ತಿ ಜೀವನಕ್ಕೆ ಶನಿವಾರ ವಿದಾಯ ಹೇಳಿದರು.
ವಿಶ್ವದ ಶ್ರೇಷ್ಠ ಟೆನಿಸ್ ಆಟಗಾರ್ತಿ ಅಮೆರಿಕದ ಸೆರೆನಾ ವಿಲಿಯಮ್ಸ್, ಮಹಿಳೆಯರ ಸಿಂಗಲ್ಸ್ ಮೂರನೇ ಸುತ್ತಿನ ಪಂದ್ಯದಲ್ಲಿ ೪೬ನೇ ಶ್ರೇಯಾಂಕದ ಆಸ್ಟ್ರೇಲಿಯಾದ ಅಜ್ಲಾ ಟಾಮ್ಲಜಾviliನೊವಿಚ್ ವಿರುದ್ಧ ೭-೫, ೬-೭(೪), ೬-೧ರ ಅಂತರದಲ್ಲಿ ಪರಾಭವಗೊಳ್ಳುವ ಮೂಲಕ ತಮ್ಮ ಟೆನ್ನಿಸ್ ಪಯಣವನ್ನು ಅಂತ್ಯಗೊಳಿಸಿದರು.

ಸೆರೆನಾ ಸಾಗಿದ ಹಾದಿ…

* ೧೯೯೫ರಲ್ಲಿ ೧೪ನೇ ವಯಸ್ಸಿಗೆ ವೃತ್ತಿ ಜೀವನ ಆರಂಭ
* ೨೩ ಸಿಂಗಲ್ಸ್ ಗ್ರ್ಯಾನ್‌ಸ್ಲ್ಯಾಮ್ ಕಿರೀಟಗಳ ಒಡತಿ
* ಆಸ್ಟ್ರೇಲಿಯಾದ ಮಾರ್ಗರೇಟ್ ಕೋರ್ಟ್ (೨೪) ಬಳಿಕ
ಮಹಿಳಾ ಸಿಂಗಲ್ಸ್ ಗ್ರ್ಯಾನ್‌ಸ್ಲಾಮ್ ಅತಿ ಹೆಚ್ಚು ಪ್ರಶಸ್ತಿ
* ‘ಕೆರಿಯರ್ ಗ್ರ್ಯಾನ್‌ಸ್ಲ್ಯಾಮ್’ ಸಾಧನೆಯ ವಿಶ್ವದ ಮೊದಲ ಆಟಗಾರ್ತಿ
* ಏಳು ಬಾರಿ ಆಸ್ಟ್ರೇಲಿಯನ್ ಓಪನ್ ಹಾಗೂ ವಿಂಬಲ್ಡನ್
* ಆರು ಬಾರಿ ಅಮೆರಿಕನ್ ಓಪನ್ ಪ್ರಶಸ್ತಿ
* ಮೂರು ಸಲ ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲ್ಯಾಮ್ ಪ್ರಶಸ್ತಿ
* ೧೯೯೯ರಲ್ಲಿ ಮೊದಲ ಗ್ರ್ಯಾನ್ಸ್ಲಾಮ್ (ಅಮೆರಿಕನ್ ಓಪನ್)
* ಅಲ್ಲಿಂದ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅಧಿಪತ್ಯ
* ಮಹಿಳಾ ಡಬಲ್ಸ್ ವಿಭಾಗದಲ್ಲಿ ೧೪ ಗ್ರ್ಯಾನ್‌ಸ್ಲ್ಯಾಮ್ ಪ್ರಶಸ್ತಿ
* ೨೦೧೨ರ ಲಂಡನ್ ಒಲಿಂಪಿಕ್ಸ್ ಮಹಿಳಾ ವಿಭಾಗದಲ್ಲಿ ಚಿನ್ನದ ಪದಕ
* ಒಲಿಂಪಿಕ್ಸ್‌ನ ಮಹಿಳಾ ಡಬಲ್ಸ್‌ನಲ್ಲಿ ಮೂರು ಬಾರಿ ಸ್ವರ್ಣ ಪದಕ

ಗ್ರ್ಯಾನ್‌ಸ್ಲ್ಯಾಮ್ ಸಾಧನೆ (ಮಹಿಳಾ ಸಿಂಗಲ್ಸ್)
ಆಸ್ಟ್ರೇಲಿಯನ್ ಓಪನ್ (೨೦೦೩, ೨೦೦೫, ೨೦೦೭, ೨೦೦೯, ೨೦೧೦, ೨೦೧೫, ೨೦೧೭)
ಫ್ರೆಂಚ್ ಓಪನ್ (೨೦೦೨, ೨೦೧೩, ೨೦೧೫)
ವಿಂಬಲ್ಡನ್ (೨೦೦೨, ೨೦೦೩, ೨೦೦೯, ೨೦೧೦, ೨೦೧೨, ೨೦೧೫, ೨೦೧೬)
ಅಮೆರಿಕನ್ ಓಪನ್ (೧೯೯೯, ೨೦೦೨, ೨೦೦೮, ೨೦೧೨, ೨೦೧೩, ೨೦೧೪)

andolanait

Recent Posts

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

13 seconds ago

ಉನ್ನಾವೋ ಅತ್ಯಾಚಾರ ಕೇಸ್:‌ ಆರೋಪಿ ಕುಲದೀಪ್‌ ಸಿಂಗ್‌ ಸೆಂಗರ್‌ ಜಾಮೀನಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…

22 mins ago

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

35 mins ago

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ : ಯಾವುದು ನಂಬರ್‌ ಒನ್‌ ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…

1 hour ago

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…

1 hour ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ…

2 hours ago