ಕ್ರೀಡೆ

ಅಪಘಾತಕ್ಕೀಡಾದವರ ರಕ್ಷಣೆ ಮಾಡಿ ಮಾನವೀಯತೆ ಮೆರೆದ ಶಮಿ

ನವದೆಹಲಿ : ಟೀಂ ಇಂಡಿಯಾದ ಸ್ಟಾರ್‌ ಆಟಗಾರ ಮೊಹಮ್ಮದ್‌ ಶಮಿ ಅಪಘಾತಕ್ಕೀಡಾದ ವ್ಯಕ್ತಿಯ ರಕ್ಷಣೆ ಮಾಡಿದ್ದಾರೆ.

ಉತ್ತರಾಖಂಡದ ನೈನಿತಾಲ್‌ನ ಕಣಿವೆಯೋದರ ಬಳಿ ಕಾರೋಂದು ಅಫಘಾತಕ್ಕೀಡಾಗಿದೆ. ಅದೇ ದಾರಿಯಲ್ಲಿ ಸಾಗುತ್ತಿದ್ದ ಶಮಿಯವರು ಇದನ್ನು ಗಮನಿಸಿದ್ದು, ಆಪಘಾತಕ್ಕೆ ಸಿಲುಕಿ ಒದ್ದಾಡುತ್ತಿದ್ದವರನ್ನು ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ರಕ್ಷಣೆಯ ವಿಡಿಯೋವನ್ನು ಶಮಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅವರು ತುಂಬಾ ಅದೃಷ್ಟಶಾಲಿ. ದೇವರು ಅವರಿಗೆ 2ನೇ ಜಿವನವನ್ನು ನೀಡಿದ್ದಾನೆ. ಅವರ ಕಾರು ಮೈನಿತಾಲ್‌ ಬಳಿ ಇರುವ ಬೆಟ್ಟದ ರಸ್ತೆಯಿಂದ ನನ್ನ ಕಾರಿನ ಬಳಿ ಬಂದು ಬಿದ್ದಿತ್ತು. ನಾವು ಅವರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದೇವೆ. ಇಂದು ಒಬ್ಬರ ಜೀವವನ್ನು ರಕ್ಷಿಸಿದ ಖುಷಿ ನನಗಿದೆ ಎಂದು ಬರೆದುಕೊಂಡಿದ್ದಾರೆ.

ಶಮಿ ಹಂಚಿಕೊಂಡಿರುವ ವಿಡಿಯೋದಲ್ಲಿ ಬಿಳಿಯ ಬಣ್ಣದ ಕಾರೊಂದು ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ ಅಪಘಾತಕ್ಕೆ ಸಿಲುಕಿದ್ದವರನ್ನು ಶಮಿ ರಕ್ಷಣೆ ಮಾಡಿ ಉಪಚರಿಸುತ್ತಿದ್ದಾರೆ. ಶಮಿ ಅವರ ಈ ಮಾನವೀಯ ಕಾರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶಮಿ ಅವರು ನನಗೆ ಡ್ರೈವಿಂಗ್‌ ಎಂದರೆ ಅಚ್ಚುಮೆಚ್ಚು. ಬೈಕ್‌ ಮತ್ತು ಕಾರ್‌ ಓಡಿಸುವುದೆಂದರೆ ನನಗೆ ಬಹಳಾ ಇಷ್ಟ. ಆದರೇ ಟೀಂ ಇಂಡಿಯಗಾಗಿ ಆಟವಾಡಿದ ನಂತರ ಡ್ರೈವಿಂಗ್‌ ವೇಳೆ ನಾನೇನಾದರೂ ಗಾಯಗೊಂಡರೆ ಎಂಬ ಭಯ ಕಾಡಿತ್ತು. ಅಂದಿನಿಂದ ಬೈಕ್‌ ಓಡಿಸುವುದನ್ನು ಬಿಟ್ಟೆ ಎಂದು ಹೇಳಿಕೊಂಡಿದ್ದರು.

ಶಮಿ ಅವರು ಕಡು ಬಡತನದಲ್ಲಿ ಹುಟ್ಟಿ ಬೆಳೆದು ಸಾಧನೆಯ ಶಿಖರವೇರಿದ ಅಪ್ರತಿಮ ಪ್ರತಿಭೆ. ಬದುಕಿನ ಏಳು ಬೀಳಿನಿಂದ ನೊಂದು ಸಾವಿನ ಹಾದಿ ಹಿಡಿಯಲು ಹೊರಟಿದ್ದ ಶಮಿ ಇದೀಗ ತನ್ನ ಅತ್ಯದ್ಭುತ ಪ್ರತಿಭೆಯಿಂದಲೇ ಹೊಸ ಜೀವನ ಕಂಡುಕೊಂಡಿದ್ದಾರೆ.

lokesh

Recent Posts

ಓದುಗರ ಪತ್ರ: ಕಲ್ಲಾಗದಿರು ಮಳೆಯೇ!

ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…

17 mins ago

ಓದುಗರ ಪತ್ರ: ಬೆರಳಚ್ಚು ಕಡ್ಡಾಯಗೊಳ್ಳಲಿ

ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…

20 mins ago

ಓದುಗರ ಪತ್ರ: ಒಂದನೇ ತರಗತಿ ಪ್ರವೇಶಕ್ಕೆ ಹಿಂದಿನ ಪದ್ಧತಿಯೇ ಸೂಕ್ತ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…

25 mins ago

ಓದುಗರ ಪತ್ರ: ಎಚ್.ಡಿ.ದೇವೇಗೌಡ ಪತ್ರ ಬರೆದಿರುವುದು ಶ್ಲಾಘನೀಯ

ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…

27 mins ago

ಓದುಗರ ಪತ್ರ: ರಜೆ ಸಮಯ ಮಕ್ಕಳಿಗೆ ಉಪಯುಕ್ತವಾಗಲಿ

ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…

30 mins ago

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

4 hours ago