ಕ್ರೀಡೆ

ಪಠಾಣ್‌ ಚಿತ್ರದ ಜನಪ್ರಿಯ ಹಾಡಿಗೆ ಹೆಜ್ಜೆ ಹಾಕಿದ ಶಾರುಕ್‌ ಖಾನ್‌–ವಿರಾಟ್‌ ಕೊಹ್ಲಿ

ಕೋಲ್ಕತ್ತ : ಬಾಲಿವುಡ್‌ ಬ್ಲಾಕ್‌ ಬಾಸ್ಟರ್‌ ಚಿತ್ರ ‘ಪಠಾಣ್‌’ ಹಾಡಿಗೆ ಶಾರುಕ್ ಖಾನ್‌ ಹಾಗೂ ವಿರಾಟ್‌ ಕೊಹ್ಲಿ ಕ್ರಿಕೆಟ್‌ ಮೈದಾನದಲ್ಲಿ ಹೆಜ್ಜೆ ಹಾಕಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇಬ್ಬರು ದಿಗ್ಗಜರು ಒಟ್ಟಿಗೆ ಹೆಜ್ಜೆ ಹಾಕಿರುವುದನ್ನು ಕಂಡು ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ಧಾರೆ.

ಗುರುವಾರ ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ನಲ್ಲಿ ಆರ್‌ಸಿಬಿ ಮತ್ತು ಶಾರುಕ್‌ ಒಡೆತನದ ಕೋಲ್ಕತ್ತ ನೈಟ್‌ ರೈಡರ್ಸ್‌ (ಕೆಕೆಆರ್‌) ನಡುವೆ ಪಂದ್ಯ ನಡೆದಿತ್ತು. ಕೆಕೆಆರ್‌ ತಂಡ 81 ರನ್‌ಗಳಲ್ಲಿ ಆರ್‌ಸಿಬಿಯನ್ನು ಮಣಿಸಿತ್ತು.

ತಂಡ ಗೆದ್ದ ಖುಷಿಯಲ್ಲಿ ಶಾರುಕ್‌ ತೇಲಾಡಿದ್ದು. ತಮ್ಮ ಬ್ಲಾಕ್‌ಬಾಸ್ಟರ್‌ ‘ಪಠಾಣ್‌‘ ಚಿತ್ರದ ಜನಪ್ರಿಯ ಹಾಡು ‘ಜೂಮ್ ಜೋ ಪಠಾಣ್‌‘ ಹಾಡಿಗೆ ನೃತ್ಯ ಮಾಡಿದ್ದಾರೆ. ಈ ವೇಳೆ ಆರ್‌ಸಿಬಿ ನಾಯಕ ವಿರಾಟ್‌ ಕೊಹ್ಲಿಗೂ ನೃತ್ಯ ಮಾಡುವಂತೆ ಹೇಳಿದ್ದಾರೆ. ಶಾರುಕ್‌ ಹೇಳಿಕೊಟ್ಟಂತೆ ಹಾಡಿನ ‘ಹುಕ್‌ ಸ್ಟೆಪ್‌‘ ಹಾಕಲು ವಿರಾಟ್‌ ಪ್ರಯತ್ನಿಸಿದ್ದಾರೆ. ವಿರಾಟ್‌ನ ಕೆನ್ನೆ ಹಿಡಿದು ಶಾರುಕ್‌ ಮಾತನಾಡಿಸುತ್ತಿರುವುದನ್ನು ನೋಡಿ ಅಭಿಮಾನಿಗಳು ಇನ್ನಷ್ಟು ಖುಷಿಪಟ್ಟಿದ್ದಾರೆ.

ಗುರುವಾರ ನಡೆದ ಪಂದ್ಯದಲ್ಲಿ ಕೆಕೆಆರ್‌ ಉತ್ತಮ ಪ್ರರ್ದಶನ ನೀಡಿದ್ದು, ಶಾರ್ದುಲ್‌ ಠಾಕೂರ್‌ 29 ಎಸೆತಗಳಿಗೆ 68 ರನ್‌ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದಾರೆ. 2019ರ ನಂತರ ಇದೇ ಮೊದಲ ಬಾರಿಗೆ ಕೆಕೆಆರ್‌ ತನ್ನ ತವರು ನೆಲದಲ್ಲಿ ಆಡಿ ಪಂದ್ಯ ಗೆದ್ದಿರುವುದಕ್ಕೆ ಶಾರುಕ್‌ ಖಾನ್‌ ತಂಡದ ನಾಯಕ ನಿತೀಶ್‌ ರಾಣಾ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ಪಂದ್ಯದ ವೇಳೆ ಶಾರುಕ್‌ ಖಾನ್‌ ಪುತ್ರಿ ಸುಹಾನ ಖಾನ್‌, ಬಾಲಿವುಡ್‌ ನಟಿ ಹಾಗೂ ಕೆಕೆಆರ್‌ನ ಸಹ ಸಂಸ್ಥಾಪಕಿ ಜೂಹಿ ಚಾವ್ಲಾ ಉಪಸ್ಥಿತರಿದ್ದರು.

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

2 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

3 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

4 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

4 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

5 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago