ಕ್ರೀಡೆ

ಎಂಎಸ್‌ ಧೋನಿ 43ನೇ ಹುಟ್ಟು ಹಬ್ಬ: ಕ್ಯಾಪ್ಟನ್‌ ಕೂಲ್‌ನ ಅಳಿಸಲಾಗದ 7 ದಾಖಲೆಗಳಿವು

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರು ಜನ್ಮದಿನವಿಂದು. ಭಾರತ ತಂಡದ ಯಶಸ್ವಿ ನಾಯಕನಾಗಿ ಗುರುತಿಸಿಕೊಂಡ ಇವರು ಇಂದು (ಜುಲೈ.7) 43ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ.

ಟೀಂ ಇಂಡಿಯಾ ಪರವಾಗಿ 15 ವರ್ಷಗಳ ಕಾಲ ಆಟವಾಡಿರುವ ಮಹಿ, ತನ್ನ ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಹಲವಾರು ವಿಶ್ವ ದಾಖಲೆಗಳನ್ನು ಬರೆದಿದ್ದಾರೆ. ಜುಲೈ.7 1981ರಂದು ಜನಿಸಿದ ಧೋನಿ ಅವರು ತಮ್ಮ ಜೆರ್ಸಿ ಮೇಲೆ 7 ನಂಬರ್‌ ಹಾಖಿಸಿಕೊಂಡಿರುವ ಇವರು, ತಮ್ಮ ಸಾರ್ವಕಾಲಿಕ ಕ್ರಿಕೆಟ್‌ ಜೀವನದಲ್ಲಿ ಮುರಿಯಲಾಗದ ಧೋನಿ ಅವರ ದಾಖಲೆಗಳಿವು.

1. ಟ್ರೋಫಿ ಮಾಸ್ಟರ್‌: ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಐಸಿಸಿ ನಡೆಸುವ ಪ್ರತಿಷ್ಠಿತ ಮೂರು ಟ್ರೋಫಿಗಳನ್ನು ಗೆದ್ದ ಏಕೈಕ ನಾಯಕ ಎಂಬ ಸಾರ್ವಕಾಲಿಕ ದಾಖಲೆ ಎಂಎಸ್‌ ಧೋನಿ ಹೆಸರಿನಲ್ಲಿದೆ. ಎಂಎಸ್‌ ಧೋನಿ ಅವರು, 2007ರಲ್ಲಿ ಟಿ20 ವಿಶ್ವಕಪ್‌, 2011ರಲ್ಲಿ ಏಕದಿನ ವಿಶ್ವಕಪ್‌ ಹಾಗೂ 2013ರಲ್ಲಿ ಚಾಂಪಿಯನ್ಸ್‌ ಟ್ರೋಫಿ ಗೆಲ್ಲುವ ಮೂಲಕ ಈ ದಾಖಲೆಯನ್ನು ಧೋನಿ ಬರೆದಿದ್ದಾರೆ.

2. ವಿಕೇಟ್‌ ಕೀಪರ್‌ ಆಗಿ ದಾಖಲೆ: ಎಂ ಎಸ್‌ ಧೋನಿ ವಿಕೆಟ್‌ ಕೀಪರ್‌ ಆಗಿ ಅತಿಹೆಚ್ಚು ವಿಕೆಟ್‌ ಪಡೆದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಐಪಿಎಲ್‌ನಲ್ಲಿ ಚೆನ್ನೈಸೂಪರ್‌ ಕಿಂಗ್ಸ್‌ ಪರವಾಗಿ 148 ಕ್ಯಾಚ್‌, 42 ಸ್ಟಂಪಿಂಗ್‌ ಸಹಿತ 190 ವಿಕೆಟ್‌ ಕಬಳಿಸಿದ ದಾಖಲೆ ಬರೆದಿದ್ದಾರೆ.

3. ಏಳನೇ ಕ್ರಮಾಂಕದಲ್ಲಿ 2 ಶತಕ ದಾಖಲೆ: ಟೀಂ ಇಂಡಿಯಾ ಪರವಾಗಿ ಏಳು ಅಥವಾ ಅದಕ್ಕಿಂತ ಕಡಿಮೆ ಕ್ರಮಾಂಕದಲ್ಲಿ 2 ಶತಕ ದಾಖಲಿಸಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆ ಧೋನಿ ಅವರ ಪಾಲಾಗಿದೆ. ಈ ಕ್ರಮಾಂಕದಲ್ಲಿ ಒಂದಕ್ಕಿಂತ ಹೆಚ್ಚು ಶತಕ ದಾಖಲಿಸಿದ ಏಕೈಕ ಆಟಗಾರ ಎಂ.ಎಸ್‌ ಧೋನಿ ಆಗಿದ್ದಾರೆ.

4. ಅತಿಹೆಚ್ಚು ಪಂದ್ಯಗಳಿಗೆ ನಾಯಕ: ಇನ್ನು ತಂಡವೊಂದನ್ನು ಅತಿಹೆಚ್ಚು ಪಂದ್ಯಗಳಲ್ಲಿ ಮುನ್ನಡೆಸಿದ ನಾಯಕ ಎಂಬ ಹಿರಿಮೆ ಧೋನಿ ಪಾಲಾಗಿದೆ. ಅವರು ಟೀಂ ಇಂಡಿಯಾವನ್ನು 200 ಏಕದಿನ, 70 ಟೆಸ್ಟ್‌ ಹಾಗೂ 72 ಟಿ20 ಪಂದ್ಯಗಳು ಸೇರಿ 332 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಆ ಮೂಲಕ ತಂಡವೊಂದನ್ನು ಹೆಚ್ಚು ಪಂದ್ಯಗಳಲ್ಲಿ ಮುನ್ನಡೆಸಿದ ವಿಶ್ವ ದಾಖಲೆಯನ್ನು ಧೋನಿ ಹೊಂದಿದ್ದಾರೆ.

5. ಅರ್ಧಶತಕ ದಾಖಲೆ: ಐಪಿಎಲ್‌ನಲ್ಲಿ ಐದು ವಿಭಿನ್ನ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿ ಅರ್ಧಶತಕ ದಾಖಲಿಸಿರು ಎಂಎಸ್‌ ಧೋನಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅವರು ಮೂರು, ನಾಲ್ಕು, ಐದು, ಆರು ಮತ್ತು ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ.

6.ಡೆತ್‌ ಓವರ್‌ನಲ್ಲಿ ಅತಿಹೆಚ್ಚು ರನ್‌: ಐಪಿಎಲ್‌ನಲ್ಲಿ ಸಿಎಸ್‌ಕೆ ಪರ ಕಣಕ್ಕಿಳಿದು, 229 ಇನ್ನಿಂಗ್ಸ್‌ ನಲ್ಲಿ ಡೆಟ್‌ ಓವರ್‌ನಲ್ಲಿ 667 ರನ್‌ ಬಾರಿಸಿದ್ದಾರೆ.

7. ಅತಿಹೆಚ್ಚು ಬಾರಿ ಅಜೇಯರಾಗಿ ಉಳಿದಿರುವುದು: ಟೀಂ ಇಂಡಿಯಾದ ಬೆಸ್ಟ್‌ ಫಿನಿಷರ್‌ ಆಗಿರುವ ಧೋನಿ ಅವರು ಒಟ್ಟಾರೆಯಾಗಿ 84 ಇನ್ನಿಂಗ್ಸ್‌ನಲ್ಲಿ ನಾಟ್‌ ಔಟ್‌ ಆಗಿ ಉಳಿದು ಈ ದಾಖಲೆ ಬರೆದಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

5 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

6 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

6 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

7 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

7 hours ago