ಕ್ರೀಡೆ

ಅಭಿಮಾನಿಗಳಿಗೆ ಶಾಕ್‌ ನೀಡಿದ ಸೆರೆನಾ ವಿಲಿಯಮ್ಸ್ ದುಡುಕಿನ ನಿರ್ಧಾರ

ನ್ಯೂಯಾರ್ಕ್: ತವರಿನಲ್ಲಿ ನಡೆಯುತ್ತಿರುವ ಅಮೆರಿಕನ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಸೋಲಿನೊಂದಿಗೆ ಸೆರೆನಾ ವಿಲಿಯಮ್ಸ್ ವೃತ್ತಿ ಜೀವನಕ್ಕೆ ಶನಿವಾರ ವಿದಾಯ ಹೇಳಿದರು.
ವಿಶ್ವದ ಶ್ರೇಷ್ಠ ಟೆನಿಸ್ ಆಟಗಾರ್ತಿ ಅಮೆರಿಕದ ಸೆರೆನಾ ವಿಲಿಯಮ್ಸ್, ಮಹಿಳೆಯರ ಸಿಂಗಲ್ಸ್ ಮೂರನೇ ಸುತ್ತಿನ ಪಂದ್ಯದಲ್ಲಿ ೪೬ನೇ ಶ್ರೇಯಾಂಕದ ಆಸ್ಟ್ರೇಲಿಯಾದ ಅಜ್ಲಾ ಟಾಮ್ಲಜಾviliನೊವಿಚ್ ವಿರುದ್ಧ ೭-೫, ೬-೭(೪), ೬-೧ರ ಅಂತರದಲ್ಲಿ ಪರಾಭವಗೊಳ್ಳುವ ಮೂಲಕ ತಮ್ಮ ಟೆನ್ನಿಸ್ ಪಯಣವನ್ನು ಅಂತ್ಯಗೊಳಿಸಿದರು.

ಸೆರೆನಾ ಸಾಗಿದ ಹಾದಿ…

* ೧೯೯೫ರಲ್ಲಿ ೧೪ನೇ ವಯಸ್ಸಿಗೆ ವೃತ್ತಿ ಜೀವನ ಆರಂಭ
* ೨೩ ಸಿಂಗಲ್ಸ್ ಗ್ರ್ಯಾನ್‌ಸ್ಲ್ಯಾಮ್ ಕಿರೀಟಗಳ ಒಡತಿ
* ಆಸ್ಟ್ರೇಲಿಯಾದ ಮಾರ್ಗರೇಟ್ ಕೋರ್ಟ್ (೨೪) ಬಳಿಕ
ಮಹಿಳಾ ಸಿಂಗಲ್ಸ್ ಗ್ರ್ಯಾನ್‌ಸ್ಲಾಮ್ ಅತಿ ಹೆಚ್ಚು ಪ್ರಶಸ್ತಿ
* ‘ಕೆರಿಯರ್ ಗ್ರ್ಯಾನ್‌ಸ್ಲ್ಯಾಮ್’ ಸಾಧನೆಯ ವಿಶ್ವದ ಮೊದಲ ಆಟಗಾರ್ತಿ
* ಏಳು ಬಾರಿ ಆಸ್ಟ್ರೇಲಿಯನ್ ಓಪನ್ ಹಾಗೂ ವಿಂಬಲ್ಡನ್
* ಆರು ಬಾರಿ ಅಮೆರಿಕನ್ ಓಪನ್ ಪ್ರಶಸ್ತಿ
* ಮೂರು ಸಲ ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲ್ಯಾಮ್ ಪ್ರಶಸ್ತಿ
* ೧೯೯೯ರಲ್ಲಿ ಮೊದಲ ಗ್ರ್ಯಾನ್ಸ್ಲಾಮ್ (ಅಮೆರಿಕನ್ ಓಪನ್)
* ಅಲ್ಲಿಂದ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅಧಿಪತ್ಯ
* ಮಹಿಳಾ ಡಬಲ್ಸ್ ವಿಭಾಗದಲ್ಲಿ ೧೪ ಗ್ರ್ಯಾನ್‌ಸ್ಲ್ಯಾಮ್ ಪ್ರಶಸ್ತಿ
* ೨೦೧೨ರ ಲಂಡನ್ ಒಲಿಂಪಿಕ್ಸ್ ಮಹಿಳಾ ವಿಭಾಗದಲ್ಲಿ ಚಿನ್ನದ ಪದಕ
* ಒಲಿಂಪಿಕ್ಸ್‌ನ ಮಹಿಳಾ ಡಬಲ್ಸ್‌ನಲ್ಲಿ ಮೂರು ಬಾರಿ ಸ್ವರ್ಣ ಪದಕ

ಗ್ರ್ಯಾನ್‌ಸ್ಲ್ಯಾಮ್ ಸಾಧನೆ (ಮಹಿಳಾ ಸಿಂಗಲ್ಸ್)
ಆಸ್ಟ್ರೇಲಿಯನ್ ಓಪನ್ (೨೦೦೩, ೨೦೦೫, ೨೦೦೭, ೨೦೦೯, ೨೦೧೦, ೨೦೧೫, ೨೦೧೭)
ಫ್ರೆಂಚ್ ಓಪನ್ (೨೦೦೨, ೨೦೧೩, ೨೦೧೫)
ವಿಂಬಲ್ಡನ್ (೨೦೦೨, ೨೦೦೩, ೨೦೦೯, ೨೦೧೦, ೨೦೧೨, ೨೦೧೫, ೨೦೧೬)
ಅಮೆರಿಕನ್ ಓಪನ್ (೧೯೯೯, ೨೦೦೨, ೨೦೦೮, ೨೦೧೨, ೨೦೧೩, ೨೦೧೪)

andolanait

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

9 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

11 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

15 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

19 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

22 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

22 hours ago