ನವದೆಹಲಿ : ಟೀಂ ಇಂಡಿಯಾದ ಸ್ಟಾರ್ ಆಟಗಾರ ಮೊಹಮ್ಮದ್ ಶಮಿ ಅಪಘಾತಕ್ಕೀಡಾದ ವ್ಯಕ್ತಿಯ ರಕ್ಷಣೆ ಮಾಡಿದ್ದಾರೆ.
ಉತ್ತರಾಖಂಡದ ನೈನಿತಾಲ್ನ ಕಣಿವೆಯೋದರ ಬಳಿ ಕಾರೋಂದು ಅಫಘಾತಕ್ಕೀಡಾಗಿದೆ. ಅದೇ ದಾರಿಯಲ್ಲಿ ಸಾಗುತ್ತಿದ್ದ ಶಮಿಯವರು ಇದನ್ನು ಗಮನಿಸಿದ್ದು, ಆಪಘಾತಕ್ಕೆ ಸಿಲುಕಿ ಒದ್ದಾಡುತ್ತಿದ್ದವರನ್ನು ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ರಕ್ಷಣೆಯ ವಿಡಿಯೋವನ್ನು ಶಮಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅವರು ತುಂಬಾ ಅದೃಷ್ಟಶಾಲಿ. ದೇವರು ಅವರಿಗೆ 2ನೇ ಜಿವನವನ್ನು ನೀಡಿದ್ದಾನೆ. ಅವರ ಕಾರು ಮೈನಿತಾಲ್ ಬಳಿ ಇರುವ ಬೆಟ್ಟದ ರಸ್ತೆಯಿಂದ ನನ್ನ ಕಾರಿನ ಬಳಿ ಬಂದು ಬಿದ್ದಿತ್ತು. ನಾವು ಅವರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದೇವೆ. ಇಂದು ಒಬ್ಬರ ಜೀವವನ್ನು ರಕ್ಷಿಸಿದ ಖುಷಿ ನನಗಿದೆ ಎಂದು ಬರೆದುಕೊಂಡಿದ್ದಾರೆ.
ಶಮಿ ಹಂಚಿಕೊಂಡಿರುವ ವಿಡಿಯೋದಲ್ಲಿ ಬಿಳಿಯ ಬಣ್ಣದ ಕಾರೊಂದು ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ ಅಪಘಾತಕ್ಕೆ ಸಿಲುಕಿದ್ದವರನ್ನು ಶಮಿ ರಕ್ಷಣೆ ಮಾಡಿ ಉಪಚರಿಸುತ್ತಿದ್ದಾರೆ. ಶಮಿ ಅವರ ಈ ಮಾನವೀಯ ಕಾರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶಮಿ ಅವರು ನನಗೆ ಡ್ರೈವಿಂಗ್ ಎಂದರೆ ಅಚ್ಚುಮೆಚ್ಚು. ಬೈಕ್ ಮತ್ತು ಕಾರ್ ಓಡಿಸುವುದೆಂದರೆ ನನಗೆ ಬಹಳಾ ಇಷ್ಟ. ಆದರೇ ಟೀಂ ಇಂಡಿಯಗಾಗಿ ಆಟವಾಡಿದ ನಂತರ ಡ್ರೈವಿಂಗ್ ವೇಳೆ ನಾನೇನಾದರೂ ಗಾಯಗೊಂಡರೆ ಎಂಬ ಭಯ ಕಾಡಿತ್ತು. ಅಂದಿನಿಂದ ಬೈಕ್ ಓಡಿಸುವುದನ್ನು ಬಿಟ್ಟೆ ಎಂದು ಹೇಳಿಕೊಂಡಿದ್ದರು.
ಶಮಿ ಅವರು ಕಡು ಬಡತನದಲ್ಲಿ ಹುಟ್ಟಿ ಬೆಳೆದು ಸಾಧನೆಯ ಶಿಖರವೇರಿದ ಅಪ್ರತಿಮ ಪ್ರತಿಭೆ. ಬದುಕಿನ ಏಳು ಬೀಳಿನಿಂದ ನೊಂದು ಸಾವಿನ ಹಾದಿ ಹಿಡಿಯಲು ಹೊರಟಿದ್ದ ಶಮಿ ಇದೀಗ ತನ್ನ ಅತ್ಯದ್ಭುತ ಪ್ರತಿಭೆಯಿಂದಲೇ ಹೊಸ ಜೀವನ ಕಂಡುಕೊಂಡಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…