ಕೋಲ್ಕತ್ತ : ಬಾಲಿವುಡ್ ಬ್ಲಾಕ್ ಬಾಸ್ಟರ್ ಚಿತ್ರ ‘ಪಠಾಣ್’ ಹಾಡಿಗೆ ಶಾರುಕ್ ಖಾನ್ ಹಾಗೂ ವಿರಾಟ್ ಕೊಹ್ಲಿ ಕ್ರಿಕೆಟ್ ಮೈದಾನದಲ್ಲಿ ಹೆಜ್ಜೆ ಹಾಕಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇಬ್ಬರು ದಿಗ್ಗಜರು ಒಟ್ಟಿಗೆ ಹೆಜ್ಜೆ ಹಾಕಿರುವುದನ್ನು ಕಂಡು ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ಧಾರೆ.
ಗುರುವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಆರ್ಸಿಬಿ ಮತ್ತು ಶಾರುಕ್ ಒಡೆತನದ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ನಡುವೆ ಪಂದ್ಯ ನಡೆದಿತ್ತು. ಕೆಕೆಆರ್ ತಂಡ 81 ರನ್ಗಳಲ್ಲಿ ಆರ್ಸಿಬಿಯನ್ನು ಮಣಿಸಿತ್ತು.
ತಂಡ ಗೆದ್ದ ಖುಷಿಯಲ್ಲಿ ಶಾರುಕ್ ತೇಲಾಡಿದ್ದು. ತಮ್ಮ ಬ್ಲಾಕ್ಬಾಸ್ಟರ್ ‘ಪಠಾಣ್‘ ಚಿತ್ರದ ಜನಪ್ರಿಯ ಹಾಡು ‘ಜೂಮ್ ಜೋ ಪಠಾಣ್‘ ಹಾಡಿಗೆ ನೃತ್ಯ ಮಾಡಿದ್ದಾರೆ. ಈ ವೇಳೆ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿಗೂ ನೃತ್ಯ ಮಾಡುವಂತೆ ಹೇಳಿದ್ದಾರೆ. ಶಾರುಕ್ ಹೇಳಿಕೊಟ್ಟಂತೆ ಹಾಡಿನ ‘ಹುಕ್ ಸ್ಟೆಪ್‘ ಹಾಕಲು ವಿರಾಟ್ ಪ್ರಯತ್ನಿಸಿದ್ದಾರೆ. ವಿರಾಟ್ನ ಕೆನ್ನೆ ಹಿಡಿದು ಶಾರುಕ್ ಮಾತನಾಡಿಸುತ್ತಿರುವುದನ್ನು ನೋಡಿ ಅಭಿಮಾನಿಗಳು ಇನ್ನಷ್ಟು ಖುಷಿಪಟ್ಟಿದ್ದಾರೆ.
ಗುರುವಾರ ನಡೆದ ಪಂದ್ಯದಲ್ಲಿ ಕೆಕೆಆರ್ ಉತ್ತಮ ಪ್ರರ್ದಶನ ನೀಡಿದ್ದು, ಶಾರ್ದುಲ್ ಠಾಕೂರ್ 29 ಎಸೆತಗಳಿಗೆ 68 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದಾರೆ. 2019ರ ನಂತರ ಇದೇ ಮೊದಲ ಬಾರಿಗೆ ಕೆಕೆಆರ್ ತನ್ನ ತವರು ನೆಲದಲ್ಲಿ ಆಡಿ ಪಂದ್ಯ ಗೆದ್ದಿರುವುದಕ್ಕೆ ಶಾರುಕ್ ಖಾನ್ ತಂಡದ ನಾಯಕ ನಿತೀಶ್ ರಾಣಾ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ಪಂದ್ಯದ ವೇಳೆ ಶಾರುಕ್ ಖಾನ್ ಪುತ್ರಿ ಸುಹಾನ ಖಾನ್, ಬಾಲಿವುಡ್ ನಟಿ ಹಾಗೂ ಕೆಕೆಆರ್ನ ಸಹ ಸಂಸ್ಥಾಪಕಿ ಜೂಹಿ ಚಾವ್ಲಾ ಉಪಸ್ಥಿತರಿದ್ದರು.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…