ಕ್ರೀಡೆ

ಅಪಘಾತಕ್ಕೀಡಾದವರ ರಕ್ಷಣೆ ಮಾಡಿ ಮಾನವೀಯತೆ ಮೆರೆದ ಶಮಿ

ನವದೆಹಲಿ : ಟೀಂ ಇಂಡಿಯಾದ ಸ್ಟಾರ್‌ ಆಟಗಾರ ಮೊಹಮ್ಮದ್‌ ಶಮಿ ಅಪಘಾತಕ್ಕೀಡಾದ ವ್ಯಕ್ತಿಯ ರಕ್ಷಣೆ ಮಾಡಿದ್ದಾರೆ.

ಉತ್ತರಾಖಂಡದ ನೈನಿತಾಲ್‌ನ ಕಣಿವೆಯೋದರ ಬಳಿ ಕಾರೋಂದು ಅಫಘಾತಕ್ಕೀಡಾಗಿದೆ. ಅದೇ ದಾರಿಯಲ್ಲಿ ಸಾಗುತ್ತಿದ್ದ ಶಮಿಯವರು ಇದನ್ನು ಗಮನಿಸಿದ್ದು, ಆಪಘಾತಕ್ಕೆ ಸಿಲುಕಿ ಒದ್ದಾಡುತ್ತಿದ್ದವರನ್ನು ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ರಕ್ಷಣೆಯ ವಿಡಿಯೋವನ್ನು ಶಮಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅವರು ತುಂಬಾ ಅದೃಷ್ಟಶಾಲಿ. ದೇವರು ಅವರಿಗೆ 2ನೇ ಜಿವನವನ್ನು ನೀಡಿದ್ದಾನೆ. ಅವರ ಕಾರು ಮೈನಿತಾಲ್‌ ಬಳಿ ಇರುವ ಬೆಟ್ಟದ ರಸ್ತೆಯಿಂದ ನನ್ನ ಕಾರಿನ ಬಳಿ ಬಂದು ಬಿದ್ದಿತ್ತು. ನಾವು ಅವರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದೇವೆ. ಇಂದು ಒಬ್ಬರ ಜೀವವನ್ನು ರಕ್ಷಿಸಿದ ಖುಷಿ ನನಗಿದೆ ಎಂದು ಬರೆದುಕೊಂಡಿದ್ದಾರೆ.

ಶಮಿ ಹಂಚಿಕೊಂಡಿರುವ ವಿಡಿಯೋದಲ್ಲಿ ಬಿಳಿಯ ಬಣ್ಣದ ಕಾರೊಂದು ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ ಅಪಘಾತಕ್ಕೆ ಸಿಲುಕಿದ್ದವರನ್ನು ಶಮಿ ರಕ್ಷಣೆ ಮಾಡಿ ಉಪಚರಿಸುತ್ತಿದ್ದಾರೆ. ಶಮಿ ಅವರ ಈ ಮಾನವೀಯ ಕಾರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶಮಿ ಅವರು ನನಗೆ ಡ್ರೈವಿಂಗ್‌ ಎಂದರೆ ಅಚ್ಚುಮೆಚ್ಚು. ಬೈಕ್‌ ಮತ್ತು ಕಾರ್‌ ಓಡಿಸುವುದೆಂದರೆ ನನಗೆ ಬಹಳಾ ಇಷ್ಟ. ಆದರೇ ಟೀಂ ಇಂಡಿಯಗಾಗಿ ಆಟವಾಡಿದ ನಂತರ ಡ್ರೈವಿಂಗ್‌ ವೇಳೆ ನಾನೇನಾದರೂ ಗಾಯಗೊಂಡರೆ ಎಂಬ ಭಯ ಕಾಡಿತ್ತು. ಅಂದಿನಿಂದ ಬೈಕ್‌ ಓಡಿಸುವುದನ್ನು ಬಿಟ್ಟೆ ಎಂದು ಹೇಳಿಕೊಂಡಿದ್ದರು.

ಶಮಿ ಅವರು ಕಡು ಬಡತನದಲ್ಲಿ ಹುಟ್ಟಿ ಬೆಳೆದು ಸಾಧನೆಯ ಶಿಖರವೇರಿದ ಅಪ್ರತಿಮ ಪ್ರತಿಭೆ. ಬದುಕಿನ ಏಳು ಬೀಳಿನಿಂದ ನೊಂದು ಸಾವಿನ ಹಾದಿ ಹಿಡಿಯಲು ಹೊರಟಿದ್ದ ಶಮಿ ಇದೀಗ ತನ್ನ ಅತ್ಯದ್ಭುತ ಪ್ರತಿಭೆಯಿಂದಲೇ ಹೊಸ ಜೀವನ ಕಂಡುಕೊಂಡಿದ್ದಾರೆ.

lokesh

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

53 mins ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

55 mins ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

57 mins ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

59 mins ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

1 hour ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

1 hour ago