ಕ್ರೀಡೆ

ಎಂಎಸ್‌ ಧೋನಿ 43ನೇ ಹುಟ್ಟು ಹಬ್ಬ: ಕ್ಯಾಪ್ಟನ್‌ ಕೂಲ್‌ನ ಅಳಿಸಲಾಗದ 7 ದಾಖಲೆಗಳಿವು

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರು ಜನ್ಮದಿನವಿಂದು. ಭಾರತ ತಂಡದ ಯಶಸ್ವಿ ನಾಯಕನಾಗಿ ಗುರುತಿಸಿಕೊಂಡ ಇವರು ಇಂದು (ಜುಲೈ.7) 43ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ.

ಟೀಂ ಇಂಡಿಯಾ ಪರವಾಗಿ 15 ವರ್ಷಗಳ ಕಾಲ ಆಟವಾಡಿರುವ ಮಹಿ, ತನ್ನ ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಹಲವಾರು ವಿಶ್ವ ದಾಖಲೆಗಳನ್ನು ಬರೆದಿದ್ದಾರೆ. ಜುಲೈ.7 1981ರಂದು ಜನಿಸಿದ ಧೋನಿ ಅವರು ತಮ್ಮ ಜೆರ್ಸಿ ಮೇಲೆ 7 ನಂಬರ್‌ ಹಾಖಿಸಿಕೊಂಡಿರುವ ಇವರು, ತಮ್ಮ ಸಾರ್ವಕಾಲಿಕ ಕ್ರಿಕೆಟ್‌ ಜೀವನದಲ್ಲಿ ಮುರಿಯಲಾಗದ ಧೋನಿ ಅವರ ದಾಖಲೆಗಳಿವು.

1. ಟ್ರೋಫಿ ಮಾಸ್ಟರ್‌: ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಐಸಿಸಿ ನಡೆಸುವ ಪ್ರತಿಷ್ಠಿತ ಮೂರು ಟ್ರೋಫಿಗಳನ್ನು ಗೆದ್ದ ಏಕೈಕ ನಾಯಕ ಎಂಬ ಸಾರ್ವಕಾಲಿಕ ದಾಖಲೆ ಎಂಎಸ್‌ ಧೋನಿ ಹೆಸರಿನಲ್ಲಿದೆ. ಎಂಎಸ್‌ ಧೋನಿ ಅವರು, 2007ರಲ್ಲಿ ಟಿ20 ವಿಶ್ವಕಪ್‌, 2011ರಲ್ಲಿ ಏಕದಿನ ವಿಶ್ವಕಪ್‌ ಹಾಗೂ 2013ರಲ್ಲಿ ಚಾಂಪಿಯನ್ಸ್‌ ಟ್ರೋಫಿ ಗೆಲ್ಲುವ ಮೂಲಕ ಈ ದಾಖಲೆಯನ್ನು ಧೋನಿ ಬರೆದಿದ್ದಾರೆ.

2. ವಿಕೇಟ್‌ ಕೀಪರ್‌ ಆಗಿ ದಾಖಲೆ: ಎಂ ಎಸ್‌ ಧೋನಿ ವಿಕೆಟ್‌ ಕೀಪರ್‌ ಆಗಿ ಅತಿಹೆಚ್ಚು ವಿಕೆಟ್‌ ಪಡೆದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಐಪಿಎಲ್‌ನಲ್ಲಿ ಚೆನ್ನೈಸೂಪರ್‌ ಕಿಂಗ್ಸ್‌ ಪರವಾಗಿ 148 ಕ್ಯಾಚ್‌, 42 ಸ್ಟಂಪಿಂಗ್‌ ಸಹಿತ 190 ವಿಕೆಟ್‌ ಕಬಳಿಸಿದ ದಾಖಲೆ ಬರೆದಿದ್ದಾರೆ.

3. ಏಳನೇ ಕ್ರಮಾಂಕದಲ್ಲಿ 2 ಶತಕ ದಾಖಲೆ: ಟೀಂ ಇಂಡಿಯಾ ಪರವಾಗಿ ಏಳು ಅಥವಾ ಅದಕ್ಕಿಂತ ಕಡಿಮೆ ಕ್ರಮಾಂಕದಲ್ಲಿ 2 ಶತಕ ದಾಖಲಿಸಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆ ಧೋನಿ ಅವರ ಪಾಲಾಗಿದೆ. ಈ ಕ್ರಮಾಂಕದಲ್ಲಿ ಒಂದಕ್ಕಿಂತ ಹೆಚ್ಚು ಶತಕ ದಾಖಲಿಸಿದ ಏಕೈಕ ಆಟಗಾರ ಎಂ.ಎಸ್‌ ಧೋನಿ ಆಗಿದ್ದಾರೆ.

4. ಅತಿಹೆಚ್ಚು ಪಂದ್ಯಗಳಿಗೆ ನಾಯಕ: ಇನ್ನು ತಂಡವೊಂದನ್ನು ಅತಿಹೆಚ್ಚು ಪಂದ್ಯಗಳಲ್ಲಿ ಮುನ್ನಡೆಸಿದ ನಾಯಕ ಎಂಬ ಹಿರಿಮೆ ಧೋನಿ ಪಾಲಾಗಿದೆ. ಅವರು ಟೀಂ ಇಂಡಿಯಾವನ್ನು 200 ಏಕದಿನ, 70 ಟೆಸ್ಟ್‌ ಹಾಗೂ 72 ಟಿ20 ಪಂದ್ಯಗಳು ಸೇರಿ 332 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಆ ಮೂಲಕ ತಂಡವೊಂದನ್ನು ಹೆಚ್ಚು ಪಂದ್ಯಗಳಲ್ಲಿ ಮುನ್ನಡೆಸಿದ ವಿಶ್ವ ದಾಖಲೆಯನ್ನು ಧೋನಿ ಹೊಂದಿದ್ದಾರೆ.

5. ಅರ್ಧಶತಕ ದಾಖಲೆ: ಐಪಿಎಲ್‌ನಲ್ಲಿ ಐದು ವಿಭಿನ್ನ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿ ಅರ್ಧಶತಕ ದಾಖಲಿಸಿರು ಎಂಎಸ್‌ ಧೋನಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅವರು ಮೂರು, ನಾಲ್ಕು, ಐದು, ಆರು ಮತ್ತು ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ.

6.ಡೆತ್‌ ಓವರ್‌ನಲ್ಲಿ ಅತಿಹೆಚ್ಚು ರನ್‌: ಐಪಿಎಲ್‌ನಲ್ಲಿ ಸಿಎಸ್‌ಕೆ ಪರ ಕಣಕ್ಕಿಳಿದು, 229 ಇನ್ನಿಂಗ್ಸ್‌ ನಲ್ಲಿ ಡೆಟ್‌ ಓವರ್‌ನಲ್ಲಿ 667 ರನ್‌ ಬಾರಿಸಿದ್ದಾರೆ.

7. ಅತಿಹೆಚ್ಚು ಬಾರಿ ಅಜೇಯರಾಗಿ ಉಳಿದಿರುವುದು: ಟೀಂ ಇಂಡಿಯಾದ ಬೆಸ್ಟ್‌ ಫಿನಿಷರ್‌ ಆಗಿರುವ ಧೋನಿ ಅವರು ಒಟ್ಟಾರೆಯಾಗಿ 84 ಇನ್ನಿಂಗ್ಸ್‌ನಲ್ಲಿ ನಾಟ್‌ ಔಟ್‌ ಆಗಿ ಉಳಿದು ಈ ದಾಖಲೆ ಬರೆದಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

2 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

2 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

2 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

2 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

2 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

4 hours ago